ಉಪ್ಪಿನಂಗಡಿ: ಅಕ್ರಮ ಪ್ರವೇಶ, ಜೀವಬೆದರಿಕೆ; ದೂರು
Team Udayavani, Sep 29, 2022, 5:16 PM IST
ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕೌಕ್ರಾಡಿ ಗ್ರಾಮದಲ್ಲಿನ ಬೆಥನಿ ಕಾನ್ವೆಂಟ್ ನೆಲ್ಯಾಡಿ ಎನ್ನುವ ಸಂಸ್ಥೆಗೆ ಯುವಕರಿಬ್ಬರು ಅಕ್ರಮ ಪ್ರವೇಶಗೈದು ಆಕ್ರಮಣಕಾರಿಯಾಗಿ ವರ್ತಿಸಿ ಜೀವ ಬೆದರಿಕೆಯೊಡ್ಡಿದ ಘಟನೆ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡಬ ತಾಲೂಕಿನ ಪೇರಡ್ಕ ನಿವಾಸಿ ಸದ್ದಾಂ (31) ಮತ್ತು ಇಸ್ಮಾಯಿಲ್ (24) ಮಂಗಳವಾರ ಸಂಜೆ ಅಕ್ರಮ ಪ್ರವೇಶ ಮಾಡಿದ್ದನ್ನು ಕಂಡ ಕಾನ್ವೆಂಟ್ನಲ್ಲಿದ್ದ ಸಿಸ್ಟರ್ ಪರಿಮಳ ಅವರು, ಯಾಕಾಗಿ ಕಾನ್ವೆಂಟ್ ಒಳಗೆ ಬಂದಿರುವಿರಿ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ನಮ್ಮನ್ನು ಪ್ರಶ್ನಿಸಲು ನೀನು ಯಾರು? ನಾವು ಯಾವಾಗ ಬೇಕಾದರೂ ಬರುತ್ತೇವೆ ಎಂದು ಬೈದಿದ್ದಾರೆ. ವಿಷಯ ತಿಳಿದು ಚರ್ಚ್ನಿಂದ ಸ್ಥಳಕ್ಕೆ ಆಗಮಿಸಿದ ಸೋನು ಜಾರ್ಜ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಅನಂತರ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಸಿಸ್ಟರ್ ಪರಿಮಳ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಮರಿ ಪುಡಾರಿಗಳು ತಮ್ಮದೇ ಆದ ಸಾಮ್ರಾಜ್ಯ ಸ್ಥಾಪಿಸಲು ಮುಂದಾಗುತ್ತಿದ್ದು, ಮನಸೋ ಇಚ್ಚೆ ವರ್ತನೆ ತೋರುತ್ತಿರುವ ದೂರುಗಳ ಮಧ್ಯೆ ಇದೀಗ ದ್ಯಾರ್ಥಿನಿಯರು ಇರುವ ಕಾನ್ವೆಂಟ್ ಗೆ ನುಗ್ಗಿ ದಾಂಧಲೆ ಮಾಡುವಷ್ಟು ಧೈರ್ಯ ತೋರಿದ್ದು ನಾಗರಿಕ ಸಮಾಜದಲ್ಲಿ ಕಳವಳವನ್ನು ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ