ಬೆಳ್ತಂಗಡಿ: ಗೋ ಅಕ್ರಮ ಸಾಗಾಟ; 2 ವಾಹನ ಸಹಿತ ಮೂವರ ವಶ
Team Udayavani, Aug 18, 2022, 6:21 PM IST
ಬೆಳ್ತಂಗಡಿ: ನಡ ಗ್ರಾಮದ ಮಂಜೊಟ್ಟಿ ಅಂತ್ರಾಯಪಲ್ಕೆಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾನುವಾರುಗಳು, 2 ವಾಹನಗಳು ಹಾಗೂ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದ ಘಟನೆ ಗುರುವಾರ ಮುಂಜಾನೆ ನಡೆದಿದೆ.
ಆರೋಪಿಗಳಾದ ರಫೀಕ್, ರಜಾಕ್ ಪಿ. ಹಾಗೂ ನಾಗೇಶ್ ಶೆಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳ್ತಂಗಡಿ ಠಾಣಾ ಪಿಎಸ್ಐ ನಂದಕುಮಾರ್ ನೇತೃತ್ವದ ತಂಡ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಮಾರುತಿ 800 ಕಾರನ್ನು ತಡೆದು ನಿಲ್ಲಿಸಿದಾಗ ಅದರ ಚಾಲಕ ರವೂಫ್ ಓಡಿ ಪರಾರಿಯಾಗಿದ್ದಾನೆ. ಕಾರಿನ ಹಿಂಬದಿ ಬರುತ್ತಿದ್ದ ಕ್ವಾಲಿಸ್ ವಾಹನವನ್ನು ತಪಾಸಣೆ ನಡೆಸಿದಾಗ ಎರಡು ದನ ಹಾಗೂ ಒಂದು ಕರುವನ್ನು ಹಿಂಸಾತ್ಮಕ ರೀತಿಯಲ್ಲಿ ಕೈಕಾಲು ಕಟ್ಟಿ ತುಂಬಿಸಿ ಸಾಗಾಟ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.
ಎರಡು ವಾಹನ ಹಾಗೂ ಜಾನುವಾರು ಸಹಿತ ವಶಪಡಿಸಿಕೊಂಡು ಸೊತ್ತುಗಳ ಒಟ್ಟು ಮೌಲ್ಯ 4.15 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ