ಬಂಟ್ವಾಳ: ವೃದ್ಧೆಗೆ ಚಿತ್ರಹಿಂಸೆ; ಪುತ್ರ-ಸೊಸೆಯ ವಿರುದ್ಧ ಪ್ರಕರಣ ದಾಖಲು
Team Udayavani, Jul 7, 2022, 8:35 PM IST
ಬಂಟ್ವಾಳ: ಬಿದ್ದು ಗಾಯಗೊಂಡು ನಡೆಯಲಾಗದ ಸ್ಥಿತಿಯಲ್ಲಿದ್ದ ಬೆಂಜನಪದವಿನ ವೃದ್ಧೆಯೊಬ್ಬರನ್ನು ಶೌಚಾಲಯದಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡುತ್ತಿದ್ದ ಘಟನೆಗೆ ಸಂಬಂಧಿಸಿ ಆರೋಪಿಗಳಾದ ವೃದ್ಧೆಯ ಪುತ್ರ ಹಾಗೂ ಸೊಸೆಯ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಜಪದವು ನಿವಾಸಿ ಹರಿರಾಂ ಹಾಗೂ ಆತನ ಪತ್ನಿ ಪೂಜಾ ವೃದ್ಧೆಯನ್ನು ಶೌಚಾಲಯದಲ್ಲಿ ಕೂಡಿ ಹಾಕಿದ ಆರೋಪಿಗಳು. ಘಟನೆಯ ಕುರಿತು ವೃದ್ಧೆ ಗಿರಿಜಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಗಿರಿಜಾ ಅವರಿಗೆ 70 ವರ್ಷ ವಯಸ್ಸಾಗಿದ್ದು, ಅವರು ಪುತ್ರನೊಂದಿಗೆ ವಾಸವಿದ್ದರು.
ಇದನ್ನೂ ಓದಿ: ರಾಮ ಮಂದಿರ ಮುಂದೆ ಯುವಕರು ಭಿಕ್ಷೆ ಬೇಡ್ತಾರೆ : ಪ್ರಿಯಾಂಕ್
2020ರ ಜನವರಿಯಲ್ಲಿ ಗಿರಿಜಾ ಅವರು ಅವರ ಮನೆಯ ಜಗಲಿಯಲ್ಲಿ ಕಾಲು ಜಾರಿ ಬಿದ್ದು ಗಾಯವಾಗಿದ್ದು, ಆದರೆ ಪುತ್ರ ಹಾಗೂ ಸೊಸೆ ಅದಕ್ಕೆ ಚಿಕಿತ್ಸೆ ನೀಡಿರಲಿಲ್ಲ. ಹೀಗಾಗಿ ಅವರು ನಡೆಯಲು ಸಾಧ್ಯವಾಗದೆ ಹಾಸಿಗೆ ಹಿಡಿದಿದ್ದರು. ಈ ರೀತಿ ಹಾಸಿಗೆ ಹಿಡಿದ ಅವರನ್ನು ಯಾವುದೇ ರೀತಿ ಆರೈಕೆ ಮಾಡದೆ ಶೌಚಗೃಹದಲ್ಲಿ ಹಾಕಿ ಒಂದೇ ಹೊತ್ತು ಊಟ ಮತ್ತು ಚಹಾ ನೀಡುತ್ತಿರುವ ಜತೆಗೆ ಸೊಸೆಯು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಳು.
ಈ ಕುರಿತು ಜು. 6ರಂದು ನಾಗರಿಕ ಸಮಿತಿಯವರು ಮಾಹಿತಿ ತಿಳಿದು ಗಿರಿಜಾ ಅವರನ್ನು ಶೌಚಗೃಹದಿಂದ ಹೊರಗೆ ಕರೆತಂದು ಉಪಚರಿಸಿ ಬಳಿಕ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ