ಅಕ್ರಮ ಗೋ ಸಾಗಾಟಕ್ಕೆ ತಡೆ: ನಗ, ನಗದು ಕಾಣೆ ಆರೋಪ: ಮಜ್ಜಾರು ಕ್ಷೇತ್ರಕ್ಕೆ ದೂರು


Team Udayavani, Nov 9, 2022, 6:55 AM IST

ಅಕ್ರಮ ಗೋ ಸಾಗಾಟಕ್ಕೆ ತಡೆ: ನಗ, ನಗದು ಕಾಣೆ ಆರೋಪ: ಮಜ್ಜಾರು ಕ್ಷೇತ್ರಕ್ಕೆ ದೂರು

ಕಡಬ: ಕೆಲವು ದಿನಗಳ ಹಿಂದೆ ಕೋಡಿಂಬಾಳದ ಮುರಚೆಡವು ಬಳಿ ಜಾನುವಾರು ಸಾಗಿಸುತ್ತಿದ್ದ ನಮ್ಮ ವಾಹನವನ್ನು ತಡೆದ ಬಜರಂಗದಳ ಕಾರ್ಯಕರ್ತರು ನಮ್ಮ ಚಿನ್ನದ ಚೈನ್‌ ಹಾಗೂ ನಗದು ಅಪಹರಿಸಿದ್ದಾರೆ ಎಂದು ಜಾನುವಾರು ಸಾಗಿಸುತ್ತಿದ್ದವರು ಕೋಡಿಂಬಾಳದ ಮಜ್ಜಾರು ಕಾರಣಿಕ ಕ್ಷೇತ್ರಕ್ಕೆ ದೂರು ನೀಡಿರುವ ಘಟನೆ ನಡೆದಿದೆ.

ಏನೆಕಲ್ಲು ನಿವಾಸಿಗಳಾದ ಸುಧೀರ್‌ ಹಾಗೂ ಬೆಳಿಯಪ್ಪ ಅವರು ಅಕ್ರಮವಾಗಿ ಪಿಕಪ್‌ ನಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಕಡಬದ ವಿಹಿಂಪ ಹಾಗೂ ಬಜರಂಗದಳ ಕಾರ್ಯಕರ್ತರು ತಡೆಯೊಡ್ಡಿ ಆರೋಪಿಗಳು ಹಾಗೂ ಜಾನುವಾರು ಇದ್ದ ವಾಹನವನ್ನು ಪೊಲೀಸರಿಗೆ ಹಸ್ತಾಂತರಿಸಿದ್ದರು. ಘಟನೆಯ ಸಂದರ್ಭ ಜಾನುವಾರು ಸಾಗಾಟದಾರರೊಬ್ಬರ ಚಿನ್ನದ ಚೈನು ಹಾಗೂ ಹಣ ಕಾಣೆಯಾಗಿದ್ದು, ಅದನ್ನು ಕಡಬ ಪ್ರಖಂಡ ವಿಹಿಂಪ ಕಾರ್ಯದರ್ಶಿ ಪ್ರಮೋದ್‌ ರೈ ನಂದುಗುರಿ, ಗೋ ರಕ್ಷಾ ಪ್ರಮುಖ್‌ ಜಯಂತ ಕಲ್ಲುಗುಡ್ಡೆ, ಬಜರಂಗದಳದ ರಕ್ಷಿತ್‌ ಕೇಪು, ಸಂತೋಷ್‌ ದೋಳ, ತೀರ್ಥೇಶ್‌ ಮೀನಾಡಿ ಕದ್ದಿದ್ದಾರೆ ಎಂದು ಕೋಡಿಂಬಾಳದ ಮಜ್ಜಾರು ಕಾರಣಿಕ ಕ್ಷೇತ್ರಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ಮಂಗಳವಾರ ಕ್ಷೇತ್ರದಲ್ಲಿ ಕ್ಷೇತ್ರದ ಅಧ್ಯಕ್ಷ ಪ್ರಸಾದ ಕೆದಿಲಾಯ ಅವರ ನೇತೃತ್ವದಲ್ಲಿ ದೂರು ವಿಚಾರಣೆ ನಡೆಸಲಾಯಿತು.

ಆರೋಪ ನಿರಾಕರಣೆ
ವಿಚಾರಣೆಗೆ ಹಾಜರಾಗಿದ್ದ ಬಜರಂಗದಳ ಕಾರ್ಯಕರ್ತರು ದೂರುದಾರರ ಆರೋಪವನ್ನು ನಿರಾಕರಿಸಿ ನಾವು ಅಕ್ರಮವಾಗಿ ಕಸಾಯಿಖಾನೆಗೆ ಗೋವುಗಳನ್ನು ಸಾಗಾಟ ಮಾಡುತ್ತಿದ್ದುದನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದು ನಿಜ. ಆದರೆ ಚಿನ್ನ, ಹಣ ಕದ್ದಿಲ್ಲ, ಅದನ್ನು ನೋಡಿಯೂ ಇಲ್ಲ, ಆ ಬಗ್ಗೆ ನೀವು ದೈವದ ಸಾನಿಧ್ಯದಲ್ಲಿ ಪ್ರಾರ್ಥನೆ ಮಾಡಿಕೊಳ್ಳಲು ನಮ್ಮದೇನು ಅಭ್ಯಂತವಿಲ್ಲ. ಆದರೆ ನೀವು ಅಕ್ರಮವಾಗಿ ಕಸಾಯಿಖಾನೆಗೆ ಜಾನುವಾರುಗಳನ್ನು ಹಿಂಸಾತ್ಮಾಕ ರೀತಿಯಲ್ಲಿ ಸಾಗಿಸುತ್ತಿದ್ದರೂ ಒಪ್ಪಿಕೊಳ್ಳದೆ, ಜಾನುವಾರನ್ನು ತಂಗಿಯ ಮನೆಗೆ ಸಾಕಲು ಕೊಂಡೊಯ್ಯುತ್ತಿರುವುದಾಗಿ ಸುಳ್ಳು ಹೇಳಿದ್ದೀರಿ. ಅದನ್ನೇ ದೈವದ ಸಾನಿಧ್ಯದ ಎದುರು ಹೇಳುವಂತೆ ಕೇಳಿಕೊಂಡರು. ಆ ಸಂದರ್ಭದಲ್ಲಿ ಜಾನುವಾರು ಸಾಗಿಸಿದವರ ಪೈಕಿ ಸುಧೀರ್‌ ಅವರು ತನ್ನ ತಪ್ಪನ್ನು ಒಪ್ಪಿಕೊಂಡು ಘಟನೆಯ ವೇಳೆ ನಾವು ತಂಗಿಯ ಮನೆಗೆ ಜಾನುವಾರು ಸಾಗಿಸುತ್ತಿದ್ದುದು ಎಂದು ಸುಳ್ಳು ಹೇಳಿದ್ದೇವೆ. ನಾವು ವ್ಯಕ್ತಿಯೋರ್ವರಿಗೆ ಕೊಡುವುದಕ್ಕಾಗಿ ಜಾನುವಾರು ಸಾಗಿಸುತ್ತಿದ್ದುದಾಗಿ ಹೇಳಿ ಮುಂದೆ ಅಕ್ರಮ ಕಸಾಯಿಖಾನೆಗೆ ಜಾನುವಾರು ಸಾಗಾಟ ಮಾಡುವುದಿಲ್ಲ ಎಂದು ಕ್ಷಮೆ ಯಾಚಿಸಿದರು.

ಆ ಬಳಿಕ ಚಿನ್ನ ಮತ್ತು ಹಣ ಕಾಣೆಯಾಗಿರುವ ಬಗ್ಗೆ ರಾಜನ್‌ ದೈವದ ಸಾನಿಧ್ಯದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ಮಜ್ಜಾರು ಕ್ಷೇತ್ರದ ಪ್ರಮುಖರಾದ ಸುದರ್ಶನ ಗೌಡ, ಮಾಧವ ಕೋಲ್ಪೆ, ರಘುರಾಮ ನಾೖಕ್‌ ಕುಕ್ಕೆರೆಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.