ನೀರು ಪೂರೈಕೆ ಯೋಜನೆಯ ಗೊಂದಲ ನಿವಾರಣೆ ಅತೀ ಅಗತ್ಯ


Team Udayavani, Mar 22, 2021, 3:10 AM IST

ನೀರು ಪೂರೈಕೆ ಯೋಜನೆಯ ಗೊಂದಲ ನಿವಾರಣೆ ಅತೀ ಅಗತ್ಯ

ಸಾಂದರ್ಭಿಕ ಚಿತ್ರ

ತಾಲೂಕಿನ ಸಜೀಪಮುನ್ನೂರು ಗ್ರಾಮದ ಆಲಾಡಿಯಲ್ಲಿ ಜಾಕ್‌ವೆಲ್‌ ನಿರ್ಮಿಸಿ ನೇತ್ರಾವತಿ ನದಿಯಿಂದ ಉಳ್ಳಾಲ ಹಾಗೂ ಕೋಟೆಕಾರು ನಗರ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆಯ ಕಾಮಗಾರಿ ನಡೆಯುತ್ತಿದೆ. ಪ್ರಾರಂಭದಿಂದಲೂ ಈ ಯೋಜನೆಗೆ ಸ್ಥಳೀಯರ ವಿರೋಧವಿದೆ. ಈಗಲೂ ಅದು ಮುಂದುವರಿದಿದೆ. ಹೀಗಾಗಿ ಈ ಕುರಿತು ಸ್ಥಳೀಯರ ಗೊಂದಲಗಳನ್ನು ನಿವಾರಿಸುವ ಕೆಲಸ ಆಗಬೇಕಿದೆ.

ಸ್ಥಳೀಯರು ಇದನ್ನು ವಿರೋಧಿಸುವುದಕ್ಕೆ ಮುಖ್ಯ ಕಾರಣವೆಂದರೆ, ಇಲ್ಲಿನ ಜನರ ನೀರಿನ ಬೇಡಿಕೆಯನ್ನು ಪೂರೈಸದೆ ಈ ಭಾಗದಿಂದ ನೀರನ್ನು  ಕೊಂಡೊಯ್ಯಲಾಗುತ್ತದೆ ಎಂದು. ಆದರೆ ಬಳಿಕ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಬಂಟ್ವಾಳ ತಾಲೂಕಿನ ಸ್ಥಳೀಯ 5 ಗ್ರಾಮ ಪಂಚಾಯತ್‌ಗಳಿಗೆ ಇದೇ ಯೋಜನೆಯಿಂದ ನೀರು ಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ. ಆದರೆ ಇದನ್ನು ಸ್ಪಷ್ಟವಾಗಿ ತಿಳಿಸಬೇಕು ಎಂಬುದು ಸ್ಥಳೀಯರ ವಾದವಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಸಜೀಪಮೂಡ ಗ್ರಾ.ಪಂ.ಆಡಳಿತ ಮಂಡಳಿ ಯೋಜನೆಯ ವಿರುದ್ಧ ಪ್ರತಿಭಟನೆ ನಡೆಸಿದ್ದು, ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಅಧಿಕಾರಿಗಳು ಗ್ರಾ.ಪಂ.ಗೆ ಯಾವುದೇ ರೀತಿಯ ಸ್ಪಂದನೆ ನೀಡುತ್ತಿಲ್ಲ. ಹೀಗಾಗಿ ನಮ್ಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಯಲು ಬಿಡುವುದಿಲ್ಲ ಎಂದು ಪ್ರತಿಭಟಿಸಿದ್ದರು. ಸಂಬಂಧಪಟ್ಟ ಅಧಿಕಾರಿಗಳು ಗ್ರಾ.ಪಂ.ಗೆ ಭೇಟಿ ನೀಡಿ ನೀರು ಕೊಡುವ ಕುರಿತು ಸ್ಪಷ್ಟವಾಗಿ ತಿಳಿಸಬೇಕು ಎಂಬುದು ಅವರ ವಾದವಾಗಿದೆ.

ಆಲಾಡಿ ಭಾಗದಿಂದ ನೀರು ಪೂರೈಕೆಯಾಗುವ ಪೈಪ್‌ಲೈನ್‌ ಕಾಮಗಾರಿಯ ವೇಳೆಯೇ, ನೀರು ಶುದ್ದೀಕರಣಗೊಂಡು ಹಿಂದೆ ಬರುವ ಪೈಪ್‌ಲೈನ್‌ ಹಾಕ ಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದ್ದು, ಇದಕ್ಕೆ  ಅಧಿಕಾರಿಗಳು ಕೂಡ ಒಪ್ಪಿಕೊಂಡಿದ್ದರು. ಆದರೆ ಈಗ ನೀರು ಹಿಂದೆ ಬರುವ ಪೈಪ್‌ ಹಾಕುತ್ತಿಲ್ಲ

ಎಂಬುದು ಗ್ರಾಮಸ್ಥರ ವಾದವಾಗಿದೆ. ಈ ರೀತಿ ಯೋಜನೆ ಪ್ರಾರಂಭದಿಂದಲೂ ಇಂತಹ ಗೊಂದಲಗಳಿದ್ದು, ಪ್ರಸ್ತುತ ಜಾಕ್‌ವೆಲ್‌ನ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದರೂ ಗೊಂದಲ ಮಾತ್ರ ಬಗೆಹರಿಯದಿರುವುದು ವಿಪರ್ಯಾಸವೇ ಸರಿ.

ಇಂತಹ ಪ್ರಮುಖ ಯೋಜನೆಗಳನ್ನು ಜಾರಿಗೊಳಿಸುವ ಮೊದಲು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸ್ಥಳೀಯ ಜನರನ್ನು ವಿಶ್ವಾಸಕ್ಕೆ ತೆಗೆದು ಕೊಳ್ಳದೆ ಇರುವುದೇ ಸಮಸ್ಯೆಗೆ ಕಾರಣವಾಗಿದೆ. ಒಂದು ಪ್ರದೇಶದಿಂದ ಮತ್ತೂಂದು ಪ್ರದೇಶಕ್ಕೆ ನೀರು ಕೊಂಡೊಯ್ಯುವ ಸಂದರ್ಭ ಸಹಜವಾಗಿಯೇ ಇಂತಹ ಅಡ್ಡಿ ಆತಂಕಗಳು ಇರುತ್ತವೆ. ಯೋಜನೆ ಆರಂಭಿಸುವ ಹಂತದಲ್ಲಿಯೇ ಇದಕ್ಕೆ ಪರಿಹಾರೋಪಾಯಗಳನ್ನು ಕಂಡುಕೊಂಡರೆ ಮಹತ್ವದ ಯೋಜನೆ ಸಾಂಗವಾಗಿ ಸಾಗಲು ಸಾಧ್ಯವಾಗುತ್ತದೆ. ಆದುದರಿಂದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಇನ್ನಾದರೂ ಇತ್ತ ಗಮನ ಹರಿಸಿ ಯೋಜನೆ ಯಶಸ್ವಿಯಾಗಲು ಸಹಕರಿಸುವುದು ಅಗತ್ಯವಾಗಿದೆ.

 

-ಸಂ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.