ಕೃಷಿ ಜಾಗಕ್ಕೆ ಅಕ್ರಮ ಪ್ರವೇಶಿಸಿ ಹಲ್ಲೆ ಆರೋಪ: ದೂರು ದಾಖಲು
Team Udayavani, Dec 29, 2022, 6:01 PM IST
ಪುತ್ತೂರು: ಕೃಷಿ ಜಾಗಕ್ಕೆ ಸಹೋದರ ಅಕ್ರಮ ಪ್ರವೇಶಿಸಿ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿರುವುದಾಗಿ ಆರೋಪಿಸಿ ಮಹಿಳೆಯೋರ್ವರು ನೀಡಿದ ದೂರಿನಂತೆ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುರಿಯ ಗ್ರಾಮದ ಡಿಂಬ್ರಿ ನಿವಾಸಿ ಶಂಕರ್ ಭಂಡಾರಿ ಅವರ ಪತ್ನಿ ಆಶಾ ಶಂಕರ್ ಭಂಡಾರಿ ದೂರು ನೀಡಿದವರು. ಸಹೋದರ ಅರುಣ್ ಕುಮಾರ್ ರೈ ಮತ್ತು ಕೆಲಸಗಾರರಾದ ವಿನಯ ಮತ್ತು ಸುಂದರ ಜಾಗದಲ್ಲಿ ಅಕ್ರಮವಾಗಿ ತಂತಿ ಬೇಲಿ ಕಂಬ ಹಾಕುತ್ತಿದ್ದು, ಈ ಕುರಿತು ಪ್ರಶ್ನಿಸಿದಾಗ ನನಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂಧಿಸಿ, ಮಾನಭಂಗಕ್ಕೆ ಯತ್ನಿಸಿದ್ದಾರಲ್ಲದೆ ಕೊಲೆ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿದ್ದಾರೆ. ಹಲ್ಲೆಗೊಳಗಾದ ಆಶಾ ಶಂಕರ್ ಭಂಡಾರಿ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.