ಬೆಳ್ತಂಗಡಿ: ಶಾಲಾ ವಾಹನ ರಿಕ್ಷಾ ಢಿಕ್ಕಿ, ಓರ್ವ ಸ್ಥಳದಲ್ಲೇ ಸಾವು
Team Udayavani, Dec 24, 2022, 1:13 PM IST
ಬೆಳ್ತಂಗಡಿ: ಕೊಯ್ಯೂರು ಗ್ರಾಮದ ಮಲೆಬೆಟ್ಟು ಬಳಿ ಶನಿವಾರ (ಡಿ.24 ರಂದು) ಬೆಳಗ್ಗೆ ಗೂಡ್ಸ್ ರಿಕ್ಷಾ ಹಾಗೂ ಶಾಲಾ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟ ಘಟನೆ ನಡೆದಿದೆ.
ಗೂಡ್ಸ್ ರಿಕ್ಷಾದಲ್ಲಿದ್ದ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ರಝಾಕ್(50) ಸಾವನ್ನಪ್ಪಿದವರು.
ರಿಕ್ಷಾ ಚಾಲಕ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಹನೀಫ್(48), ಪಣಕಜೆ ನಿವಾಸಿ ಕೆ.ಮೊಹಮ್ಮದ್(57) ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಕೊಯ್ಯೂರಿನಿಂದ ಶಾಲಾ ಮಕ್ಕಳನ್ನು ಬಸ್ ನಲ್ಲಿ ಉಜಿರೆಗೆ ಕರೆದೊಯ್ಯುತ್ಯಿದ್ದಾಗ ಶಾಲಾ ಬಸ್ ಬೆಳ್ತಂಗಡಿಯಿಂದ ಕೊಯ್ಯೂರು ಕಡೆಗೆ ತೆರಳುತ್ತಿದ್ದ ಗೂಡ್ಸ್ ರಿಕ್ಷಾಗೆ ಢಿಕ್ಕಿ ಹೊಡೆದಿದೆ.
ಘಟನೆಯಲ್ಲಿ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು