ಕ್ವಾರಂಟೈನ್‌ ವ್ಯವಸ್ಥೆಗೆ ಅಡ್ಡಿಪಡಿಸಿದರೆ ಜೈಲು ಖಚಿತ

ಪುತ್ತೂರು ತಹಶೀಲ್ದಾರ್‌ ಎಚ್ಚರಿಕೆ

Team Udayavani, May 22, 2020, 4:40 AM IST

ಕ್ವಾರಂಟೈನ್‌ ವ್ಯವಸ್ಥೆಗೆ ಅಡ್ಡಿಪಡಿಸಿದರೆ ಜೈಲು ಖಚಿತ

ಪುತ್ತೂರು: ಹೊರ ರಾಜ್ಯಗಳಿಂದ ಬಂದು ಇಲ್ಲಿ ಕ್ವಾರಂಟೈನ್‌ ವ್ಯವಸ್ಥೆಗೆ ಒಳಗಾದವರಿಗೆ ಆಹಾರ ನೀಡುವವರಿಗೆ ಸ್ಥಳೀಯರು ಬೆದರಿಕೆ ಹಾಕುತ್ತಿರುವುದು ತಾಲೂಕು ಆಡಳಿತದ ಗಮನಕ್ಕೆ ಬಂದಿದ್ದು, ವ್ಯವಸ್ಥೆಗೆ ಅಡ್ಡಿ ಪಡಿಸುವವರ ವಿರುದ್ಧ ವಿಪತ್ತು ನಿರ್ವಹಣೆ ಕಾಯಿದೆಯಡಿಯಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಜೈಲು ಶಿಕ್ಷೆ ನೀಡಲಾಗುವುದು ಎಂದು ಪುತ್ತೂರು ತಹಶೀಲ್ದಾರ್‌ ರಮೇಶ್‌ ಬಾಬು ಎಚ್ಚರಿಕೆ ನೀಡಿದ್ದಾರೆ.

ಹೊರ ರಾಜ್ಯಗಳಲ್ಲಿದ್ದು, ಕೋವಿಡ್ 19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಊರಿಗೆ ಬರಲಾರದೆ ಸಂಕಷ್ಟಪಡುತ್ತಿದ್ದವರಿಗೆ ಸರಕಾರ ಊರಿಗೆ ಬರಲು ಅವಕಾಶ ಕಲ್ಪಿಸಿದೆ. ಹೀಗೆ ಬಂದವರನ್ನು 14 ದಿನಗಳ ಕಾಲ ಕ್ವಾರಂಟೈನ್‌ ವ್ಯವಸ್ಥೆಗೆ ಒಳಪಡಿಸಲಾಗುತ್ತಿದೆ. ಇದಕ್ಕಾಗಿ ಪುತ್ತೂರು ತಾಲೂಕಿನಲ್ಲಿ 121 ಸರಕಾರಿ ಹಾಗೂ 13 ಖಾಸಗಿ ಕ್ವಾರಂಟೈನ್‌ ವ್ಯವಸ್ಥೆ ಮಾಡಲಾಗಿದೆ ಎಂದರು.

ಈ ಕ್ವಾರಂಟೈನ್‌ ವ್ಯವಸ್ಥೆಯೊಳಗಿರುವ ಜನತೆಗೆ ಸ್ಥಳೀಯರು ಹಾಗೂ ಈ ಕುಟುಂಬದ ಸಂಬಂಧಿಗಳು ಊಟ ನೀಡುವ ಅವಕಾಶವನ್ನೂ ನೀಡಲಾಗಿದೆ. ಆದರೆ ಈ ರೀತಿ ಊಟ ತಂದು ಕೊಡುವ ವ್ಯಕ್ತಿಗಳಿಗೆ ಅಡ್ಡಿಪಡಿಸುವ ಘಟನೆಗಳು ನಡೆಯುತ್ತಿವೆ. ಇಂತಹ ಅಡ್ಡಿಪಡಿಸುವಿಕೆ ಕಾನೂನು ಬಾಹಿರವಾಗಿದ್ದು, ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳ ಲಾಗುವುದು ಎಂದು ಅವರು ತಿಳಿಸಿದರು.

ಕ್ವಾರಂಟೈನ್‌ ವ್ಯವಸ್ಥೆಯಲ್ಲಿರುವವರು ಕೋವಿಡ್ 19 ಪೀಡಿತರಲ್ಲ. ಅವರು ನಮ್ಮವರೇ ಆಗಿದ್ದಾರೆ. ಅಂಥವರಿಗೆ ಊಟದ ವ್ಯವಸ್ಥೆ ಮಾಡುವುದಕ್ಕೆ ಅಡ್ಡಿಪಡಿಸುವುದು ಸರಿಯಲ್ಲ ಎಂದರು.

ನಗರದ ವಸತಿ ಶಾಲೆಯಲ್ಲಿ ಹೊರರಾಜ್ಯದಿಂದ ಬಂದ 15 ಮಂದಿಗೆ ಕ್ವಾರಂಟೈನ್‌ ವ್ಯವಸ್ಥೆ ಮಾಡಲಾಗಿದ್ದು, ಇಲ್ಲಿಗೆ ಊಟ ತಂದು ಕೊಡುವ ವ್ಯಕ್ತಿಗೆ ಸ್ಥಳೀಯ ಕೆಲವರಿಂದ ಬೆದರಿಕೆ ಬಂದಿತ್ತು. ಈ ಕುರಿತು ಪೊಲೀಸ್‌ ಇಲಾಖೆ ವತಿಯಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ತಾ.ಪಂ.ನಿಂದ ಊಟದ ವ್ಯವಸ್ಥೆ
ಗ್ರಾ.ಪಂ. ಮಟ್ಟದಲ್ಲಿ ಸರಕಾರಿ ಕ್ವಾರಂಟೈನ್‌ನಲ್ಲಿರುವವರಿಗೆ ಗ್ರಾ.ಪಂ. ವತಿಯಿಂದ ಊಟದ ವ್ಯವಸ್ಥೆ ಮಾಡ ಲಾಗಿದೆ. ತಾಲೂಕು ಕೇಂದ್ರಗಳಲ್ಲಿ ತಾ.ಪಂ. ವತಿಯಿಂದ ಈ ವ್ಯವಸ್ಥೆ ಕೈಗೊಳ್ಳ ಲಾಗಿದೆ. ಇದಕ್ಕಾಗಿ ತಾ.ಪಂ.ಗೆ 20 ಸಾವಿರ ರೂ. ಅನುದಾನವನ್ನು ಸರಕಾರ ನೀಡಿದೆ ಎಂದವರು ತಿಳಿಸಿದರು.

ಬಲ್ನಾಡು ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಹಾರಾಡಿಯ ಕೊಂಬೆಟ್ಟು ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿದ ತಹಶೀಲ್ದಾರ್‌ ರಮೇಶ್‌ ಬಾಬು ಕ್ವಾರಂಟೈನ್‌ ವ್ಯವಸ್ಥೆಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ರವಿಕುಮಾರ್‌, ತಾ.ಪಂ. ವ್ಯವಸ್ಥಾಪಕ ಶಿವಪ್ರಕಾಶ್‌ , ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲ ಶ್ರೀನಿವಾಸ್‌ ನಾಯ್ಕ ಉಪಸ್ಥಿತರಿದ್ದರು.

ಸಾವಿರ ಮಂದಿ ನಿರೀಕ್ಷೆ
ಈಗಾಗಲೇ ಪುತ್ತೂರು ತಾಲೂಕಿಗೆ ಹೊರರಾಜ್ಯಗಳಿಂದ 79 ಮಂದಿ ಬಂದಿದ್ದಾರೆ. ಇವರಿಗೆ ಕ್ವಾರಂಟೈನ್‌ ಸರಕಾರಿ, ಖಾಸಗಿ ವ್ಯವಸ್ಥೆ ಮಾಡಲಾಗಿದೆ. 10 ಮಂದಿ ಮಹಿಳೆಯರಿಗೆ ಹೋಂ ಕ್ವಾರಂಟೈನ್‌ ವ್ಯವಸ್ಥೆ ಮಾಡಲಾಗಿದೆ. ಗ್ರಾಮಮಟ್ಟದಲ್ಲಿ ಸರಕಾರಿ ಶಾಲೆಗಳು, ನಗರದಲ್ಲಿ ವಿದ್ಯಾರ್ಥಿ ನಿಲಯಗಳು ಹಾಗೂ ಲಾಡ್ಜ್ ಗಳನ್ನು ಈ ವ್ಯವಸ್ಥೆಗಳನ್ನು ಮಾಡಲಾಗಿದೆ. ತಾಲೂಕಿಗೆ ಸುಮಾರು 1000 ಮಂದಿ ಬರುವ ನಿರೀಕ್ಷೆ ಇದೆ, ಆದರೂ 3,094 ಮಂದಿಗೆ ಬೇಕಾದಷ್ಟು ಕ್ವಾರಂಟೈನ್‌ ವ್ಯವಸ್ಥೆ ಸಿದ್ಧಗೊಳಿಸಲಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.