ಹೆದ್ದಾರಿ ಬದಿ ಹೊಂಚು ಹಾಕುತ್ತಿವೆ ಅಪಾಯಕಾರಿ ಕೆರೆಗಳು!

ಅಪಘಾತಗಳ ಬಳಿಕವೂ ನಾರ್ಣಕಜೆ, ತಳೂರಿನಲ್ಲಿರುವ ಕೆರೆಗಳಿಗೆ ಅಳವಡಿಸಿಲ್ಲ ತಡೆಬೇಲಿ

Team Udayavani, Sep 10, 2019, 5:04 AM IST

y-29

ಗುತ್ತಿಗಾರು: ಪುತ್ತೂರಿನ ಮಡ್ಯಂಗಳದಲ್ಲಿ ಕಾರು ಕೆರೆಗೆ ಉರುಳಿ ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡ ಘಟನೆ ಮನದಲ್ಲಿನ್ನೂ ಹಸಿಯಾಗಿರುವಾಗಲೇ ಅಂತಹುದೇ ದುರ್ಘ‌ಟನೆಗಳು ಸಂಭವಿಸಬಹುದಾದ ಎರಡು ಅಪಾಯಕಾರಿ ಸ್ಥಳಗಳು ಸುಬ್ರಹ್ಮಣ್ಯ-ಜಾಲಸೂರು ರಾಜ್ಯ ಹೆದ್ದಾರಿಯ ತಳೂರು ಹಾಗೂ ನಾರ್ಣಕಜೆಯಲ್ಲಿ ಇವೆ.

ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವಂತೆ ಇರುವ ಎರಡು ಕೆರೆಗಳು ಖಾಸಗಿ ಒಡೆತನದಲ್ಲಿದ್ದರೂ ಅದರ ಸುತ್ತ ಯಾವುದೇ ತಡೆಬೇಲಿ ಅಳವಡಿಸದ ಕಾರಣ ಅಪಾಯವನ್ನು ಆಹ್ವಾನಿಸುತ್ತಿವೆ.

ಅನಾಹುತ ತಪ್ಪಿತ್ತು
ತಳೂರಿನ ಬಳಿಯಿರುವ ಕೆರೆಗೆ ಹಲವು ವರ್ಷಗಳಿಂದಲೇ ತಡೆಬೇಲಿಯಿಲ್ಲದೇ ಅಪಾಯಕಾರಿ ಆಗಿದೆ. 50 ಅಡಿಗಳಷ್ಟು ಆಳ ಹಾಗೂ ಗ್ರಾನೈಟ್‌ ಕಲ್ಲಿನ ಮಧ್ಯೆ ಈ ಕೆರೆ ರಚನೆಯಾಗಿದೆ. ಮುಖ್ಯ ರಸ್ತೆಗೆ ಕೆಲವೇ ಅಡಿಗಳ ಅಂತರದಲ್ಲಿ ಈ ಕೆರೆ ಇದೆ. ಕಳೆದ ಬೇಸಗೆಯಲ್ಲಿ ಯಾತ್ರಾರ್ಥಿಗಳ ಕಾರೊಂದು ಈ ಕೆರೆಗೆ ಬೀಳುವುದು ಸ್ವಲ್ಪದರಲ್ಲೇ ತಪ್ಪಿತ್ತು. ಅಲ್ಲೇ ಇದ್ದ ಮರಗಳ ಮಧ್ಯೆ ಕಾರು ಸಿಲುಕಿಕೊಂಡ ಕಾರಣ ಭಾರೀ ಅನಾಹುತ ತಪ್ಪಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದರು. ಅದಾದ ಬಳಿಕವೂ ಈ ಕೆರೆಗೆ ತಡೆಬೇಲಿ ಅಳವಡಿಸಿಲ್ಲ.

ಕೆರೆಯೊಳಗೆ ಬಿದ್ದಿದ್ದವು ವಾಹನಗಳು
ಮತ್ತೂಂದು ಕೆರೆ ನಾರ್ಣಕಜೆ ಸಮೀಪದ ತಿರುವಿನಲ್ಲಿದ್ದು, ಈ ಕೆರೆಗೆ ಹಲವು ವಾಹನಗಳು ಬಿದ್ದಿವೆ. ಹಿಂದೊಮ್ಮೆ ಈ ಕೆರೆಗೆ ಸವಾರನೊಬ್ಬ ಬೈಕ್‌ ಸಮೇತ ಬಿದ್ದಿದ್ದ. ಬೈಕ್‌ ನೀರಿನಲ್ಲಿ ಮುಳುಗಿದ್ದು, ಸವಾರ ಈಜಿಕೊಂಡು ದಡ ಸೇರಿ ಪ್ರಾಣ ಉಳಿಸಿಕೊಂಡಿದ್ದ. ಈ ಕೆರೆಗೆ ಭಾಗಶಃ ತಡೆಬೇಲಿ ಅಳವಡಿಸಿದ್ದರೂ ಅದು ಸುರಕ್ಷಿತ ವಾಗಿಲ್ಲ. ಪೂರ್ಣ ಪ್ರಮಾಣದ ತಡೆಬೇಲಿ ಅಗತ್ಯವಿದ್ದು, ಸಂಭವನೀಯ ಅಪಾಯ ತಪ್ಪಿಸಲು ಸಹಕಾರಿಯಾಗಲಿದೆ. ಹೀಗಾಗಿ ಸಂಬಂಧಪಟ್ಟ ಇಲಾಖೆಯವರು ಎಚ್ಚೆತ್ತು ಈ ಕೆರೆಗೆ ತಡೆಬೇಲಿ ಅಳವಡಿಸಲಿ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ತಡೆಬೇಲಿಗೆ ಪ್ರಸ್ತಾವನೆ ಸಲ್ಲಿಕೆ
ನಾರ್ಣಕಜೆ ಹಾಗೂ ತಳೂರಿನ ಅಪಾಯಕಾರಿ ಕೆರೆಗಳಿಗೆ ತಡೆ ಬೇಲಿ ನಿರ್ಮಿಸಲು ಪ್ರಸ್ತಾವನೆ ಕಳುಹಿಸಲಾಗಿದೆ. ಅನುಮೋದನೆ ಬಂದ ಕೂಡಲೇ ಕಾಮಗಾರಿ ಪ್ರಾರಂಭಿಸಲಾಗುವುದು.
– ಸಣ್ಣೇ ಗೌಡ, ಎಇ, ಲೋಕೋಪಯೋಗಿ ಇಲಾಖೆ ಸುಳ್ಯ

ಕೃಷ್ಣಪ್ರಸಾದ್‌ ಕೊಲ್ಚಾರು

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.