12 ಗ್ರಾಮಗಳಿಗೆ ಕುಡಿಯುವ ನೀರಿಗೆ ಜಲಧಾರೆ


Team Udayavani, Aug 3, 2021, 3:00 AM IST

12 ಗ್ರಾಮಗಳಿಗೆ ಕುಡಿಯುವ ನೀರಿಗೆ ಜಲಧಾರೆ

ಸಾಂದರ್ಭಿಕ ಚಿತ್ರ

ಪುತ್ತೂರು: ಜಲಧಾರೆ ಯೋಜನೆಯಡಿ ಪುತ್ತೂರು ವಿಧಾನಸಭೆ ಕ್ಷೇತ್ರದ 12 ಗ್ರಾಮಗಳ ವ್ಯಾಪ್ತಿಗೆ ಶುದ್ಧ ಕುಡಿಯುವ ನೀರು ಪೂರೈಸಲು 140 ಕೋ.ರೂ.ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಪುತ್ತೂರು ವಿಧಾನಸಭೆ ಕ್ಷೇತ್ರದ ಬಂಟ್ವಾಳ ತಾಲೂಕಿನ ವಿಟ್ಲ ವ್ಯಾಪ್ತಿಯ ಗ್ರಾಮಗಳನ್ನು ಈ ಯೋಜನೆಗೆ ಒಳಪಡಿಸಿದ್ದು ಇದರ ಅನುಷ್ಠಾನದ ಮೂಲಕ 24 ತಾಸು ನೀರು ಹರಿಸುವ ಉದ್ದೇಶ ಹೊಂದಲಾಗಿದೆ.

ಅಣೆಕಟ್ಟಿನಿಂದ ನೀರು:

ಜಲಧಾರೆ ಯೋಜನೆ ಅನುಷ್ಠಾನದ ವ್ಯಾಪ್ತಿಯಲ್ಲಿ ಅಣೆಕಟ್ಟು ಮೂಲಕ ನೀರು ಬಳಸಿ ಪೂರೈಕೆ ಮಾಡಲಾಗುತ್ತದೆ. ವಿಟ್ಲ ವ್ಯಾಪ್ತಿಯಲ್ಲಿ ನೇತ್ರಾವತಿ ನದಿಗೆ ಕಡೆಶ್ವಾಲ್ಯ, ಸರಪಾಡಿ ಸೇರಿದಂತೆ ನಾಲ್ಕು ಕಡೆಗಳಲ್ಲಿ ಅಣೆಕಟ್ಟಿದ್ದು ಅದರಲ್ಲಿ ಒಂದು ಅಣೆಕಟ್ಟಿನಿಂದ ನೀರನ್ನು ಸಂಗ್ರಹಿಸಿ ಶುದ್ಧೀಕರಿಸಿ ಬಳಿಕ ಪೈಪು ಲೈನ್‌ಗಳ ಮೂಲಕ ಪೂರೈಸಲಾಗುತ್ತದೆ. ಅಣೆಕಟ್ಟು ಇರುವ ಕಾರಣಕ್ಕೆ ಈ ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ.

ವಾಟರ್‌ ಫೀಡರ್‌ ಪೈಪ್‌ಲೈನ್‌ ಜಾಲ:

ವಿದ್ಯುತ್‌ ಫೀಡರ್‌ ಮಾದರಿಯಲ್ಲೆ ಅಣೆಕಟ್ಟುಗಳಿಂದ ಬಹುಗ್ರಾಮ ಕುಡಿಯುವ ನೀರಿನ ಘಟಕಗಳಿಗೆ ನೇರ ವಾಗಿ ನೀರು ತಲುಪುವಂತೆ “ವಾಟರ್‌ ಫೀಡರ್‌ ಪೈಪ್‌ಲೈನ್‌ ಜಾಲ ನಿರ್ಮಿಸಿ ಬಳಿಕ ಪ್ರತೀ ಮನೆ ಮನೆಗೆ ನೀರು ಹರಿಸಲಾಗುತ್ತದೆ. ಜಲಾಶಯಗಳಲ್ಲಿ ಕಾಯ್ದಿಟ್ಟ ನೀರನ್ನು ಕುಡಿಯುವ ಉದ್ದೇಶಕ್ಕೆ ನಿರ್ವಹಿಸಬಹುದು ಎಂಬ ಲೆಕ್ಕಾಚಾರಕ್ಕೆ ಬರಲಾಗಿದ್ದು, ಭವಿಷ್ಯದಲ್ಲಿ ನೀರಿನ ಅಭಾವ ಕಾಡದಂತೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಇದು ಪೂರಕ ಎಂದು ಪರಿಭಾವಿಸಲಾಗಿದೆ.

ಅಣೆಕಟ್ಟಿಲ್ಲದಿದ್ದರೆ ಜಲಧಾರೆಯಿಲ್ಲ :

ಅಣೆಕಟ್ಟು ಇಲ್ಲದೆ ಇರುವ ತಾಲೂಕಿಗೆ ಜಲಧಾರೆ ಯೋಜನೆ ನೀಡಲಾಗುತ್ತಿಲ್ಲ. ಏಕೆಂದರೆ ಜಲಸಂಗ್ರಹ ಇರುವ ಮೂಲವೇ ಯೋಜನೆ ಜಾರಿಗೆ ಮುಖ್ಯ ಅಂಶ. ಪುತ್ತೂರು ಮತ್ತು ಸುಳ್ಯ ತಾ|ನ ನದಿಗಳಲ್ಲಿ ಅಣೆಕಟ್ಟು ಇಲ್ಲದ ಕಾರಣ ಜಲಧಾರೆ ಯೋಜನೆ ಇಲ್ಲಿಗೆ ಅನ್ವಯ ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಪುತ್ತೂರು ತಾ|ನಲ್ಲಿ ಕಟಾರ, ವಳಾಲಿನಲ್ಲಿ ಅಣೆಕಟ್ಟು ನಿರ್ಮಾಣದ ಪ್ರಸ್ತಾವ ಇರಿಸಿ ಮುಂದಿನ ದಿನಗಳಲ್ಲಿ ಜಲಧಾರೆ ಯೋಜನೆ ಬಳಸಿಕೊಳ್ಳುವ ಚಿಂತನೆ ನಡೆದಿದೆ. ಸುಳ್ಯ ವಿಧಾನಸಭೆ ಕ್ಷೇತ್ರದ ಶಾಂತಿಮೊಗರು ಬಳಿ ಅಣೆಕಟ್ಟು ನಿರ್ಮಾಣ ಅಂತಿಮ ಹಂತಕ್ಕೆ ಬಂದಿದ್ದು ಅಲ್ಲಿ ಯೋಜನೆ ಜಾರಿಗೆ ಅವಕಾಶ ಸಿಗಲಿದೆ.

ಜಲಧಾರೆಸೂಕ್ತ :

ಭೂ ಮೇಲ್ಮೈಜಲಮೂಲಗಳಿಂದ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ರಾಜ್ಯದ ಬಹುಭಾಗಗಳಲ್ಲಿ ಅಂತರ್ಜಲ ಮಟ್ಟ ಕುಸಿಯುವ ಜತೆಗೆ, ಕಲುಷಿತ ನೀರನ್ನು ಕುಡಿಯುತ್ತಿದ್ದಾರೆ. ಇಂತಹ ಕಡೆ ಪೈಪ್‌ಲೈನ್‌ ವ್ಯವಸ್ಥೆಯನ್ನು ಆದ್ಯತೆ ಮೇಲೆ ಕೈಗೆತ್ತಿಕೊಳ್ಳುವುದು ಅನಿವಾರ್ಯ ಎನ್ನುವ ಅಂಶವನ್ನು ಆಧರಿಸಿ ಸರಕಾರ ಜಲಧಾರೆ ಯೋಜನೆ ರಾಜ್ಯವ್ಯಾಪ್ತಿ ಅನುಷ್ಠಾನಿಸಿದೆ.

ನಗರದಲ್ಲಿ ಜಲಸಿರಿ ಯೋಜನೆ ಜಾರಿಯಲ್ಲಿದ್ದು, ಅದೇ ತರಹ ಗ್ರಾಮಮಟ್ಟದಲ್ಲಿಯು ನೀರೊದಗಿಸಲು ಜಲಧಾರೆ ಯೋಜನೆ ರೂಪಿಸಲಾಗಿದೆ. ವಿಟ್ಲ ವ್ಯಾಪ್ತಿಯ 12 ಗ್ರಾಮ ವ್ಯಾಪ್ತಿಯಲ್ಲಿ ನೀರೊದಗಿಸಲು ಜಲಧಾರೆ ಯೋಜನೆ ಅನುಷ್ಠಾನಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಶೀಘ್ರದಲ್ಲಿ ಅನುದಾನ ಬಿಡುಗಡೆಗೊಳ್ಳಲಿದೆ. -ಸಂಜೀವ ಮಠಂದೂರು, ಶಾಸಕರು, ಪುತ್ತೂರು

ಟಾಪ್ ನ್ಯೂಸ್

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.