ಹೊಳೆಗಳಲ್ಲಿ ನೀರಿನ ಹರಿವು ಹೆಚ್ಚಳ
ಬೇಸಗೆ ಮಳೆಯಿಂದ ಒರತೆಗಳ ಮರುಪೂರಣ
Team Udayavani, Mar 4, 2020, 12:31 AM IST
ಮುಂಡಾಜೆ ಸಮೀಪ ಮೃತ್ಯುಂಜಯ ನದಿನೀರಿನ ಹರಿವು.
ಮುಂಡಾಜೆ: ಕೆಲವು ದಿನಗಳಿಂದ ಕರಾವಳಿ ಮತ್ತು ಒಳನಾಡುಗಳಲ್ಲಿ ಸುರಿದಿರುವ ಅಪರೂಪದ ಬೇಸಗೆ ಮಳೆ ತೊರೆಗಳು ಮತ್ತು ಹೊಳೆಗಳಲ್ಲಿ ನೀರಿನ ಹರಿವು ಹೆಚ್ಚುವಂತೆ ಮಾಡಿದೆ. ಪಶ್ಚಿಮ ಘಟ್ಟದ ತಪ್ಪಲು ಭಾಗದಲ್ಲಿ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನ ಹೊಳೆಗಳಲ್ಲಿ ಹರಿವಿನ ಮಟ್ಟ ಏರಿದೆ. ಒರತೆ ಇನ್ನೂ ಆರುವ ಮೊದಲೇ ಈ ಮಳೆ ಸುರಿದಿರುವುದು ಹರಿವು ಬಲವಾಗಲು ಪೂರಕವಾಗಿದೆ.
ಕೆಲವು ದಿನಗಳಿಂದ ನದಿಗಳಲ್ಲಿ ನೀರಿನ ಪ್ರಮಾಣ ಇಳಿದಿದ್ದರಿಂದ ಕೃಷಿಗೆ ನೀರುಣಿಸಲು ಆತಂಕ ಎದುರಾಗಿತ್ತು. ಆದರೆ ಸೋಮವಾರ ದಿಡುಪೆ, ಮಲವಂತಿಗೆ, ಮಿತ್ತಬಾಗಿಲು, ತೋಟತ್ತಾಡಿ, ನೆರಿಯ, ಚಿಬಿದ್ರೆ ಪರಿಸರಗಳಲ್ಲಿ ಉತ್ತಮ ಮಳೆಯಾಗಿದ್ದು, ನೇತ್ರಾವತಿ ಮತ್ತು ಮೃತ್ಯುಂಜಯ ನದಿಗಳು ಹರಿವನ್ನು ಹೆಚ್ಚಿಸಿಕೊಂಡಿವೆ. ಮೃತ್ಯುಂಜಯ ಹೊಳೆಯಲ್ಲಿ ಅಂದಾಜು ಎರಡು ಅಡಿಗಳಷ್ಟು ನೀರು ಹೆಚ್ಚಿದೆ ಎಂಬು
ದಾಗಿ ಸ್ಥಳೀಯರು ತಿಳಿಸಿದ್ದಾರೆ.
ಮುಂದಿನ ಇನ್ನೂ ಒಂದೆರಡು ದಿನ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದು ನಿಜವಾದರೆ ಹರಿವು ಇನ್ನಷ್ಟು ಹೆಚ್ಚಿ ನೇತ್ರಾವತಿಯೂ ಸ್ವಲ್ಪ ಮೈದುಂಬಿಕೊಳ್ಳಬಹುದು. ಇದರಿಂದ ತುಂಬೆ ಕಿಂಡಿ ಅಣೆಕಟ್ಟಿಗೂ ಹೆಚ್ಚು ನೀರು ಹರಿದು ಬಂದು ಮಂಗಳೂರು ನಗರದಲ್ಲಿ ಬೇಸಗೆಯಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗುವ ಆತಂಕ ಸ್ವಲ್ಪ ಮಟ್ಟಿಗಾದರೂ ದೂರವಾಗಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ