ಅಬ್ಬರಿಸಿದ ಮಳೆ: ತುಂಬಿ ಹರಿದ ನದಿ; ಸ್ನಾನಘಟ್ಟ ಮುಳುಗಡೆ 


Team Udayavani, Jul 8, 2018, 12:55 PM IST

8-july-13.jpg

ಸುಬ್ರಹ್ಮಣ್ಯ : ಶುಕ್ರವಾರ ರಾತ್ರಿಯಿಂದ ಸುಬ್ರಹ್ಮಣ್ಯ ಸುತ್ತಮುತ್ತ ಸುರಿದ ಸತತ ಮಳೆಯಿಂದಾಗಿ ನದಿ, ಉಪನದಿಗಳು ತುಂಬಿದೆ. ಸುಬ್ರಹ್ಮಣ್ಯ ಕುಮಾರಧಾರೆ ಸ್ನಾನಘಟ್ಟವೂ ಮುಳುಗಡೆಯಾಗಿದೆ. ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಸಹಿತ ಗ್ರಾಮೀಣ ಭಾಗದ ಹಲವೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು.

ಘಟ್ಟ ಮೇಲಿನ ಪ್ರದೇಶ ಹಾಗೂ ಸ್ಥಳೀಯವಾಗಿ ಸುರಿದ ನಿರಂತರ ಮಳೆಯಿಂದಾಗಿ ಕುಮಾರಧಾರೆ ನದಿಯ ನೀರಿನ ಹರಿವು ಹೆಚ್ಚಿದ್ದು, ನದಿ ತುಂಬಿ ಹರಿಯುತ್ತಿದೆ. ಬೆಳಗ್ಗೆ 5 ಗಂಟೆ ಅವಧಿಗೆ ಸ್ನಾನಘಟ್ಟವು ಭಾಗಶಃ ಮುಳುಗಡೆಗೊಂಡಿತ್ತು. ಮಧ್ಯಾಹ್ನ ವೇಳೆಗೆ ಸಂಪೂರ್ಣ ಮುಳುಗಡೆಯಾಯಿತು. ಸ್ನಾನಘಟ್ಟ ಮುಳುಗಡೆಗೊಂಡಿದ್ದರಿಂದ ಕ್ಷೇತ್ರಕ್ಕೆ ಆಗಮಿಸಿದ್ದ ಭಕ್ತರು ಸ್ನಾನಘಟ್ಟ ಬಳಿ ದಡದ ಮೇಲ್ಭಾಗದ ನೆರೆ ನೀರಲ್ಲಿ ತೀರ್ಥಸ್ನಾನ ಪೂರೈಸಿಕೊಂಡರು. ತಗ್ಗು ಪ್ರದೇಶದಲ್ಲಿದ್ದ ಈ ಹಿಂದಿನ ಸೇತುವೆ ಮುಳುಗಡೆಗೊಂಡಿತ್ತು. ಕುಮಾರಧಾರ ನದಿಯಲ್ಲಿ ನೀರಿನ ಪ್ರಮಾಣ ಕ್ಷಣಕ್ಷಣಕ್ಕೂ ಹೆಚ್ಚಳಗೊಂಡು ಅಪಾಯದ ಮಟ್ಟದಲ್ಲಿ ಹರಿಯುತ್ತಿತ್ತು. ಸ್ನಾನಘಟ್ಟ ಬಳಿ ಭಕ್ತರು ತೀರ್ಥಸ್ನಾನ ನೆರವೇರಿಸುವ ವೇಳೆ ಅವಘಡ ಸಂಭವಿಸದಂತೆ ಪೊಲೀಸರು ಮತ್ತು ಗೃಹರಕ್ಷಕ ಸಿಬಂದಿ ಮುನ್ನೆಚ್ಚರಿಕೆ ವಹಿಸಿಕೊಂಡಿದ್ದರು. ಸುಬ್ರಹ್ಮಣ್ಯ ಪರಿಸರದ ಹಳ್ಳಕೊಳ್ಳಗಳು ಕೂಡ ತುಂಬಿ ಹರಿದಿದೆ. ನದಿ ದಂಡೆಯ ಬದಿಗಳಲ್ಲಿ ಇರುವ ಕೃಷಿಭೂಮಿ ಬಹುತೇಕ ಜಲಾವೃತಗೊಂಡಿದೆ.

ಸೇತುವೆ ಮುಳುಗಡೆ
ಸುಬ್ರಹ್ಮಣ್ಯ ಹರಿಹರ ಮಾರ್ಗ ಮಧ್ಯೆ ಇರುವ ಗುಂಡಡ್ಕ ಸೇತುವೆ ಬಹಳ ವರ್ಷಗಳ ಬಳಿಕ ಶನಿವಾರ ಮೊದಲ ಬಾರಿಗೆ ಮುಳುಗಿತು. ಮುಖ್ಯ ಸಂಪರ್ಕ ಸೇತುವೆ ಮುಳುಗಿದ್ದರಿಂದ ಈ ಭಾಗಕ್ಕೆ ಸಂಚಾರ ಕಡಿತಗೊಂಡಿತು. ನೆರೆ ನೀರು ಇಳಿಯುವ ತನಕ ಜನರು ಸೇತುವೆ ಸಮೀಪದಲ್ಲಿ ಕಾಯುವ ಸ್ಥಿತಿ ಬಂದಿತ್ತು. ಈ ಭಾಗಕ್ಕೆ ಸಂಪರ್ಕಿಸುವ ಇನ್ನೊಂದು ನಡುಗಲ್ಲು-ಹರಿಹರ ರಸ್ತೆ ಮಧ್ಯೆ ಮಲ್ಲಾರ ಬಳಿ ರಸ್ತೆಗೆ ಮರ ಉರುಳಿ ಬಿದ್ದಿದ್ದು, ಸಂಚಾರಕ್ಕೆ ಅಡ್ಡಿಯುಂಟಾಯಿತು. ಬಾಳುಗೋಡಿನ ಪದಕ, ಕೊಲ್ಲಮೊಗ್ರುವಿನ ಚೊಳುಗೋಳ್‌ ಚೋಡಿ ಸೇತುವೆ ಮುಳುಗಿತ್ತು. ಪಂಜದ ಬೊಳ್ಮಲೆ ಕಿಂಡಿ ಅಣೆಕಟ್ಟು ಮೇಲೆ ನೆರೆ ನೀರು ಹರಿದಿದೆ. ಪಂಜ-ಸುಬ್ರಹ್ಮಣ್ಯ ರಸ್ತೆಯಲ್ಲಿರುವ ಪಂಜದ
ಸೇತುವೆ ಮುಳುಗುವ ಹಂತಕ್ಕೆ ತಲುಪಿತ್ತು. ಹರಿಹರ-ಪಲ್ಲತ್ತಡ್ಕ, ಕೊಲ್ಲಮೊಗ್ರು, ಕಲ್ಮಕಾರು, ಗುತ್ತಿಗಾರು, ಬಳ್ಪ, ಏನೆಕಲ್‌, ನಿಂತಿಕಲ್‌, ಬಿಳಿನೆಲೆ, ನೆಟ್ಟಣ ಮೊದಲಾದ ಕಡೆ ನದಿ, ತೊರೆಗಳು ತುಂಬಿ ಹರಿಯುತ್ತಿದೆ. ತಗ್ಗು ಪ್ರದೇಶಗಳಲ್ಲಿನ ಸೇತುವೆ ಮುಳುಗಡೆಗೊಂಡಿದೆ. ತಗ್ಗು ಪ್ರದೇಶ, ರಸ್ತೆಗಳ ಮೇಲೆ ನೀರು ಹರಿಯುತ್ತಿದ್ದು, ಎಲ್ಲೆಲ್ಲೂ ಕೆರೆಯಂತೆ ಆಗಿದೆ.

ತೆಂಗಿನ ಕಾಯಿ ಹಿಡಿದ ಕಾರ್ಮಿಕರು
ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಬೆಳಗ್ಗೆ ರಜೆ ನೀಡಲಾಗಿತ್ತು. ಇನ್ನು ಈ ಭಾಗದ ಹಲವು ಕಡೆಗಳ ತಗ್ಗು ಪ್ರದೇಶಗಳ ಸೇತುವೆ ಮೇಲೆ ನಿಂತು ಕಾರ್ಮಿಕರು ನೆರೆ ನೀರಿನಲ್ಲಿ ತೇಲಿ ಬರುವ ತೆಂಗಿನ ಕಾಯಿ ಹಿಡಿಯುವ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಹಲವರು ಸೇತುವೆ ಹಾಗೂ ನೆರೆ ನೀರು ನಿಂತಿರುವ ಪ್ರದೇಶಗಳ ಮುಂದೆ ನಿಂತು ಸೆಲ್ಫಿ ತೆಗೆಯುತ್ತಿದ್ದರು.

ಪ್ರಯಾಣಿಕರಿಗೆ ಭಾರಿ ಸಂಕಷ್ಟ
ಭಾರಿ ಮಳೆಗೆ ಈ ಭಾರಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಕ್ಷೇತ್ರಕ್ಕೆ ಸಂಪರ್ಕಿಸುವ ಉಪ್ಪಿನಂಗಡಿ- ಕಡಬ-ಸುಬ್ರಹ್ಮಣ್ಯ ರಸ್ತೆಯ ನಡುವಿನ ಹೊಸ್ಮಠ ಸೇತುವೆ ಮುಳುಗಡೆಗೊಂಡಿದ್ದರಿಂದ ಈ ಮಾರ್ಗವಾಗಿ ಸಂಚರಿಸುವ ವಾಹನಗಳು ಪರ್ಯಾಯ ಮಾರ್ಗ ಇಚಿಲಂಪಾಡಿಯಾಗಿ ಮಂಗಳೂರು ಕಡೆಗೆ ಪ್ರಯಾಣ ಬೆಳೆಸಿದವು. ಕುಕ್ಕೆಯಲ್ಲಿ ಜನರು, ಭಕ್ತರು ಭಾರಿ ತೊಂದರೆಗೆ ಒಳಗಾದರು.

ಟಾಪ್ ನ್ಯೂಸ್

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.