ವಿಟ್ಲ: ಬದನಾಜೆಯ ಬಸ್ ತಂಗುದಾಣದಲ್ಲಿ ರಕ್ತದ ಕಲೆ; ಕುಡಿದು ಬಿದ್ದಿರುವ ವ್ಯಕ್ತಿಯದೆಂದು ಶಂಕೆ
Team Udayavani, Jun 29, 2022, 12:44 PM IST
ವಿಟ್ಲ: ವಿಟ್ಲ ಸಮೀಪದ ಬದನಾಜೆಯ ಸಾರ್ವಜನಿಕ ಬಸ್ ತಂಗುದಾಣದಲ್ಲಿ ರಕ್ತದ ಕಲೆ ಪತ್ತೆಯಾಗಿ, ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದರು.
ಬಸ್ ನಿಲ್ದಾಣದಲ್ಲಿ ಯಾರನ್ನಾದರೂ ಹತ್ಯೆ ಮಾಡಲಾಗಿತ್ತೇ ಅಥವಾ ಅಪಘಾತದಿಂದ ಗಾಯಗೊಂಡವರು ಯಾರಾದರೂ ಬಸ್ ನಿಲ್ದಾಣದಲ್ಲಿ ಕುಳಿತು ಮತ್ತೆ ಆಸ್ಪತ್ರೆಗೆ ತೆರಳಿರಬಹುದೇ ಎಂಬ ಅನುಮಾನಗಳು ವ್ಯಕ್ತವಾದ ಬೆನ್ನಲ್ಲೇ ತನಿಖೆ ನಡೆಸಿದ ಪೊಲೀಸರಿಗೆ ಬದನಾಜೆ ಬಸ್ ತಂಗುದಾಣದಲ್ಲಿದ್ದುದು ನೆಲ್ಲಿಗುಡ್ಡೆಯ ವ್ಯಕ್ತಿಯೆಂದು ತಿಳಿದುಬಂದಿದೆ.
ಈತ ವಿಟ್ಲ ಸಂತೆ ನಡೆಯುವ ಕಟ್ಟಡದ ಬಳಿ ಬಿದ್ದುಕೊಂಡಿದ್ದನೆನ್ನಲಾಗಿದೆ. ವಿಟ್ಲ ಪೊಲೀಸರು ಮಾಹಿತಿ ತಿಳಿದು ಪರೀಕ್ಷಿಸಿದಾಗ ಬದನಾಜೆಯಿಂದ ಆತ ಬಂದಿದ್ದಾನೆಂದು ಖಚಿತವಾಯಿತು. ವಿಟ್ಲಕಸಬಾ ಗ್ರಾಮದ ನೆಲ್ಲಿಗುಡ್ಡೆಯ ಹಂಝ ಎಂದು ಆತನನ್ನು ಗುರುತಿಸಲಾಗಿದೆ.
ಈತ ಕಂಠಪೂರ್ತಿ ಅಮಲುಪದಾರ್ಥ ಸೇವಿಸಿ, ಆಯ ತಪ್ಪಿಬಿದ್ದಿರಬೇಕು. ಗಾಯಗೊಂಡ ಆತನ ಶರೀರದಿಂದ ರಕ್ತ ಬಿದ್ದಿರಬೇಕೆಂದು ಊಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು