ಆಶ್ಲೇಷಾ ಮಳೆ ಅಬ್ಬರ: ಜನಜೀವನ ತತ್ತರ, ಅಪಾರ ಹಾನಿ
ಮೈದುಂಬಿದ ನೇತ್ರಾವತಿ, ಕುಮಾರಧಾರಾ, ಪಯಸ್ವಿನಿ ನದಿಗಳು; ಗೌರಿ ಹೊಳೆಯೂ ಭರ್ತಿ
Team Udayavani, Aug 7, 2019, 5:07 AM IST
ಪುತ್ತೂರು: ಕಳೆದ 24 ಗಂಟೆಗಳ ಅವಧಿಯಲ್ಲಿ ಸುರಿದ ವ್ಯಾಪಕ ಮಳೆಗೆ ಪುತ್ತೂರು ತಾಲೂಕಿನ ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಈ ಬಾರಿ ಆದ್ರ್ರಾ, ಪುನರ್ವಸು, ಪುಷ್ಯಾ ನಕ್ಷತ್ರಗಳಲ್ಲಿ ನಿರೀಕ್ಷಿತ ಮಳೆ ಸುರಿದಿಲ್ಲ. ಆದರೆ ಆ. 3ರಿಂದ ಆಶ್ಲೇಷಾ ನಕ್ಷತ್ರ ಆರಂಭಗೊಂಡಿದ್ದು, ಗಾಳಿ, ಗುಡುಗು ಸಹಿತ ಮಳೆಯಾಗುತ್ತಿದೆ. ಆ. 5ರ ರಾತ್ರಿಯಿಂದ ನಿರಂತರ ಮಳೆಯಾಗಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಗದ್ದೆಯ ಬಳಿ ತೋಡಿನ ನೀರು ಹರಿದು ಮನೆಗಳಿಗೆ ನುಗ್ಗಿದೆ. ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಬಳಿ ಹಾಗೂ ಕಾವೇರಿಕಟ್ಟೆ ಪರಿಸರದಲ್ಲೂ ಸೋಮವಾರ ರಾತ್ರಿ ಮನೆಗಳಿಗೆ ನೀರು ನುಗ್ಗಿದೆ. ಬಿದಿರು ಹಳ್ಳ ಸೋಮವಾರ ರಾತ್ರಿ ಉಕ್ಕಿ ಹರಿದು ಶ್ರೀ ಮಹಾಲಿಂಗೇಶ್ವರ ದೇವಾಲಯದ ಗದ್ದೆಯ ಪಕ್ಕದಲ್ಲಿರುವ ಮೂರು ಮನೆಗಳಿಗೆ ನೀರು ನುಗ್ಗಿ ಕೃತಕ ನೆರೆ ಉಂಟಾಗಿದೆ. ನಗರಸಭೆಯ ಅಧಿಕಾರಿಗಳು ರಾತ್ರಿಯೇ ಸ್ಥಳಕ್ಕೆ ತೆರಳಿ ಪರಿಹಾರ ಕ್ರಮಗಳನ್ನು ಕೈಗೊಂಡಿದ್ದಾರೆ. ನೆಲ್ಲಿಕಟ್ಟೆ ಮತ್ತು ಎಪಿಎಂಸಿ ರಸ್ತೆಯಲ್ಲೂ ಮಳೆನೀರು ತುಂಬಿ ಆತಂಕ ಉಂಟಾಗಿತ್ತು.
ನಗರದ ಬೈಪಾಸ್ ರಸ್ತೆಯ ಬಪ್ಪಳಿಗೆಯ ಬಳಿ ಗುಡ್ಡವೊಂದು ರಸ್ತೆಯ ಬಳಿ ಕುಸಿದಿದೆ. ವ್ಯಕ್ತಿಯವರು ಸೈಟ್ ನಿರ್ಮಾಣಕ್ಕಾಗಿ ಗುಡ್ಡವನ್ನು ಅಗೆದಿದ್ದರು. ನಗರಸಭಾ ಅಧಿಕಾರಿಗಳು ಸ್ಥಳಕ್ಕೆ ತೆರಳಿ ನಿವೇಶನದ ಮಾಲಕರಿಗೆ ನೋಟಿಸ್ ನೀಡಿದ್ದಾರೆ.
ಪುತ್ತೂರು -ಪಾಣಾಜೆ ರಸ್ತೆಯ ಚೆಲ್ಯಡ್ಕ ಮುಳುಗು ಸೇತುವೆ ಈ ಮಳೆಗಾಲದಲ್ಲಿ 2ನೇ ಬಾರಿಗೆ ಮುಳುಗಡೆಯಾಗಿದೆ.
ಪಾಣಾಜೆ ಕಡೆಗೆ ಸಾಗುವ ಬಸ್ಸು, ಇತರ ವಾಹನಗಳು ಸಂಟ್ಯಾರು ಮೂಲಕ ಪರ್ಯಾಯ ರಸ್ತೆಯನ್ನು ಬಳಸಿಕೊಂಡು ಸಂಚಾರ ನಡೆಸಿವೆ. ಬಡಗನ್ನೂರು ಗ್ರಾಮದ ಪಟ್ಟೆ-ಮುಂಡೋಳೆ ಸಂಪರ್ಕ ರಸ್ತೆಯ ಮುಂಡೋಳೆ ಸಮೀಪದ ಹೋಳೆಯ ಮಧ್ಯೆ ಸಾಗುವ ರಸ್ತೆ ಮುಳುಗಡೆಯಾಗಿದೆ.
ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಸಂಪ್ಯದಲ್ಲಿ ರಸ್ತೆ ಬದಿ ಚರಂಡಿಯಲ್ಲಿ ನೀರು ಸರಿಯಾಗಿ ಹರಿಯದ ಕಾರಣದ ರಸ್ತೆಯಲ್ಲಿ ನೀರು ನಿಂತು ಹಲವು ಹೊತ್ತಿನ ಕಾಲ ಸಂಚಾರಕ್ಕೆ ಸಮಸ್ಯೆ ಉಂಟಾಗಿದೆ. ತಾಲೂಕು ವ್ಯಾಪ್ತಿಯ ದೊಡ್ಡ ಪ್ರಮಾಣದ ಹಾನಿ ಉಂಟಾಗಿಲ್ಲ ಎಂದು ತಹಶೀಲ್ದಾರ್ ಅನಂತ ಶಂಕರ್ ತಿಳಿಸಿದ್ದಾರೆ.
ತೋಡಿನಂತಾದ ಮುಖ್ಯ ರಸ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?