ಯೋಧ ಜುಬೇರ್ಗೆ ರಾಮಕುಂಜೇಶ್ವರ ವಿದ್ಯಾಸಂಸ್ಥೆಯಲ್ಲಿ ಸಮ್ಮಾನ
Team Udayavani, Apr 7, 2018, 5:04 PM IST
ಕಡಬ: ದೇಶ ಪ್ರೇಮದ ಕೊರತೆಯಿಂದ ದೇಶದೊಳಗೆ ಅಭದ್ರತೆ ಕಾಡುತ್ತಿದೆ. ಯುವ ಜನತೆ ದೇಶ ಪ್ರೇಮವನ್ನು ಬೆಳೆಸಿಕೊಂಡು ದೇಶದ ರಕ್ಷಣಾ ಇಲಾಖೆಗೆ ಬಲತುಂಬಬೇಕು. ಯುವ ಜನತೆ ಸೇನೆಗೆ ಸೇರಲು ಮುಂದಾಗಬೇಕು ಎಂದು ಯೋಧ ಜುಬೇರ್ ಹಳೆನೇರೆಂಕಿ ಅವರು ಹೇಳಿದರು. ರಾಮಕುಂಜದ ಶ್ರೀ ರಾಮಕುಂಜೇಶ್ವರ ಕಾಲೇಜಿನಲ್ಲಿ ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆ ಮತ್ತು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಸಮ್ಮಾನ ಸಮಾರಂಭದಲ್ಲಿ ಸಮ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ದೇಶದ ಭದ್ರತೆಗೆ ಬೆಂಗಾವಲಾಗಿ ನಿಲ್ಲಬೇಕಾಗಿರುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಬೇಕು. ಯುವ ಸಮುದಾಯದಲ್ಲಿ ದೇಶದ ಕುರಿತು ಗೌರವ ಮೂಡಿಸುವ ಕಾರ್ಯಕ್ರಮಗಳು ಶಾಲಾ ಕಾಲೇಜುಗಳಲ್ಲಿ ನಡೆಯಬೇಕು ಎಂದ ಅವರು ಸೇವೆಯನ್ನು ಗುರುತಿಸಿ ಗೌರವಿಸಿದ ಎಲ್ಲಾರಿಗೂ ಕೃತಜ್ಞತೆ ಸಲ್ಲಿಸಿ ರಾಮಕುಂಜೇಶ್ವರ ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿಯಾಗಿರುವುದಕ್ಕೆ ಹೆಮ್ಮೆ ಎನಿಸುತೆ ಎಂದರು.
ಶಿಕ್ಷಕ ವೆಂಕಟೇಶ್ ದಾಮ್ಲೆ ಅವರು ಮಾತನಾಡಿ, ಕಾಶ್ಮಿರದ ಕಟ್ಟಡವೊಂದರಲ್ಲಿ ಅಡಗಿದ್ದ ಉಗ್ರರನ್ನು ಸದೆಬಡಿದ ನಮ್ಮ ದೇಶದ ಯೋಧರ ತಂಡದಲ್ಲಿ ನಮ್ಮೂರಿನ ಯುವಕ, ಕಾಲೇಜಿನ ಹಳೆವಿದ್ಯಾರ್ಥಿ ಜುಬೇರ್ ಪಾಲ್ಗೊಂಡಿರುವುದು ಹೆಮ್ಮೆಯ ವಿಚಾರ. ಅವರ ಧೈರ್ಯ, ಸಾಹಸ, ದೇಶ ಪ್ರೇಮದ ಕಿಚ್ಚು ಯುವ ಜನತೆಗೆ ಮಾದರಿಯಾಗಲಿ ಎಂದರು.
ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್. ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಕಟ್ಟಪುಣಿ ಅವರು ಸಮ್ಮಾನಿಸಿ ನೆರವೇರಿಸಿದರು. ಮುಖ್ಯಶಿಕ್ಷಕ ಸತೀಶ್ ಭಟ್ ಸ್ವಾಗತಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
H.D. Revanna: ಇಂದು ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ
Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ
I.N.D.I.A. ಯಿಂದ ವೋಟ್ ಜೆಹಾದ್: ಪ್ರಧಾನಿ ಮೋದಿ
T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್ ಅಗರ್ಕರ್
Rahul Gandhi: 400 ಮಹಿಳೆಯರ ಮೇಲೆ ಪ್ರಜ್ವಲ್ ಅತ್ಯಾಚಾರ – ರಾಹುಲ್ ಗಾಂಧಿ