ಭಾರೀ ಗಾಳಿ ಮಳೆ: ಕೃಷಿ, ಮೆಸ್ಕಾಂಗೆ ಅಪಾರ ಹಾನಿ
Team Udayavani, Apr 5, 2022, 10:04 AM IST
ಬೆಳ್ತಂಗಡಿ: ತಾಲೂಕಿನ ಹಲವೆಡೆ ರವಿವಾರ ಸುರಿದ ಗುಡುಗು ಸಹಿತ ಭಾರೀ ಗಾಳಿ ಮಳೆಯ ಪರಿಣಾಮ ಕೃಷಿ ಹಾನಿ ಸಹಿತ ವಿದ್ಯುತ್ ಕಂಬಗಳು ಉರುಳಿ ಮೆಸ್ಕಾಂಗೆ ಭಾರೀ ನಷ್ಟ ಸಂಭವಿಸಿದೆ.
ರವಿವಾರ ಸಂಜೆ ಸ್ವಲ್ಪ ಮಳೆ ಸುರಿದು ನಿಂತಿದ್ದು, ಬಳಿಕ ರಾತ್ರಿ 8.30 ರ ಸುಮಾರಿಗೆ ಭಾರೀ ಮಳೆಯೊಂದಿಗೆ ಬೀಸಿದ ಗಾಳಿಗೆ ನಡ, ನಡ ಗ್ರಾ.ಪಂ. ವ್ಯಾಪ್ತಿಯ ಕನ್ಯಾಡಿ 1 ಗ್ರಾಮದ ಗುರಿಪಳ್ಳದಲ್ಲಿ ಒಂದೇ ಕಡೆ 6 ವಿದ್ಯುತ್ ಕಂಬ ಉರುಳಿದೆ. ಕನ್ಯಾಡಿ-1, ಗುರಿಪಳ್ಳ, ಕಲ್ಮಂಜ, ಮುಂಡಾಜೆ ಸೇರಿದಂತೆ ಹಲವೆಡೆ ಅಡಿಕೆ, ರಬ್ಬರ್ ಮರಗಳು ಮುರಿದು ಬಿದ್ದಿವೆ. ಅಡಿಕೆ ತೋಟ, ರಸ್ತೆ, ವಿದ್ಯುತ್ ಲೈನ್ಗಳ ಮೇಲೆ ಕೂಡ ಮರಗಳು ಉರುಳಿ ಬಿದ್ದಿವೆ.
ಉಜಿರೆ ಮೆಸ್ಕಾಂ ಉಪ ವಿಭಾಗ ವ್ಯಾಪ್ತಿಯಲ್ಲಿ 9 ಎಚ್ಟಿ ಹಾಗೂ 12 ಎಲ್ಟಿ ಕಂಬಗಳು ಗಾಳಿಗೆ ಮುರಿದು ಇಲಾಖೆಗೆ 5 ಲಕ್ಷ ರೂ.ಗಿಂತ ಅಧಿಕ ನಷ್ಟ ಉಂಟಾಗಿದೆ. ಗುರಿಪಳ್ಳ ಸಮೀಪ ಮರವೊಂದು ಲೈನ್ ಮೇಲೆ ಉರುಳಿ 6 ವಿದ್ಯುತ್ ಕಂಬಗಳು ಮುರಿದಿವೆ. ಇದರಿಂದ ಇಂದಬೆಟ್ಟು ರಸ್ತೆ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು. ಸ್ಥಳೀಯರು ಹಾಗೂ ಮೆಸ್ಕಾಂ ಸಕಾಲಿಕವಾಗಿ ಸ್ಪಂದಿಸಿ ರಾತ್ರಿಯೇ ವಾಹನ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿಕೊಟ್ಟರು.
ವಿದ್ಯುತ್ ಪೂರೈಕೆಯಾಗಿಲ್ಲ
ಎಸ್ಸೆಸ್ಸೆಲ್ಸಿ ಸಹಿತ ಹಲವು ತರಗತಿಗಳಿಗೆ ಅಂತಿಮ ಪರೀಕ್ಷೆಗಳು ನಡೆಯುತ್ತಿದ್ದು, ಒಂದೆಡೆ ವಿದ್ಯುತ್ ಕೈಕೊಟ್ಟಿದ್ದು, ಮತ್ತೂಂದೆಡೆ ಸಿಡಿಲಿಗೆ ಹಲವೆಡೆ ಇನ್ವರ್ಟರ್ ಗಳು ಕೆಟ್ಟು ನಿಂತ ಪರಿಣಾಮ ಗ್ರಾಮೀಣ ಭಾಗದ ಮಕ್ಕಳ ಪರೀಕ್ಷೆಗೆ ಅಭ್ಯಾಸ ನಡೆಸಲು ಸಮಸ್ಯೆಯಾಗಿದೆ. ಕೆಲವೆಡೆ ಸೋಮವಾರ ಮಧ್ಯಾಹ್ನದ ಹೊತ್ತಿಗೆ ವಿದ್ಯುತ್ ಬಂದಿದ್ದು, ಹಲವು ಭಾಗಗಳಲ್ಲಿ ದುರಸ್ತಿ ಕಾಮಗಾರಿ ಪ್ರಗತಿಯಲ್ಲಿದ್ದು ಸೋಮವಾರ ಸಮರ್ಪಕ ವಿದ್ಯುತ್ ಪೂರೈಕೆಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ