ಮುಂದುವರಿದ ಮಳೆ: ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೊಷಣೆ
Team Udayavani, Jul 4, 2022, 8:11 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ವರುಣನ ಅಬ್ಬರ ತಗ್ಗದ ಕಾರಣ ತಾಲೂಕಿನ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.
ಕರವಾಳಿಯಲ್ಲಿ ರವಿವಾರ ಮಳೆ ಸ್ವಲ್ಪ ಬಿಡುವು ನೀಡಿದ್ದು, ಆದರೆ ಸೋಮವಾರ ಮತ್ತೆ ಬಿರುಸು ಪಡೆದಿದೆ.
ಇದನ್ನೂ ಓದಿ:ಪಾದೂರು ತೈಲಾಗಾರ ವಿಸ್ತರಣೆಗೆ 6,000 ಕೋ.ರೂ.: ಶಾಸಕ ಲಾಲಾಜಿ ಆರ್. ಮೆಂಡನ್
ಭಾರತೀಯ ಹವಾಮಾನ ಇಲಾಖೆಯು ಕರಾವಳಿಯಲ್ಲಿ ಜು.4 ಮತ್ತು 5ರಂದು ಆರೆಂಜ್ ಅಲರ್ಟ್ ಘೋಷಿಸಿದೆ. ಈ ವೇಳೆ ಬಿರುಸಿನ ಮಳೆಯ ಜೊತೆ ಗಾಳಿ ಮತ್ತು ಸಮುದ್ರದ ಅಬ್ಬರ ಹೆಚ್ಚಿರುವ ಸಾಧ್ಯತೆಯಿದೆ.