Sullia ಬಾರದ ವಾರಸುದಾರರು: ಪೊಲೀಸ್, ಸ್ಥಳೀಯಾಡಳಿತದಿಂದ ಅಂತ್ಯಸಂಸ್ಕಾರ
ವಾರದ ಹಿಂದೆ ಹೃದಯಾಘಾತದಿಂದ ಮೃತಪಟ್ಟಿದ್ದ ಕಾರ್ಮಿಕ
Team Udayavani, Sep 16, 2023, 10:11 PM IST
ಸುಳ್ಯ: ವಾರದ ಹಿಂದೆ ಹೃದಯಾಘಾತದಿಂದ ಮೃತಪಟ್ಟಿದ್ದ ಇಲ್ಲಿನ ಹೊಟೇಲ್ ಕಾರ್ಮಿಕನ ಮೃತದೇಹವನ್ನು ಕೊಂಡೊಯ್ಯಲು ಸಂಬಂಧಿಕರು ಯಾರೂ ಬಾರದ ಹಿನ್ನೆಲೆಯಲ್ಲಿ ಸುಳ್ಯ ಠಾಣಾ ಪೊಲೀಸರು, ಸ್ಥಳೀಯಾಡಳಿತ ನೆರವಿನೊಂದಿಗೆ ಅಂತ್ಯಸಂಸ್ಕಾರ ನಡೆಸಲಾಯಿತು.
ರಥಬೀದಿಯಲ್ಲಿನ ಹೊಟೇಲಿನಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಭಾರತ ಮೂಲದ ಶ್ರೀಲೂಲು ಸೆ. 3ರಂದು ಹೃದಯಾಘಾತದಿಂದ ಮೃತಪಟ್ಟಿದ್ದರು. ಅವರ ಕುಟುಂಬಸ್ಥರು ಮತ್ತು ಪರಿಚಯಸ್ಥರು ಬಾರದ ಹಿನ್ನೆಲೆಯಲ್ಲಿ ಮೃತದೇಹವನ್ನು ಆಸ್ಪತ್ರೆಯ ಶೀತಲೀಕರಣ ಘಟಕದಲ್ಲಿ ಇರಿಸಲಾಗಿತ್ತು.
ವ್ಯಕ್ತಿಯ ಸಂಬಂಧಿಕರು ಇದ್ದಲ್ಲಿ ಸುಳ್ಯ ಠಾಣೆ ಸಂಪರ್ಕಿಸುವಂತೆ ಪ್ರಕಟನೆ ನೀಡಲಾಗಿತ್ತು. ಆದರೂ ಯಾರ ಬಾರದ ಹಿನ್ನೆಲೆಯಲ್ಲಿ ಮೃತ ದೇಹವನ್ನು ಸುಳ್ಯ ಕೇರ್ಪಳದ ರುದ್ರ ಭೂಮಿಯಲ್ಲಿ ಪೊಲೀಸ್ ಇಲಾಖೆ ಮತ್ತು ಸುಳ್ಯ ನಗರ ಪಂಚಾಯತ್ ನೇತೃತ್ವದಲ್ಲಿ ಸ್ಥಳೀಯರ ಸಹಕಾರದಿಂದ ಅಂತ್ಯ ಸಂಸ್ಕಾರ ಮಾಡಲಾಯಿತು. ಈ ಸಂದರ್ಭ ಸುಳ್ಯ ಠಾಣಾ ತನಿಖಾ ವಿಭಾಗದ ಉಪನಿರೀಕ್ಷಕಿ ಸರಸ್ವತಿ, ಪೊಲೀಸ್ ಸಿಬಂದಿ ಹಾಗೂ ನಗರ ಪಂಚಾಯತ್ ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು