ಆಶ್ಲೇಷಾ ಮಳೆ ಅಬ್ಬರ: ಜನಜೀವನ ತತ್ತರ, ಅಪಾರ ಹಾನಿ

ಮೈದುಂಬಿದ ನೇತ್ರಾವತಿ, ಕುಮಾರಧಾರಾ, ಪಯಸ್ವಿನಿ ನದಿಗಳು; ಗೌರಿ ಹೊಳೆಯೂ ಭರ್ತಿ

Team Udayavani, Aug 7, 2019, 5:07 AM IST

s-33

ಪುತ್ತೂರು: ಕಳೆದ 24 ಗಂಟೆಗಳ ಅವಧಿಯಲ್ಲಿ ಸುರಿದ ವ್ಯಾಪಕ ಮಳೆಗೆ ಪುತ್ತೂರು ತಾಲೂಕಿನ ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಈ ಬಾರಿ ಆದ್ರ್ರಾ, ಪುನರ್ವಸು, ಪುಷ್ಯಾ ನಕ್ಷತ್ರಗಳಲ್ಲಿ ನಿರೀಕ್ಷಿತ ಮಳೆ ಸುರಿದಿಲ್ಲ. ಆದರೆ ಆ. 3ರಿಂದ ಆಶ್ಲೇಷಾ ನಕ್ಷತ್ರ ಆರಂಭಗೊಂಡಿದ್ದು, ಗಾಳಿ, ಗುಡುಗು ಸಹಿತ ಮಳೆಯಾಗುತ್ತಿದೆ. ಆ. 5ರ ರಾತ್ರಿಯಿಂದ ನಿರಂತರ ಮಳೆಯಾಗಿದೆ.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಗದ್ದೆಯ ಬಳಿ ತೋಡಿನ ನೀರು ಹರಿದು ಮನೆಗಳಿಗೆ ನುಗ್ಗಿದೆ. ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಬಳಿ ಹಾಗೂ ಕಾವೇರಿಕಟ್ಟೆ ಪರಿಸರದಲ್ಲೂ ಸೋಮವಾರ ರಾತ್ರಿ ಮನೆಗಳಿಗೆ ನೀರು ನುಗ್ಗಿದೆ. ಬಿದಿರು ಹಳ್ಳ ಸೋಮವಾರ ರಾತ್ರಿ ಉಕ್ಕಿ ಹರಿದು ಶ್ರೀ ಮಹಾಲಿಂಗೇಶ್ವರ ದೇವಾಲಯದ ಗದ್ದೆಯ ಪಕ್ಕದಲ್ಲಿರುವ ಮೂರು ಮನೆಗಳಿಗೆ ನೀರು ನುಗ್ಗಿ ಕೃತಕ ನೆರೆ ಉಂಟಾಗಿದೆ. ನಗರಸಭೆಯ ಅಧಿಕಾರಿಗಳು ರಾತ್ರಿಯೇ ಸ್ಥಳಕ್ಕೆ ತೆರಳಿ ಪರಿಹಾರ ಕ್ರಮಗಳನ್ನು ಕೈಗೊಂಡಿದ್ದಾರೆ. ನೆಲ್ಲಿಕಟ್ಟೆ ಮತ್ತು ಎಪಿಎಂಸಿ ರಸ್ತೆಯಲ್ಲೂ ಮಳೆನೀರು ತುಂಬಿ ಆತಂಕ ಉಂಟಾಗಿತ್ತು.

ನಗರದ ಬೈಪಾಸ್‌ ರಸ್ತೆಯ ಬಪ್ಪಳಿಗೆಯ ಬಳಿ ಗುಡ್ಡವೊಂದು ರಸ್ತೆಯ ಬಳಿ ಕುಸಿದಿದೆ. ವ್ಯಕ್ತಿಯವರು ಸೈಟ್ ನಿರ್ಮಾಣಕ್ಕಾಗಿ ಗುಡ್ಡವನ್ನು ಅಗೆದಿದ್ದರು. ನಗರಸಭಾ ಅಧಿಕಾರಿಗಳು ಸ್ಥಳಕ್ಕೆ ತೆರಳಿ ನಿವೇಶನದ ಮಾಲಕರಿಗೆ ನೋಟಿಸ್‌ ನೀಡಿದ್ದಾರೆ.

ಪುತ್ತೂರು -ಪಾಣಾಜೆ ರಸ್ತೆಯ ಚೆಲ್ಯಡ್ಕ ಮುಳುಗು ಸೇತುವೆ ಈ ಮಳೆಗಾಲದಲ್ಲಿ 2ನೇ ಬಾರಿಗೆ ಮುಳುಗಡೆಯಾಗಿದೆ.

ಪಾಣಾಜೆ ಕಡೆಗೆ ಸಾಗುವ ಬಸ್ಸು, ಇತರ ವಾಹನಗಳು ಸಂಟ್ಯಾರು ಮೂಲಕ ಪರ್ಯಾಯ ರಸ್ತೆಯನ್ನು ಬಳಸಿಕೊಂಡು ಸಂಚಾರ ನಡೆಸಿವೆ. ಬಡಗನ್ನೂರು ಗ್ರಾಮದ ಪಟ್ಟೆ-ಮುಂಡೋಳೆ ಸಂಪರ್ಕ ರಸ್ತೆಯ ಮುಂಡೋಳೆ ಸಮೀಪದ ಹೋಳೆಯ ಮಧ್ಯೆ ಸಾಗುವ ರಸ್ತೆ ಮುಳುಗಡೆಯಾಗಿದೆ.

ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಸಂಪ್ಯದಲ್ಲಿ ರಸ್ತೆ ಬದಿ ಚರಂಡಿಯಲ್ಲಿ ನೀರು ಸರಿಯಾಗಿ ಹರಿಯದ ಕಾರಣದ ರಸ್ತೆಯಲ್ಲಿ ನೀರು ನಿಂತು ಹಲವು ಹೊತ್ತಿನ ಕಾಲ ಸಂಚಾರಕ್ಕೆ ಸಮಸ್ಯೆ ಉಂಟಾಗಿದೆ. ತಾಲೂಕು ವ್ಯಾಪ್ತಿಯ ದೊಡ್ಡ ಪ್ರಮಾಣದ ಹಾನಿ ಉಂಟಾಗಿಲ್ಲ ಎಂದು ತಹಶೀಲ್ದಾರ್‌ ಅನಂತ ಶಂಕರ್‌ ತಿಳಿಸಿದ್ದಾರೆ.

ಮೆಸ್ಕಾಂಗೆ 20 ಲಕ್ಷ ರೂ. ನಷ್ಟ

ಗಾಳಿ ಸಹಿತ ಮಳೆಗೆ ಮೆಸ್ಕಾಂ ಪುತ್ತೂರು ವಿಭಾಗ ವ್ಯಾಪ್ತಿಯ ಪುತ್ತೂರು, ಸುಳ್ಯ, ಕಡಬ ತಾಲೂಕು ವ್ಯಾಪ್ತಿಯಲ್ಲಿ 75ಕ್ಕೂ ಹೆಚ್ಚು ವಿದ್ಯುತ್‌ ಕಂಬಗಳು ನೆಲಕ್ಕುರುಳಿದ್ದು, ಬೆಟ್ಟಂಪಾಡಿ ಹಾಗೂ ಗುತ್ತಿಗಾರಿನಲ್ಲಿ 2 ವಿದ್ಯುತ್‌ ಪರಿವರ್ತಕಗಳಿಗೆ ಹಾನಿಯಾಗಿದೆ. ಅಂದಾಜು 20 ಲಕ್ಷ ರೂ. ನಷ್ಟವಾಗಿದ್ದು, ವಿದ್ಯುತ್‌ ಮರುಜೋಡಣೆ ಕಾರ್ಯ ನಡೆಸಲಾಗುತ್ತಿದೆ ಎಂದು ಮೆಸ್ಕಾಂ ಕಾರ್ಯಪಾಲಕ ಎಂಜಿನಿಯರ್‌ ನರಸಿಂಹ ತಿಳಿಸಿದ್ದಾರೆ.

ತೋಡಿನಂತಾದ ಮುಖ್ಯ ರಸ್ತೆ

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವ ನಗರದ ಮುಖ್ಯ ರಸ್ತೆಯ ಪೈಚಾರು, ಹಳೆಗೇಟು, ಮೊಗರ್ಪಣೆ, ಜ್ಯೋತಿ ಸರ್ಕಲ್, ಜೂನಿಯರ್‌ ಕಾಲೇಜು ರಸ್ತೆ, ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಪ್ರವೇಶ ದ್ವಾರ, ಗಾಂಧಿನಗರ, ಜಟ್ಟಿಪಳ್ಳ ತಿರುವು, ಪರಿವಾರಕಾನ ಹೀಗೆ ನಗರದ ಮುಖ್ಯ ರಸ್ತೆಗಳಲ್ಲಿ ಮಳೆ ನೀರು ಹರಿದು ತೋಡಿನ ಸ್ವರೂಪ ಪಡೆಯಿತು. ವಾಹನ ಸವಾರರು ಸಂಚಾರಕ್ಕೆ ತಡಕಾಡಿದರು.

ಮಳೆ ಪ್ರಮಾಣ

ಸೋಮವಾರ ಬೆಳಗ್ಗಿನಿಂದ ಮಂಗಳವಾರ ಬೆಳಗ್ಗಿನ ವರೆಗಿನ 24 ಗಂಟೆಗಳ ಅವಧಿಯಲ್ಲಿ ಪುತ್ತೂರು ನಗರದಲ್ಲಿ 155 ಮಿ.ಮೀ., ಉಪ್ಪಿನಂಗಡಿಯಲ್ಲಿ 154.2 ಮಿ.ಮೀ., ಶಿರಾಡಿಯಲ್ಲಿ 142.8 ಮಿ.ಮೀ., ಕೊೖಲದಲ್ಲಿ 143.4 ಮಿ.ಮೀ., ಐತೂರುನಲ್ಲಿ 133.3 ಮಿ.ಮೀ., ಕಡಬದಲ್ಲಿ 128.2 ಮಿ.ಮೀ. ಮಳೆ ಸುರಿದಿದೆ. ತಾಲೂಕಿನಲ್ಲಿ ಒಟ್ಟು 856.6 ಮಿ.ಮೀ. ಮಳೆಯಾಗಿದೆ. ಉಪ್ಪಿನಂಗಡಿ ಸಂಗಮ ಕ್ಷೇತ್ರದಲ್ಲಿ ಮಂಗಳವಾರ ಬೆಳಗ್ಗೆ 21 ಮೀ. ನೀರಿನ ಮಟ್ಟ ದಾಖಲಾಗಿದೆ.

ವಿದ್ಯಾರ್ಥಿಗಳ ಪರದಾಟ

ಜಟ್ಟಿಪಳ್ಳ – ಕೊಡಿಯಾಲಬೈಲು ರಸ್ತೆಯ ಹಲವೆಡೆ ಚರಂಡಿ ಸಮಸ್ಯೆ ಕಾರಣ ರಸ್ತೆಯೇ ತೋಡಿನ ಸ್ಥಿತಿ ಉಂಟಾಗಿತ್ತು. ಮಳೆ ನೀರು ರಸ್ತೆಗೆ ನುಗ್ಗಿ ಬೀಡುಬಿಟ್ಟಿತ್ತು. ಕೊಡಿಯಾಲಬೈಲು ಪದವಿ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಅಕ್ಷರಶಃ ಪರದಾಟ ನಡೆಸಿದರು. ಹೊಳೆ ಸ್ವರೂಪ ಪಡೆದಿದ್ದ ರಸ್ತೆಯಲ್ಲೇ ಸಾಗಬೇಕಾದ ಅನಿವಾರ್ಯ ಉಂಟಾಗಿತ್ತು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.