“ಜನರ ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ’


Team Udayavani, Jul 6, 2019, 5:00 AM IST

q-47

ವಿಟ್ಲ: ಸರಕಾರ ಮತ್ತು ನಿಮ್ಮ ನಡುವಿನ ಕೊಂಡಿಯಾಗಿ ನಾವು ಕರ್ತವ್ಯ ನಿರ್ವಹಿಸಬೇಕು. ಗ್ರಾಮದ ಸಮಸ್ಯೆ ಗಳನ್ನು ಸ್ಥಳೀಯ ಮಟ್ಟದ ಅಧಿಕಾರಿ ಗಳಿಂದ ಪರಿಹರಿಸಲು ಪ್ರಾಮಾಣಿಕ ವಾಗಿ ಯತ್ನಿಸಲಾಗುವುದು. ಜನರ ಧ್ವನಿ ಯನ್ನು ವಿಧಾನಸಭೆಯವರೆಗೆ ತಲುಪಿಸಿ, ಸಮಸ್ಯೆ ಪರಿಹರಿಸುವ ಪ್ರಯತ್ನ ಮಾಡ ಲಾಗುವುದು ಎಂದು ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಹೇಳಿದರು.

ಶುಕ್ರವಾರ ಅನಂತಾಡಿ ಕರಿಂಕ ಶ್ರೀದೇವಿ ಕಲ್ಯಾಣ ಮಂಟಪದಲ್ಲಿ ಅನಂತಾಡಿ-ನೆಟ್ಲಮುಟ್ನೂರು ಗ್ರಾಮ ವ್ಯಾಪ್ತಿಯಲ್ಲಿ ಶಾಸಕರ ಗ್ರಾಮ ಸ್ಪಂದನ “ಗ್ರಾಮದ ಕಡೆ ಶಾಸಕರ ನಡೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಾಸಕರು ಭಾಷಣ ಮಾಡುವು ದಿಲ್ಲ. ನಿಮ್ಮ ಸಮಸ್ಯೆಗಳನ್ನು ತಿಳಿಸಿ ಎಂದು ನೇರವಾಗಿ ಗ್ರಾಮಸ್ಥರ ಮನವಿಗಳನ್ನು ಸ್ವೀಕರಿಸಿ, ಸ್ಥಳದಲ್ಲೇ ಕ್ರಮ ಕೈಗೊಳ್ಳಲು ಆರಂಭಿಸಿದರು. ಕೆಲವು ಮನವಿಗಳಿಗೆ ಸ್ಪಂದಿಸಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಕೆಲವು ಮುಖಂಡರಿಗೆ, ಗ್ರಾ.ಪಂ. ಸದಸ್ಯರಿಗೆ ನೇರವಾಗಿ ಜವಾಬ್ದಾರಿಗಳನ್ನು ನೀಡಿದರು. ಭಾಷಣವಿಲ್ಲ, ಸ್ಪಂದನೆಗೇ ಆದ್ಯತೆ ಕೊಡುತ್ತಿದ್ದೇನೆ ಎಂದು ಹೇಳಿದ ಶಾಸಕರು ಅದರಂತೆ ನಡೆದುಕೊಂಡರು.

ಗೋಳ್ತಮಜಲು ಜಿ.ಪಂ. ಸದಸ್ಯೆ ಕಮಲಾಕ್ಷಿ ಪೂಜಾರಿ, ತಾ.ಪಂ. ಸದಸ್ಯೆ ಗೀತಾ ಚಂದ್ರಶೇಖರ್‌, ಮಾಣಿ ಪ್ರಾ. ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಶಶಿಕಲಾ, ಜಿ.ಪಂ. ಎಂಜಿನಿಯರ್‌ ನಾಗೇಶ್‌ ಬಿಲ್ಲವ, ಉಪತಹಶೀಲ್ದಾರ್‌ ರವಿಶಂಕರ್‌, ಆರ್‌ಐ ದಿವಾಕರ, ಉಪಾಧ್ಯಕ್ಷೆ ಕವಿತಾ ಉಮೇಶ್‌ ಪೂಜಾರಿ, ಗ್ರಾಮಕರಣಿಕ ಲಿಂಗಪ್ಪ ಜಜ್ಜುರಿ, ನೆಟ್ಲಮುಟ್ನೂರು ಗ್ರಾ.ಪಂ. ಸದಸ್ಯ ತನಿಯಪ್ಪ ಗೌಡ, ಸಾಮಾಜಿಕ ಕಾರ್ಯಕರ್ತ ಗಣೇಶ್‌ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಗ್ಯಾಸ್‌ ಕಿಟ್‌ ವಿತರಣೆ
ಇದೇ ಸಂದರ್ಭ ಕೇಂದ್ರ ಸರಕಾರದ ಉಚಿತ ಗ್ಯಾಸ್‌ ಸಂಪರ್ಕ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಗ್ಯಾಸ್‌ ಕಿಟ್‌ ವಿತರಣೆ ಮಾಡಲಾಯಿತು.
ಅನಂತಾಡಿ ಗ್ರಾಮ ಪಂಚಾಯತ್‌ ಅಧ್ಯಕ್ಷ ಸನತ್‌ ಕುಮಾರ್‌ ರೈ ಸ್ವಾಗತಿಸಿದರು.

ಗ್ರಾಮಕರಣಿಕರ ಕ್ರಮಕ್ಕೆ ಆಕ್ಷೇಪ
ಕುಟುಂಬದಲ್ಲಿ ಮೂವರು ಅಂಗವಿಕಲರಾಗಿದ್ದು, ಅವರಿಗೆ 94ಸಿ ಹಕ್ಕುಪತ್ರ ನೀಡಿಲ್ಲ ಎಂದು ಅವರು ಶಾಸಕರಿಗೆ ದೂರು ನೀಡಿದರು. ಆಗ ಅದು ಶ್ಮಶಾನಕ್ಕಾಗಿ ಕಾದಿರಿಸಿದ ಜಾಗವೆಂದು ಗ್ರಾಮಕರಣಿಕ ಲಿಂಗಪ್ಪ ಹೇಳಿದರು. ಪಿಡಿಒ ಜಯರಾಮ ಅವರಲ್ಲಿ ವಿಚಾರಿಸಿದಾಗ ಅದು ಶ್ಮಶಾನದ ಜಾಗವಲ್ಲ ಎಂದು ತಿಳಿದುಬಂತು. ಶಾಸಕರು ತತ್‌ಕ್ಷಣ ಕ್ರಮ ಕೈಗೊಳ್ಳಲು ಆದೇಶಿಸಿದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.