Aranthodu: ಬಾಟೋಳಿಯಲ್ಲಿ ಮತ್ತೆ ಗುಡ್ಡ ಕುಸಿತ: ಸುಳ್ಯ-ಪಾನತ್ತೂರು ರಸ್ತೆ ಸಂಪರ್ಕ ಕಡಿತ
Team Udayavani, Jul 23, 2023, 12:49 PM IST
ಅರಂತೋಡು: ಸುಳ್ಯದಿಂದ ಕಲ್ಲಪ್ಪಳ್ಳಿ ಮೂಲಕ ಕೇರಳದ ಪಾಣತ್ತೂರು ಸಂಪರ್ಕಿಸುವ ಅಂತರ್ ರಾಜ್ಯ ರಸ್ತೆಯಲ್ಲಿ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ರಸ್ತೆ ತಡೆ ಉಂಟಾಗಿರುವ ಘಟನೆ ನಡೆದಿದೆ.
ಅಲ್ಲದೆ ಮೇಲ್ಭಾಗದ ಗುಡ್ಡದಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ಗುಡ್ಡ ಇನ್ನಷ್ಟು ಕುಸಿಯುವ ಆತಂಕ ಎದುರಾಗಿದೆ.
ಸುಳ್ಯದಿಂದ ಸಂಪರ್ಕಿಸುವ ಈ ರಸ್ತೆಯಲ್ಲಿ ವಾಹನ ಸಂಚಾರ, ಪಾದಚಾರಿಗಳ ಸಂಚಾರ ಸಂಪೂರ್ಣ ನಿಷೇಧ ಮಾಡಲಾಗಿದ್ದು, ಪೊಲೀಸ್ ಬ್ಯಾರಿಕೇಡ್ ಅಳವಡಿಸಿ ರಸ್ತೆ ಬಂದ್ ಮಾಡಲಾಗಿದೆ.
ಕಳೆದ ಕೆಲವು ದಿನಗಳ ಹಿಂದೆ ಬಾಟೋಳಿ ಭಾಗದಲ್ಲಿ ಬಾರಿ ಪ್ರಮಾಣದಲ್ಲಿ ಗುಡ್ಡ ಜರಿದು ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು. ಸತತ ಕೆಲಸಗಳಿಂದ ಮಣ್ಣು ತೆರವು ಕಾರ್ಯಚರಣೆ ಮಾಡಲಾಗಿತ್ತು.
ಇಂದು ಅದೇ ಜಾಗದಲ್ಲಿ ಮತ್ತೆ ಗುಡ್ಡಜರಿದು ರಸ್ತೆಗೆ ಬಿದ್ದು, ಮೇಲ್ಭಾಗದಲ್ಲಿ ಬಿರುಕುಗಳು ಕಾಣಿಸಿಕೊಂಡ ಹಿನ್ನೆಲೆ ವಾಹನ ಸಂಚಾರ ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು