ಸ್ವ-ಉದ್ಯೋಗಕ್ಕೆ ಯುವಕರು ಮುಂದಾಗಬೇಕು: ಮಠಂದೂರು


Team Udayavani, Jul 20, 2018, 12:50 PM IST

20-july-10.jpg

ಪುತ್ತೂರು : ನಮ್ಮ ನಮ್ಮ ಊರುಗಳಲ್ಲೇ ಸ್ವಂತ ನೆಲೆಯಿಂದಲೂ ಉದ್ಯೋಗವನ್ನು ಸೃಜಿಸುವ ತನ್ಮೂಲಕ ಒಳ್ಳೆಯ ಬದುಕನ್ನು ಕಟ್ಟಿಕೊಳ್ಳುವ ಅವಕಾಶ ಈಗಿನ ಯುವ ಸಮುದಾಯಕ್ಕಿದೆ. ಆದರೆ ಪ್ರತಿಯೊಬ್ಬನೂ ತನ್ನೊಳಗಿನ ಶಕ್ತಿಯನ್ನು ಅರಿಯುವುದು ಅತೀ ಅಗತ್ಯ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಮಾರ್ಗದರ್ಶನದಲ್ಲಿ ವಿವೇಕಾನಂದ ಉದ್ಯೋಗ ಮಾಹಿತಿ ಮತ್ತು ತರಬೇತಿ ಕೇಂದ್ರವು ವಿವೇಕಾನಂದ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ ವಿವೇಕ ಉದ್ಯೋಗ ಮೇಳವನ್ನು ಅವರು ಉದ್ಘಾಟಿಸಿದರು.

ವ್ಯಕ್ತಿಯೊಳಗೆ ಛಲ ಹಾಗೂ ಉತ್ಕಟ ಬಯಕೆ ಇದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಮುಂಬೈಯ ಸ್ಟಾರ್‌ ಹೋಟೇಲೊಂದರ ಮಾಲಿಕ ಕೇವಲ ಹತ್ತನೆಯ ತರಗತಿ ಓದಿದ್ದಾರೆ. ಆದರೆ, ಅಲ್ಲಿ ಕೆಲಸಕ್ಕಿರುವವರು ಹೊಟೇಲ್‌ ಮ್ಯಾನೇಜ್‌ ಮೆಂಟ್‌ ಸ್ನಾತಕೋತ್ತರ ಪದವೀಧರರು. ನಾವೇನು ಓದಿದ್ದೇವೆ ಅನ್ನುವುದಕ್ಕಿಂತ ನಮ್ಮೊಳಗಿನ ಕನಸುಗಳೇನು ಅನ್ನುವುದು ಬಹಳ ಮುಖ್ಯ ಎಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಬಸವ ರಾಜ್‌ಎಸ್‌. ಜವಳಿ ಮಾತನಾಡಿ, ನಿಜವಾಗಿ ಉದ್ಯೋಗಿಗಳ ಕೈಹಿಡಿಯುವವರು ಸಣ್ಣ ಕೈಗಾರಿಕೋದ್ಯಮಿಗಳೇ ಹೊರತು ದೊಡ್ಡವರಲ್ಲ. ಉದ್ಯೋಗ ಆರಂಭಿ ಸುವಾಗ ಹೊಸಬರಿಗೆ ಅವಕಾಶ ಕಲ್ಪಿಸಿಕೊಡುತ್ತಿರುವವರು ಸಣ್ಣ ಉದ್ಯೋಗದಾತರು. ಆದರೆ ಒಮ್ಮೆ ಕೆಲಸ ಕಲಿತ ಅನಂತರ ಉದ್ಯೋಗಿಗಳು ದೊಡ್ಡ ದೊಡ್ಡ
ಕೈಗಾರಿಕೆಗಳೆಡೆಗೆ ಮನ ಮಾಡುವುದು ಸಮಸ್ಯೆಯಾಗಿ ಪರಿಣಮಿಸುತ್ತಿದೆ ಎಂದರು. 

ಸ್ವಾಭಿಮಾನದ ಬದುಕು
ಅಧ್ಯಕ್ಷತೆ ವಹಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್‌ ಕಲ್ಲಡ್ಕ ಮಾತನಾಡಿ, ಪ್ರತಿಯೊಬ್ಬನೂ ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಬೇಕು. ಭಾರತದಲ್ಲಿ ನೂತನ ಉದ್ದಿಮೆ ಸ್ಥಾಪಿಸುವುದಕ್ಕೆ ಎಷ್ಟು ಅವಕಾಶವಿದೆಯೋ ಅಷ್ಟೇ ಅವಕಾಶ ಒಬ್ಬ ಉದ್ಯೋಗಿಯಾಗಿ ಬೆಳೆಯುವುದಕ್ಕೂ ಇದೆ. ತಾನು ಕೆಲಸ ಮಾಡುತ್ತಿರುವ ಸಂಸ್ಥೆಯಲ್ಲಿ ಇನ್ನಷ್ಟು ಹೊಸತನ ತರುವ ದೃಷ್ಟಿಯಿಂದ ಹೇಗೆ ಕಾರ್ಯ ನಿರ್ವಹಿಸಬಹುದೆಂಬುದನ್ನು ಉದ್ಯೋಗಿಗಳು ಯೋಚಿಸಬೇಕು ಎಂದು ಸಲಹೆ ನೀಡಿದರು.

ಒಡಂಬಡಿಕೆಗೆ ಸಹಿ
ವಿವೇಕಾನಂದ ಉದ್ಯೋಗ ಮಾಹಿತಿ ಮತ್ತು ತರಬೇತಿ ಕೇಂದ್ರದ ಕುರಿತ ಕಿರು ಪುಸ್ತಿಕೆಯನ್ನು ಲೋಕಾರ್ಪಣೆಗೊಳಿಸಲಾಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘ ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಸಂಘದ ನಡುವಿನ ಒಡಂಬಡಿಕೆಗೆ ಎರಡೂ ಸಂಸ್ಥೆಗಳ ಕಾರ್ಯದರ್ಶಿಗಳು ಸಹಿ ಹಾಕಿದರು. ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ| ಕೆ. ಎಂ. ಕೃಷ್ಣ ಭಟ್‌, ಸಣ್ಣ ಕೈಗಾರಿಕೆ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್‌ ಕುಲಕರ್ಣಿ ಉಪಸ್ಥಿತರಿದ್ದರು.

ವಿವೇಕಾನಂದ ಉದ್ಯೋಗ ಮತ್ತು ಮಾಹಿತಿ ಕೇಂದ್ರದ ಕಾರ್ಯದರ್ಶಿ ರಾಜಗೋಪಾಲ್‌ ಸ್ವಾಗತಿಸಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ವಿಶೇಷ ಅಧಿಕಾರಿ ವೆಂಕಟೇಶ್‌ ಪ್ರಸ್ತಾವನೆಗೈದರು. ವಿವೇಕಾನಂದ ಎಂಜಿನಿಯರಿಂಗ್‌ ಕಾಲೇಜಿನ ಅಧ್ಯಕ್ಷ ಸತೀಶ್‌ರಾವ್‌ ವಂದಿಸಿದರು. ವಿವೇಕಾನಂದ ಪದವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ| ರೋಹಿಣಾಕ್ಷ ಶಿರ್ಲಾಲು ಕಾರ್ಯಕ್ರಮ ನಿರ್ವಹಿಸಿದರು.

ಹೊಂದಾಣಿಕೆ ಕೊರತೆ
ಒಂದೆಡೆ ಓದಿದವರಿಗೆ ಉದ್ಯೋಗ ದೊರಕುತ್ತಿಲ್ಲ. ಇನ್ನೊಂದೆಡೆ ಉದ್ದಿಮೆದಾರರಿಗೆ ಉದ್ಯೋಗಿಗಳು ಸಿಗುತ್ತಿಲ್ಲ ಎನ್ನುವ ವಿಶಿಷ್ಟ ಸಂಗತಿಗೆ ನಾವು ಸಾಕ್ಷಿಯಾಗುತ್ತಿದ್ದೇವೆ. ಇದನ್ನು ಕಾಣುವಾಗ ಎಲ್ಲೋ ಸಣ್ಣ ಹೊಂದಾಣಿಕೆಯ ಕೊರತೆ ಕಾಣುತ್ತಿದೆ. ಇದನ್ನು ಸರಿಪಡಿಸಿದಾಗ ವ್ಯವಸ್ಥೆ ಸುಸೂತ್ರವಾಗಿ ಮುಂದುವರೆಯುವುದಕ್ಕೆ ಸಾಧ್ಯ ಎಂದು ಬಸವರಾಜ್‌ಎಸ್‌. ಜವಳಿ ಹೇಳಿದರು. 

ಟಾಪ್ ನ್ಯೂಸ್

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.