ಮಹಾತ್ಮನ ನೆನಪಿನಲ್ಲಿ ಮಿಡಿಯಲಿ ಪುತ್ತೂರಿಗರ ಮನ

ಗಾಂಧೀಜಿ ಭಾಷಣ ಮಾಡಿದ್ದ ಸ್ಥಳದಲ್ಲೀಗ ಗಾಂಧಿ ಪ್ರತಿಮೆಯೂ ಇಲ್ಲ ಕಟ್ಟೆಯೂ ಇಲ್ಲ

Team Udayavani, Oct 2, 2019, 5:32 AM IST

c-38

ನಗರ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ 85 ವರ್ಷಗಳ ಹಿಂದೆ ಪುತ್ತೂರಿಗೆ ಭೇಟಿ ನೀಡಿದ ಅವಿಸ್ಮರಣೀಯ ಕುರುಹುಗಳು ನಿಧಾನವಾಗಿ ಮರೆಯಾಗುತ್ತಿರುವ ಆತಂಕ ಎದುರಾಗಿದೆ.

ಮಹಾತ್ಮಾ ಗಾಂಧೀಜಿ ಬಂದು ಭಾಷಣ ಮಾಡಿದ್ದ ಸ್ಥಳದಲ್ಲಿ ಈಗ ಗಾಂಧಿ ಪ್ರತಿಮೆ, ಗಾಂಧಿ ಕಟ್ಟೆಯೂ ಇಲ್ಲ. ಖಾಲಿಯಾಗಿರುವ ಸ್ಮಾರಕ ಸ್ಥಳದಲ್ಲಿ ಬುಧವಾರ ಗಾಂಧೀಜಿ ಅವರ 150ನೇ ಜನ್ಮದಿನದಂದು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಣೆ ನಡೆಯಲಿದೆ.

ಪುತ್ತೂರಿನ ಐತಿಹಾಸಿಕ ಗಾಂಧಿ ಕಟ್ಟೆಯನ್ನು ಅಭಿವೃದ್ಧಿ ಮಾಡುವ ಕಾಮಗಾರಿ ಸ್ಥಗಿತಗೊಂಡಿದೆ. ರಸ್ತೆ ಪಕ್ಕದಲ್ಲಿ ಕೆಲಸ ಮಾಡಲಾಗುತ್ತಿದೆ ಎಂದು ಆಪಾದಿಸಿ ಖಾಸಗಿ ವ್ಯಕ್ತಿಯೊಬ್ಬರು ಹೈಕೋರ್ಟಲ್ಲಿ ದಾವೆ ಹೂಡಿದ್ದು, ನಾಲ್ಕು ತಿಂಗಳ ಹಿಂದೆ ಕಾಮಗಾರಿಗೆ ತಡೆಯಾಜ್ಞೆ ಸಿಕ್ಕಿದೆ. ಕಾಮಗಾರಿ ಕಾರಣದಿಂದ ಗಾಂಧಿ ಪ್ರತಿಮೆಯನ್ನು ನಗರಸಭೆ ಆಡಳಿತವು ಸ್ಥಳಾಂತರಿಸಿದೆ.

ಆ. 15 ರಂದು ಸ್ವಾತಂತ್ರ್ಯ ದಿನಾಚಣೆ ಸಂದರ್ಭ ಗಾಂಧಿ ಕಟ್ಟೆ ಇಲ್ಲದ ಕಾರಣ ಅದೇ ಸ್ಥಳದಲ್ಲಿ ತಾತ್ಕಾಲಿಕ ಧ್ವಜಸ್ತಂಭ ನೆಟ್ಟು ತ್ರಿವರ್ಣ ಧ್ವಜ ಹಾರಿಸಲಾಗಿತ್ತು. ಗಾಂಧಿ ಜಯಂತಿಗೆ ಮೊದಲಾದರೂ ತಡೆಯಾಜ್ಞೆ ತೆರವುಗೊಂಡು ಗಾಂಧಿ ಕಟ್ಟೆಯ ಕೆಲಸ ಪೂರ್ತಿಯಾಗಬಹುದು ಎಂಬ ನಿರೀಕ್ಷೆಯೂ ಹುಸಿಯಾಗಿದೆ.

ಸಾಂಕೇತಿಕ ಆಚರಣೆ
ಗಾಂಧಿಕಟ್ಟೆ ಅಭಿವೃದ್ಧಿ ಸಮಿತಿ ಅ. 2ರಂದು ಗಾಂಧಿ ಕಟ್ಟೆ ಸ್ಥಳದಲ್ಲಿ ಸಾಂಕೇತಿಕವಾಗಿ ಗಾಂಧಿ ಜಯಂತಿ ಆಚರಿಸಲು ನಿರ್ಧರಿಸಿದೆ. ರಾಷ್ಟ್ರಪಿತನ ಭಾವಚಿತ್ರ ಇಟ್ಟು ಪುಷ್ಪಾರ್ಚನೆ ಮಾಡಲಿದ್ದೇವೆ. ಪ್ರತೀ ವರ್ಷ ಗಾಂಧಿ ಪ್ರತಿಮೆಗೆ ಹಾರಾರ್ಪಣೆ ಮಾಡುತ್ತಿದ್ದೆವು. ಈ ಬಾರಿ ಅದಾಗುತ್ತಿಲ್ಲ ಎಂಬುದು ಬೇಸರದ ಸಂಗತಿ ಎಂದು ಸಮಿತಿಯ ಮುಖಂಡ ಕೃಷ್ಣ ಪ್ರಸಾದ್‌ ಆಳ್ವ ಪ್ರತಿಕ್ರಿಯಿಸಿದ್ದಾರೆ.

ಗಾಂಧಿ ಭೇಟಿ ನೆನಪು
ಮಹಾತ್ಮಾ ಗಾಂಧೀಜಿ ಅವರು ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆಯಲ್ಲಿ 1934ರಲ್ಲಿ ಪುತ್ತೂರಿಗೆ ಆಗಮಿಸಿದ್ದರು. ಇಲ್ಲಿನ ಕೇಂದ್ರ ಸ್ಥಾನದ ಬಸ್ಸು ನಿಲ್ದಾಣದ ಬಳಿಯಲ್ಲಿದ್ದ ಅಶ್ವತ್ಥ ಮರದ ಅಡಿಯಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದರು. ಆ ಸಂದರ್ಭದಲ್ಲಿ ಅವರನ್ನು ಹಿರಿಯರಾಗಿದ್ದ ಕಾರ್ನಾಡ್‌ ಸದಾಶಿವ ರಾಯ, ಡಾ| ಶಿವರಾಮ ಕಾರಂತ, ಸುಂದರ್‌ ರಾವ್‌ ಸ್ವಾಗತಿಸಿ, ಗೌರವಿಸಿದ್ದರು.

ಪುತ್ತೂರಿಗೆ ಆಗಮಿಸಿದ್ದಾಗ ಮೊದಲಿಗೆ ರಾಗಿದಕುಮೇರು ಕಾಲನಿಗೆ ತೆರಳಿದ್ದ ಗಾಂಧೀಜಿ, ಕೋರ್ಟ್‌ ರಸ್ತೆಯಲ್ಲಿರುವ ಸುಂದರ್‌ ರಾವ್‌ ಅವರ ಮನೆಯಲ್ಲಿ ಸ್ಪಲ್ಪ ಹೊತ್ತು ವಿಶ್ರಾಂತಿ ಪಡೆದಿದ್ದರು. ಆ ಬಳಿಕ ಬಸ್ಸು ನಿಲ್ದಾಣದ ಬಳಿಯಲ್ಲಿರುವ ಅಶ್ವತ್ಥ ಮರದ ಅಡಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು. ಮಡಿಕೇರಿಯಿಂದ ಸುಳ್ಯ ರಸ್ತೆಯ ಮೂಲಕ ಕಾಲ್ನಡಿಗೆಯಲ್ಲಿ ಪುತ್ತೂರಿಗೆ ಆಗಮಿಸಿದ ಮಹಾತ್ಮಾ ಗಾಂಧೀಜಿ ಅವರು ಇಲ್ಲಿಂದ ಮಂಗಳೂರು ಮೂಲಕ ತೆರಳಿದ್ದರು ಎಂದು ಹಿರಿಯರು ನೆನಪಿಸಿಕೊಳ್ಳುತ್ತಾರೆ.

ಬಾವಿ ನಿರ್ಲಕ್ಷ್ಯ
ಗಾಂಧೀಜಿ ನಗರದ ಹೊರವಲಯದಲ್ಲಿರುವ ರಾಗಿದಕುಮೇರು ದಲಿತ ಕಾಲನಿ ಹಾಗೂ ಬೊಟ್ಟತ್ತಾರು (ಬ್ರಹ್ಮನಗರ) ಕಾಲನಿಗೆ ಭೇಟಿ ನೀಡಿ ಅಲ್ಲಿನ ದಲಿತರ ಪರಿಸ್ಥಿತಿಯನ್ನು ಅವಲೋಕನ ಮಾಡಿದ್ದರು. ಈ ಸಂದರ್ಭ ರಾಗಿದಕುಮೇರಿ ಕಾಲನಿಯ ಜನರು ಕುಡಿಯಲು ತೋಡಿನ ನೀರನ್ನು ಬಳಸುತ್ತಿರುವುದನ್ನು ಗಮನಿಸಿದ ಗಾಂಧೀಜಿ ಅಲ್ಲೊಂದು ತೆರೆದ ಬಾವಿ ತೋಡಿಸುವಂತೆ ಸೂಚನೆ ನೀಡಿದ್ದರು. ಕಾಲನಿಯ ಜನರಿಗೆ ಕುಡಿಯುವ ನೀರಿಗಾಗಿ ತೆರೆದ ಬಾವಿ ನಿರ್ಮಿಸಲಾಗಿತ್ತು. ಆ ಬಾವಿ ಈಗಲೂ ಇದ್ದರೂ ಬಳಕೆಯಾಗುತ್ತಿಲ್ಲ. ಗಾಂಧೀಜಿ ನೆನಪಿನ ಬಾವಿಯನ್ನು ಅಭಿವೃದ್ಧಿಪಡಿಸಿ ಮತ್ತೆ ಬಳಕೆ ಮಾಡಬೇಕೆನ್ನುವ ಆಗ್ರಹ ವ್ಯಕ್ತವಾದರೂ ಇದುವರೆಗೆ ಸಾಧ್ಯವಾಗಿಲ್ಲ. ಪುತ್ತೂರು ಸಹಾಯಕ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರೂ ಕ್ರಮ ಕೈಗೊಂಡಿಲ್ಲ.

 ನಿರೀಕ್ಷೆ ಈಡೇರಲಿಲ್ಲ
ಗಾಂಧಿ ಕಟ್ಟೆಯ ತಡೆಯಾಜ್ಞೆ ತೆರವಿಗೆ ನಗರಸಭೆ ಹೈಕೋರ್ಟ್‌ನಲ್ಲಿ ಪ್ರಯತ್ನ ನಡೆಸುತ್ತಿದೆ. ಸಮಯ ಇನ್ನೂ ಒಂದು ತಿಂಗಳು ಮುಂದಕ್ಕೆ ಹೋಗಿದೆ. ಗಾಂಧಿ ಜಯಂತಿಗೆ ಮುನ್ನ ತೊಡಕು ನಿವಾರಣೆಯಾದೀತು ಎಂಬ ನಿರೀಕ್ಷೆ ಇತ್ತು. ಅದು ಈಡೇರಿಲ್ಲ.
– ರೂಪಾ ಟಿ. ಶೆಟ್ಟಿ, ಪೌರಾಯುಕ್ತೆ, ನಗರಸಭೆ

 ಶೀಘ್ರ ಕಟ್ಟೆ ನಿರ್ಮಾಣವಾಗಲಿ
ಮಹಾತ್ಮಾ ಗಾಂಧೀಜಿಯವರ ಕುರಿತು ಆಡಳಿತ ವ್ಯವಸ್ಥೆ ನಿರ್ಲಕ್ಷ್ಯದ ಧೋರಣೆ ತೋರದು ಎನ್ನುವ ನಂಬಿಕೆ, ಭರವಸೆ ಇದೆ. ಗಾಂಧಿ ಕಟ್ಟೆ ಶೀಘ್ರದಲ್ಲಿ ಆಗಬೇಕು ಎಂದು ಆಗ್ರಹಿಸುತ್ತಿದ್ದೇವೆ. ಈ ನಿಟ್ಟಿನಲ್ಲಿ ನಮ್ಮ ಹೋರಾಟಗಳೂ ಮುಂದುವರಿಯಲಿವೆ. ಈ ಬಾರಿ ಅದೇ ಸ್ಥಳದಲ್ಲಿ ಸಾಂಕೇತಿಕವಾಗಿ ಗಾಂಧಿ ಜಯಂತಿ ಆಚರಿಸುತ್ತೇವೆ. ಗಾಂಧೀಜಿಯವರ 150ನೇ ಜನ್ಮದಿನಾಚರಣೆಯ ಹಿನ್ನೆಲೆಯಲ್ಲಿ ಸಮಿತಿಯಿಂದ ಈ ವರ್ಷವಿಡೀ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ.
– ಕೃಷ್ಣಪ್ರಸಾದ್‌ ಆಳ್ವ, ಸಂಚಾಲಕ, ಗಾಂಧಿ ಕಟ್ಟೆ ಅಭಿವೃದ್ಧಿ ಸಮಿತಿ

ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.