ನೆಟ್ಲಮುಟ್ನೂರು: ಹಳೆ ಶೌಚಾಲಯದ ಗುಂಡಿಗೆ ಬಿದ್ದು ಜೆಸಿಬಿ ಆಪರೇಟರ್ ಸಾವು
Team Udayavani, Jul 12, 2019, 9:55 AM IST
ವಿಟ್ಲ: ನೆಟ್ಲಮುಟ್ನೂರು ಗ್ರಾಮದ ಪರ್ಲೊಟ್ಟಿ ನಲ್ಲಿ ಹಳೆಯ ಶೌಚಾಲಯದ ಗುಂಡಿಗೆ ಆಕಸ್ಮಿಕವಾಗಿ ಬಿದ್ದು ಜೆಸಿಬಿ ಆಪರೇಟರ್ ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ. ಇಡಿದು ಗ್ರಾಮದ ಮಿತ್ತೂರು ಬೊಲ್ಲರಮಜಲು ನಿವಾಸಿ ರಾಮ ಸಫಲ್ಯ ಅವರ ಪುತ್ರ ರಾಜೇಶ್ (30) ಮೃತಪಟ್ಟವರು.
ಪೆರ್ಲೊಟ್ಟಿನ ವ್ಯಕ್ತಿಗೆ ಸೇರಿದ ಜಾಗದಲ್ಲಿ ಸಮತಟ್ಟು ಮಾಡಲೆಂದು ಎರಡು ದಿನದ ಮಟ್ಟಿಗೆ ತಾತ್ಕಾಲಿಕ ಕೆಲಸಕ್ಕೆಂದು ರಾಜೇಶ್ ಅವರು ಬೆಳಗ್ಗೆ 8.30ಕ್ಕೆ ತೆರಳಿದ್ದರು. ಇದೇ ಸ್ಥಳದಲ್ಲಿದ್ದ ಹಳೆಯ ಶೌಚಾಲಯ ಹೊಂಡದ ಮೇಲ್ಭಾಗದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅದರೊಳಗೆ ಬಿದ್ದು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಹೊಂಡವು ಕೊಳಚೆ ನೀರಿನಿಂದ ತುಂಬಿತ್ತು.
ಅವರ ಮೊಬೈಲ್ ಈ ಹೊಂಡದ ಸಮೀಪದಲ್ಲೇ ಬಿದ್ದಿತ್ತು. ಸ್ವಲ್ಪ ಹೊತ್ತಿನ ಬಳಿಕ ಅದು ರಿಂಗ್ ಆದಾಗ ಪಕ್ಕದ ಮನೆಯವರು ಸ್ಥಳಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಬಳಿಕ ಪುತ್ತೂರು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಲೆತ್ತಿದ್ದಾರೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Yugadi: ಯುಗಾದಿ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ