ಎಲ್ಲ ಶಾಲೆಗಳ ಬಿಸಿಯೂಟ ಸಾಮಗ್ರಿ ತನಿಖೆ


Team Udayavani, Jul 10, 2019, 5:00 AM IST

s-19

ಪುತ್ತೂರು: ಪುತ್ತೂರು ತಾಲೂ ಕಿನ ಹಾರಾಡಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳ ಬಿಸಿಯೂಟದ ಅಕ್ಕಿ ದುರುಪಯೋಗ ಪ್ರಕರಣದಲ್ಲಿ ಶಾಲಾ ಮುಖ್ಯ ಶಿಕ್ಷಕರ ಅಮಾನತಾಗಿದ್ದು, ಈ ಪ್ರಕರಣ ವನ್ನು ಗಂಭೀರವಾಗಿ ಪರಿಗಣಿಸಿ ತಾಲೂ ಕಿನ ಎಲ್ಲ ಶಾಲೆಗಳ ಬಿಸಿಯೂಟದ ಆಹಾರ ಪದಾರ್ಥಗಳ ತನಿಖೆ ನಡೆಸುವಂತೆ ಪುತ್ತೂರು ತಾಲೂಕು ಪಂಚಾಯತ್‌ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್‌ ಅವರು ಅಧಿಕಾರಿಗಳಿಗೆ ಆದೇಶಿಸಿದರು.

ಮಂಗಳವಾರ ತಾ.ಪಂ. ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿ, ತಾಲೂಕಿನಲ್ಲಿ 238 ಸರಕಾರಿ ಶಾಲೆಗಳಿದ್ದು, ಅಲ್ಲಿ ಬಿಸಿಯೂಟ ಯೋಜನೆಯಲ್ಲಿ ಖರ್ಚಾಗುವ ಅಕ್ಕಿ ಎಷ್ಟು? ಉಳಿಕೆ ಅಕ್ಕಿ, ಇತರ ಆಹಾರ ಪದಾರ್ಥಗಳನ್ನು ಏನು ಮಾಡ ಲಾಗುತ್ತದೆ? ಎಂದು ತನಿಖೆ ನಡೆಸು ವಂತೆ ಅಧ್ಯಕ್ಷರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಅಕ್ಷರ ದಾಸೋಹ ಉಪ ನಿರ್ದೇಶಕರ ಕಚೇರಿ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನಲ್ಲಿ ಒಟ್ಟು ಐದು ಶಾಲೆಗಳ ಎಸ್‌ಡಿಎಂಸಿ ಅಧ್ಯಕ್ಷರು ದೂರವಾಣಿ ಮೂಲಕ ತನ್ನನ್ನು ಸಂಪರ್ಕಿಸಿ ಅಕ್ಕಿ ದುರುಪಯೋಗದ ಕುರಿತು ಮಾಹಿತಿ ನೀಡಿದ್ದಾರೆ. ಹೀಗಾಗಿ ಅದನ್ನು ಗಂಭೀರವಾಗಿ ಪರಿಗಣಿಸುವಂತೆ ಅಕ್ಷರ ದಾಸೋಹ ಉಪನಿರ್ದೇಶಕ ಸುರೇಶ್‌ ಕುಮಾರ್‌ ಅವರಿಗೆ ತಿಳಿಸಿದರು. ಪ್ರತಿ ಶಾಲೆಗೆ 15 ದಿನಗಳಿಗೊಮ್ಮೆ ತೆರಳಿ ಪರಿಶೀಲಿಸುವಂತೆ ಸಿಆರ್‌ಪಿ ಹಾಗೂ ಬಿಆರ್‌ಪಿಗಳಿಗೆ ತಿಳಿಸಲಾಗಿದೆ ಎಂದು ತಾ.ಪಂ. ಇಒ ಜಗದೀಶ್‌ ಎಸ್‌. ಸಭೆಗೆ ತಿಳಿಸಿದರು.

ತಾ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಹರೀಶ್‌ ಬಿಜತ್ರೆ ಅವರು ಕೈಕಾರ ವಿದ್ಯುತ್‌ ಸಬ್‌ಸ್ಟೇಷನ್‌ ಅನುಷ್ಠಾನ ಯಾವ ಹಂತದಲ್ಲಿದೆ ಎಂದು ಪ್ರಶ್ನಿಸಿದಾಗ, ಅದಕ್ಕೆ ಪ್ರತ್ಯೇಕ ಜಾಗವನ್ನು ಹುಡುಕಲಾಗಿದ್ದು, ವಿವರಗಳು ತಹಶೀಲ್ದಾರ್‌ ಕಚೇರಿಯಲ್ಲಿವೆ ಎಂದು ಮೆಸ್ಕಾಂ ಎಂಜಿನಿಯರ್‌ ಸಭೆಗೆ ತಿಳಿಸಿದರು. ಈ ಕುರಿತು ತತ್‌ಕ್ಷಣ ಗಮನಹರಿಸಿ ಕ್ರಮ ಕೈಗೊಳ್ಳುವಂತೆ ಪುತ್ತೂರು ತಹಶೀಲ್ದಾರ್‌ ಅನಂತ ಶಂಕರ್‌ ಅವರಿಗೆ ತಿಳಿಸಲಾಯಿತು.

ಸರಕಾರಿ ಬಸ್ಸುಗಳ ವಿರುದ್ಧ ಕ್ರಮ
ಕೆಎಸ್‌ಆರ್‌ಟಿ ಬಸ್ಸುಗಳು ಖಾಲಿ ಇದ್ದರೂ ವಿದ್ಯಾರ್ಥಿಗಳು ನೇತಾಡಿಕೊಂಡು ಹೋಗುತ್ತಾರೆ. ಈ ಕುರಿತು ಏನು ಕ್ರಮ ಎಂದು ತಾ.ಪಂ. ಅಧ್ಯಕ್ಷರು ಕೆಎಸ್‌ಆರ್‌ಟಿಸಿ ಅಧಿಕಾರಿ, ಪೊಲೀಸ್‌ ಇಲಾಖೆ ಹಾಗೂ ಆರ್‌ಟಿಒ ಅಧಿಕಾರಿಗಳನ್ನು ಪ್ರಶ್ನಿಸಿದರು. ತಾವು ಸರಕಾರಿ ಬಸ್ಸುಗಳೆಂದು ಹಾಗೇ ಬಿಟ್ಟಿದ್ದೇವೆ. ಮುಂದೆ ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದರೆ, ನಾವು ನಿರ್ವಾಹಕರಿಗೆ ಸ್ಪಷ್ಟ ಸೂಚನೆ ನೀಡುತ್ತೇವೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿ ಭರವಸೆ ನೀಡಿದರು.

ಕುಂಬ್ರದಲ್ಲಿ ಸ್ಟೇಜ್‌ ಇಲ್ಲ
ಕುಂಬ್ರದಲ್ಲಿ ವೇಗದೂತ ಬಸ್ಸುಗಳನ್ನು ನಿಲುಗಡೆ ಮಾಡುವಂತೆ 2003ರಲ್ಲಿಯೇ ಆದೇಶವಾಗಿದ್ದರೂ, ಈಗಲೂ ಅಲ್ಲಿ ವೇಗದೂತ ಬಸ್ಸುಗಳು ನಿಲ್ಲುತ್ತಿಲ್ಲ ಯಾಕೆ ಎಂದು ಸ್ಥಾಯೀ ಸಮಿತಿ ಅಧ್ಯಕ್ಷರು ಕೆಎಸ್‌ಆರ್‌ಟಿಸಿ ಅಧಿಕಾರಿಯನ್ನು ಪ್ರಶ್ನಿಸಿದರು. ಪುತ್ತೂರು ಹಾಗೂ ಮಂಗಳೂರು ವಿಭಾಗದ ಬಸ್ಸುಗಳು ಅಲ್ಲಿ ನಿಲ್ಲುತ್ತವೆ. ಆದರೆ ಸ್ಟೇಜ್‌ ಇಲ್ಲ ಎನ್ನುವ ಕಾರಣಕ್ಕೆ ಮೈಸೂರು ವಿಭಾಗದ ಬಸ್ಸುಗಳು ನಿಲ್ಲುತ್ತಿಲ್ಲ. ಈ ವಿಚಾರವನ್ನು ಸಂಬಂಧಪಟ್ಟವರ ಗಮನಕ್ಕೆ ತರಲಾಗುವುದು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿ ಸಭೆಗೆ ತಿಳಿಸಿದರು.

ಕಕ್ಕೂರು ಕೊಲೆ: ಮಾಹಿತಿ ಇಲ್ಲ
2012ರ ಜೂನ್‌ ತಿಂಗಳಲ್ಲಿ ಬೆಟ್ಟಂಪಾಡಿಯ ಕಕ್ಕೂರಿನಲ್ಲಿ ಒಂದೇ ಮನೆಯ ನಾಲ್ವರ ಹತ್ಯೆ ನಡೆಸಿದ್ದು, ಮನೆಯ ಯಜಮಾನ ವೆಂಕಟರಮಣ ಭಟ್ಟರು ನಾಪತ್ತೆಯಾಗಿದ್ದರು. ಕೆಲ ಸಮಯದ ಬಳಿಕ ಅಲ್ಲಿ ಅಸ್ಥಿಪಂಜರ ಲಭ್ಯವಾಗಿದ್ದು, ಅದು ವೆಂಕಟರಮಣ ಭಟ್ಟರದು ಎಂದು ಹೇಳಲಾಗಿದ್ದರೂ, ತನಿಖೆಯಲ್ಲಿ ಅದು ಅವರದ್ದಲ್ಲ ಎಂದು ಸಾಬೀತಾಗಿತ್ತು. ಪ್ರಸ್ತುತ ಈ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ ಎಂದು ತಾ.ಪಂ. ಅಧ್ಯಕ್ಷರು ಪ್ರಶ್ನಿಸಿದರು. ಈ ಕುರಿತು ತಮ್ಮಲ್ಲಿ ಸದ್ಯಕ್ಕೆ ಮಾಹಿತಿಯಿಲ್ಲ. ತಿಳಿದುಕೊಂಡು ಹೇಳುವುದಾಗಿ ಪೊಲೀಸ್‌ ಅಧಿಕಾರಿ ತಿಳಿಸಿದರು.

ನಿಡ್ಪಳ್ಳಿ ದೇವಸ್ಥಾನದ ವಠಾರದಲ್ಲಿ ಅಂಬೇಡ್ಕರ್‌ ಭವನಕ್ಕೆ ಮೀಸಲಿಟ್ಟ ಜಮೀನಿನಲ್ಲಿ ಅರಣ್ಯ ಇಲಾಖೆ ಗಿಡ ನೆಟ್ಟಿದೆ ಎನ್ನುವ ದೂರು ಬಂದಿದ್ದು, ಈ ಕುರಿತು ಪರಿಶೀಲಿಸುವಂತೆ ಅಧ್ಯಕ್ಷರು ಅರಣ್ಯ ಇಲಾಖೆ ಅಧಿಕಾರಿಗೆ ತಿಳಿಸಿದರು. ಉಪ್ಪಿನಂಗಡಿ ಹಾಸ್ಟೆಲ್ ಕಟ್ಟಡದ ಕುರಿತು ಮಾಹಿತಿ ಕೇಳಿದಾಗ, ಬೇರೆ ಕಟ್ಟಡವನ್ನು ನೋಡಲಾಗಿದ್ದು ಮುಂದೆ ಎಲ್ಲರ ಅನುಮತಿ ಪಡೆದು ಸ್ಥಳಾಂತರಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ಗಳಲ್ಲಿ ಪ.ಜಾತಿ ವಿದ್ಯಾರ್ಥಿಗಳ ಸೀಟು ಭರ್ತಿಯಾಗುತ್ತಿಲ್ಲ ಎಂದು ಅಧಿಕಾರಿ ಸಭೆಯ ಗಮನಕ್ಕೆ ತಂದರು.

ತಾಲೂಕಿನಲ್ಲಿ 23 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು, ಎಲ್ಲರೂ ಆರೋಗ್ಯವಾಗಿದ್ದಾರೆ. ಕಡಬ ಆಸ್ಪತ್ರೆಗೆ ಮಂಗಳೂರಿನ ಖಾಸಗಿ ವೈದ್ಯ ಕಾಲೇಜುಗಳಿಂದ ವೈದ್ಯರು ಆಗಮಿಸಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.