ಕೊಳಂಬೆ ವಾಸಿಗಳಿಗೆ ಸೂರಿನ ಆಸರೆ

ಬದುಕು ಕಟ್ಟೋಣ ತಂಡದ ನೇತೃತ್ವದಲ್ಲಿ 12 ಮನೆ ನಿರ್ಮಾಣ

Team Udayavani, Apr 30, 2022, 9:30 AM IST

baduku-kattona

ಬೆಳ್ತಂಗಡಿ: 2019ರ ಆ. 9ರಂದು ಅಪ್ಪಳಿಸಿದ ನೆರೆಯ ಪರಿಣಾಮ, ಆಸರೆ ಕಳೆದುಕೊಂಡ ಚಾರ್ಮಾಡಿ ಗ್ರಾಮದ 12 ಕುಟುಂಬಗಳಿಗೆ ಈಗ ಸೂರಿನ ಆಸರೆ ದೊರೆಯುತ್ತಿದೆ.

ಭೀಕರ ನೆರೆಯಿಂದ ಮೃತ್ಯುಂಜಯ ನದಿಯೇರಿ ದಡ ದಾಟಿದ ನೀರು ಚಾರ್ಮಾಡಿ ಕೊಳಂಬೆಯ ಮೂರು ಮನೆಗಳನ್ನು ಸಂಪೂರ್ಣ ಜಲಸಮಾಧಿ ಮಾಡಿತ್ತು. ಅಕ್ಕಪಕ್ಕದ 20 ಮನೆಗಳು ಮರಳು ದಿಬ್ಬದೊಳಕ್ಕೆ ಹುದುಗಿದ್ದವು. ಕೃಷಿ ಭೂಮಿ ಮರಳು ಭೂಮಿಯಂತೆ ಕಾಣುತ್ತಿತ್ತು. ಕೊಳಂಬೆ ನಿವಾಸಿಗಳು ಊರೇ ಬಿಟ್ಟು ಹೋಗಿವ ಸ್ಥಿತಿ ನಿರ್ಮಾಣವಾಗಿತ್ತು. ಆಗ ಉಜಿರೆಯ ಬದುಕು ಕಟ್ಟೋಣ ತಂಡ ಊರಿನ ಪರಿವರ್ತನೆಗೆ ಟೊಂಕ ಕಟ್ಟಿತ್ತು.

ಕೃಷಿ ಭೂಮಿ, ಆಸರೆ ಮರು ಸೃಷ್ಟಿ

ಉಜಿರೆಯ ಉದ್ಯಮಿಗಳಾದ ಮೋಹನ್‌ ಕುಮಾರ್‌ ಹಾಗೂ ರಾಜೇಶ್‌ ಪೈ ನೇತೃತ್ವದಲ್ಲಿ ನೂರಕ್ಕೂ ಅಧಿಕ ಯುವಕರ ತಂಡ ಮರಳು ತೆರವುಗೊಳಿಸಿ 20ಕ್ಕೂ ಅಧಿಕ ಕುಟುಂಬಗಳ ಪರಿವರ್ತನೆಗೆ ನಿಂತಿತು. ಇದಕ್ಕೆ ಅನೇಕರು ಕೈ ಜೋಡಿಸಿದರು. ಹಲವು ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆ, ಗ್ರಾಮಾಭಿವೃದ್ಧಿ ಯೋಜನೆ ಸೇರಿ 5,000ಕ್ಕೂ ಮಿಕ್ಕಿ ಮಂದಿ ಶ್ರಮದಾನದ ಮೂಲಕ ನೆರವಾಗಿದ್ದರು.

ಎರಡು ವರ್ಷಗಳ ಪರಿಶ್ರಮ

ಕೊಳಂಬೆಯಲ್ಲಿ 12 ಮನೆಗಳನ್ನು ಗುರುತಿಸಿ ಕಂದಾಯ ಇಲಾಖೆ ವರದಿ ನೀಡಿತ್ತು. ಬದುಕು ಕಟ್ಟೋಣ ತಂಡ ಎರಡು ವರ್ಷಗಳಿಂದ 20 ಮನೆಗಳಿಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಹಾಗೂ ಹರ್ಷೇಂದ್ರ ಹೆಗ್ಗಡೆ ಸಹಕಾರದೊಂದಿಗೆ ದಾನಿ ಗಳ ಸಹಕಾರದಿಂದ ಮನೆಯ ಅಡುಗೆ ಸಲ ಕರ ಣೆಯಿಂದ ಹಿಡಿದು ಜೀವನಕ್ಕೆ ಬೇಕಾಗುವ ಎಲ್ಲ ಸಲ ಕರಣೆ ಒದಗಿಸಿತ್ತು. 20ಕ್ಕೂ ಅಧಿಕ ವಿದ್ಯಾರ್ಥಿ ಗಳು ದಾಖಲೆ ಪತ್ರ ಕಳೆದುಕೊಂಡಿದ್ದರು. ಅವರಿಗೆ ಬೇಕಾದ ಪಠ್ಯ ಪುಸ್ತಕ ಒದಗಿಸಿ ಶಿಕ್ಷಣಕ್ಕೂ ದಾನಿಗಳು ನೆರವಾಗಿದ್ದರು.

40 ಎಕ್ರೆಯ ಚಿತ್ರಣವೇ ಬದಲು

ಕೊಳಂಬೆಯಲ್ಲಿ 20 ಕುಟುಂಬದ ಒಟ್ಟು 40 ಎಕ್ರೆ ಸ್ಥಳವಿದ್ದು, ಎರಡು ವರ್ಷಗಳಲ್ಲಿ ಸಂಪೂರ್ಣ ಕೃಷಿ ಚಟುವಟಿಕೆ ಮರುಸ್ಥಾಪನೆ ಮಾಡಲಾಗಿದೆ. ಸುಮಾರು 5 ಎಕ್ರೆಯಷ್ಟು ವಿಸ್ತಾರದ ಗದ್ದೆಯ ಮರಳು ತೆರವುಗೊಳಿಸಲಾಗಿದೆ.

ಒದಗಿ ಬಂದ ಆಸರೆ

ಮನೆ ಕಳೆದುಕೊಂಡವರಿಗೆ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 5 ಲಕ್ಷ ರೂ. ಘೋಷಣೆ ಮಾಡಿದ್ದರು. 12 ಮನೆಗಳಿಗೆ ಸರಕಾರದಿಂದ ಬಂದ ತಲಾ 5 ಲಕ್ಷ ರೂ., ಶಾಸಕ ಹರೀಶ್‌ ಪೂಂಜ ಅವರ ಕಾಳಜಿ ಫಂಡ್‌ ರಿಲೀಫ್‌ ಫಂಡ್‌ ನಿಂದ ತಲಾ 1 ಲಕ್ಷ ರೂ., ಫಲಾನುಭವಿಗಳಿಂದ ತಲಾ 2 ಲಕ್ಷ ರೂ., ಉಳಿದ ಮೊತ್ತವನ್ನು ಬದುಕು ಕಟ್ಟೋಣ ತಂಡವೇ ಭರಿಸಿ ತಲಾ 13.50 ಲಕ್ಷ ರೂ. ನಲ್ಲಿ ಪ್ರತೀ ಮನೆ ನಿರ್ಮಿಸಲಾಗಿದೆ.

ಮನೆಗಳ ವಿಶೇಷತೆ

ವಾಸ್ತು ಪ್ರಕಾರವೇ ಅಚ್ಚುಕಟ್ಟಾಗಿ ಮನೆ ನಿರ್ಮಿಸಲಾಗಿದೆ. ಭವಿಷ್ಯದಲ್ಲಿ ನೆರೆ ಸಂಭವಿಸಿದರೂ ಹಾನಿಯಾಗದಂತೆ ಎಂಜಿನಿಯರ್‌ ಮಾರ್ಗದರ್ಶನದಲ್ಲಿ ಕಾಂಕ್ರಿಟ್‌ ಪಿಲ್ಲರ್‌ ಅಳವಡಿಸಿ ಅಡಿಪಾಯ ನಿರ್ಮಿಸಲಾಗಿದೆ. ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್‌ ಅವರ ಮಾರ್ಗದರ್ಶನದಲ್ಲಿ ಎಂಜಿನಿಯರ್‌ ಯಶೋಧರ ಉಚಿತವಾಗಿ ಪ್ಲ್ರಾನಿಂಗ್‌ ಮಾಡಿಕೊಟ್ಟಿದ್ದಾರೆ.

ತಂಡದ ಸೇವೆ ಆದರ್ಶ

ಸಂತ್ರಸ್ತರಿಗೆ ಬದುಕು ಕಟ್ಟೋಣ ತಂಡ ಹೊಸ ಬದುಕು ಕಟ್ಟಿ ಕೊಟ್ಟಿದೆ. ಸರಕಾರದ ಅನುದಾನ, ಕಾಳಜಿ ಫಂಡ್‌ ನೆರವಿನಿಂದ ಭದ್ರ ಬುನಾದಿ ರೂಪಿಸಿದ್ದು ಸಮಾಜ ಸೇವೆಗೆ ತಂಡದ ಕಾರ್ಯ ಆದರ್ಶವಾಗಿದೆ. ಹರೀಶ್‌ ಪೂಂಜ, ಶಾಸಕರು

ಸಂತೃಪ್ತಿ ಇದೆ

ಸಮಾಜದ ಅಭಿವೃದ್ಧಿಗಾಗಿ ಸಮರ್ಪಣ ಭಾವದಿಂದ ನೆರವಾಗಿದ್ದೇವೆ. ಸಂತ್ರಸ್ತರಿಗೆ ನೀಡಿದ ಭರವಸೆಯನ್ನು ಈಡೇರಿಸಿದ್ದೇವೆ ಎಂಬ ತೃಪ್ತಿ ನಮಗಿದೆ. ಮೋಹನ್‌ ಕುಮಾರ್‌, ಸಂಚಾಲಕರು, ಬದುಕು ಕಟ್ಟೋಣ ತಂಡ

ದಾನಿಗಳ ಪರಿಶ್ರಮ

ನಮ್ಮ ಬದುಕು ಮತ್ತೆ ಹೊಸತನಕ್ಕೆ ಸಾಕ್ಷಿಯಾಗುತ್ತದೆ ಎಂದು ಅಂದುಕೊಂಡಿರಲಿಲ್ಲ. ಇಂದು ಹೊಸ ಮನೆ ಕನಸು ನನಸಾಗಿದೆ ಎಂದರೆ ಅದು ದಾನಿಗಳ ಪರಿಶ್ರಮ. ನಿಶಾಂತ್‌ ಕೊಳಂಬೆ, ಸಂತ್ರಸ್ತ

ಚೈತ್ರೇಶ್‌ ಇಳಂತಿಲ

 

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.