Savanur: ಸಮಾಜ ಸೇವೆಯಿಂದ ಗೌರವ: ಅಶೋಕ್‌ ಕುಮಾರ್‌

ಸವಣೂರು ವಿದ್ಯಾರಶ್ಮಿಯಲ್ಲಿ ʼಶೀಂಟೂರು ಸ್ಮೃತಿʼ

Team Udayavani, Aug 15, 2023, 9:32 AM IST

3-savanoor

ಸವಣೂರು: ಹಣ ಸಂಪಾದನೆಯ ಜತೆಗೆ ಸಮಾಜಕ್ಕೆ ಕೊಡುಗೆಯನ್ನು ನೀಡಬೇಕು. ಆಗ ಮಾತ್ರ ವ್ಯಕ್ತಿಗೆ ಗೌರವ ದೊರೆಯುತ್ತದೆ ಎಂದು ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದರು.

ಅವರು ಸೋಮವಾರ ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ನಡೆದ ನಿವೃತ್ತ ಸೇನಾನಿ, ಶಿಕ್ಷಕ ದಿ| ಶೀಂಟೂರು ನಾರಾಯಣ ರೈ ಅವರ ಸ್ಮರಣೆ ʼಶೀಂಟೂರು ಸ್ಮೃತಿʼಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಸವಣೂರು ಸೀತಾರಾಮ ರೈ ಅವರು ಸುಮಾರು 25 ಕೋ.ರೂ.ಗಳನ್ನು ಸವಣೂರಿನ ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಕಾರ್ಯಕ್ಕಾಗಿ ವಿನಿಯೋಗಿಸಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯ. ಸವಣೂರಿನ ಸಮಗ್ರ ಅಭಿವೃದ್ಧಿಯ ರೂವಾರಿಯಾಗಿರುವ ರೈಗಳು “ಸವಣೂರಿನ ಶಿಲ್ಪಿ’ಯಾಗಿದ್ದಾರೆ ಎಂದು ಹೇಳಿದರು.

ಸಮ್ಮಾನ

ಶಾಸಕರಾದ ಬಳಿಕ ಪ್ರಥಮ ಬಾರಿಗೆ ವಿದ್ಯಾರಶ್ಮಿ ವಿದ್ಯಾಲಯಕ್ಕೆ ಆಗಮಿಸಿದ ಅಶೋಕ್‌ ಕುಮಾರ್‌ ರೈ ಅವರನ್ನು ಸೀತಾರಾಮ ರೈಗಳು ಸಮ್ಮಾನಿಸಿದರು.

ಪ್ರೊ| ಡಾ| ಡಿ.ಎಸ್‌. ಶೇಷಪ್ಪ ಅವರು ಶೀಂಟೂರು ನಾರಾಯಣ ರೈಯವರ ಸಂಸ್ಮರಣೆ ಮಾಡಿದರು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ದುಬಾೖಯ ಉದ್ಯಮಿ ಆಶ್ರಫ್ ಶಾ ಮಾಂತೂರು ಮಾತನಾಡಿದರು. ಶಾಸಕ ಅಶೋಕ್‌ ಕುಮಾರ್‌ ರೈಯವರು ಶೀಂಟೂರು ನಾರಾಯಣ ರೈಗಳ ಪ್ರತಿಮೆಗೆ ಮಾಲಾರ್ಪಣೆಗೈದರು.

ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿ‌ನ್‌ ಎಲ್‌. ಶೆಟ್ಟಿ ಎಸ್‌ಎನ್‌ಆರ್‌ ರೂರಲ್‌ ಎಜುಕೇಶನ್‌ ಟ್ರಸ್ಟ್‌ನ ಟ್ರಸ್ಟಿಗಳಾದ ಸವಣೂರು ಸುಂದರ ರೈ, ರಶ್ಮಿ ಅಶ್ವಿ‌ನ್‌ ಶೆಟ್ಟಿ, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ| ನಾರಾಯಣ ಮೂರ್ತಿ ಕೆ. ವೇದಿಕೆಯಲ್ಲಿದ್ದರು.

ಕೆ. ಸೀತಾರಾಮ ರೈ ಸವಣೂರು ಸ್ವಾಗತಿಸಿದರು, ನ್ಯಾಯವಾದಿ ಜಯಪ್ರಕಾಶ್‌ ರೈ ಸುಳ್ಯ ವಂದಿಸಿದರು. ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ನಿರ್ವಹಿಸಿದರು.

ಶೀಂಟೂರು ಸಮ್ಮಾನ

ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ ಅವರು ಭಾರತೀಯ ನೌಕಾನೆಲೆಯ ನಿವೃತ್ತ ಅಧಿಕಾರಿ ವಿಕ್ರಂ ದತ್ತ ಅವರಿಗೆ ಶೀಂಟೂರು ಸಮ್ಮಾನವನ್ನು ನೆರವೇರಿಸಿದರು. ಬಳಿಕ ಸದಾಶಿವ ಶೆಟ್ಟಿಯವರು ಮಾತನಾಡಿ, ಸವಣೂರು ಸೀತಾರಾಮ ರೈಯವರು ಪ್ರಕೃತಿಯ ಸೌಂದರ್ಯ ತಾಣವಾಗಿರುವ ಈ ಗ್ರಾಮೀಣ ಭಾಗದಲ್ಲಿ ಬಹುದೊಡ್ಡ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ್ದಾರೆ ಎಂದು ಶ್ಲಾಘಿಸಿದರು.

ಮಾದರಿ ಬದುಕು

ಸಮ್ಮಾನ ಸ್ವೀಕರಿಸಿದ ವಿಕ್ರಂ ದತ್ತ ಮಾತನಾಡಿ, ಸವಣೂರು ಭಾಗದಲ್ಲಿ ಶಿಕ್ಷಣ ಕ್ರಾಂತಿಯ ಜತೆಗೆ ಧಾರ್ಮಿಕ, ಸಾಮಾಜಿಕ ಹಾಗೂ ಉದ್ಯಮ ಕ್ಷೇತ್ರಗಳಲ್ಲೂ ಸೀತಾರಾಮ ರೈಗಳು ಸಾಧನೆ ಮಾಡಿದ್ದಾರೆ. ಅವರ ತಂದೆ ಶೀಂಟೂರು ನಾರಾಯಣ ರೈಗಳ ಶಿಸ್ತು, ಸಮಯಪಾಲನೆ ಹಾಗೂ ಬದುಕು ಎಲ್ಲವೂ ಮಾದರಿ ಎಂದರು.

ಟಾಪ್ ನ್ಯೂಸ್

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.