ಅಡಿಕೆ ಕೊಳೆರೋಗ ಜಂಟಿ ಸಮೀಕ್ಷೆ

ತಾ.ಪಂ. ತ್ತೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕ ಮಠಂದೂರು ಸೂಚನೆ

Team Udayavani, Sep 22, 2019, 5:01 AM IST

x-27

ಪುತ್ತೂರು: ಅವಿಭಜಿತ ಪುತ್ತೂರು ತಾಲೂಕಿನಲ್ಲಿರುವ 68 ಕಂದಾಯ ಗ್ರಾಮಗಳಲ್ಲಿ ಅಡಿಕೆ ಕೊಳೆ ರೋಗದ ನಷ್ಟದ ಸಮೀಕ್ಷೆಯನ್ನು ಕಂದಾಯ ಇಲಾಖೆ, ತೋಟಗಾರಿಕೆ ಇಲಾ ಖೆಯ ಜಂಟಿ ಸಹಯೋಗದಲ್ಲಿ ತತ್‌ಕ್ಷಣ ಮಾಡಬೇಕು ಎಂದು ಶಾಸಕ ಸಂಜೀವ ಮಠಂದೂರು ಸೂಚನೆ ನೀಡಿದರು.

ಪುತ್ತೂರು ತಾ.ಪಂ. ಸಭಾಂಗಣದಲ್ಲಿ ಶನಿವಾರ ನಡೆದ ತ್ತೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊಳೆರೋಗದ ಹಾನಿಯ ಕುರಿತು ನಿಮ್ಮಲ್ಲಿ ಏನು ಮಾಹಿತಿ ಇದೆ ಎನ್ನುವ ಶಾಸಕರ ಪ್ರಶ್ನೆಗೆ ಹಿರಿಯ ಸಹಾಯಕ ತೋಟಗಾರಿಕೆ ಅಧಿಕಾರಿ ರೇಖಾ ಉತ್ತರಿಸಿ, ಕೊಳೆರೋಗದ ಅರ್ಜಿ ನೀಡಲು ರೈತರಿಗೆ ಹೇಳಿದ್ದೇವೆ. ಈಗ ಬಂದ ಅರ್ಜಿಗಳನ್ನು ಮೇಲಧಿಕಾರಿಗಳಿಗೆ ಕಳುಹಿಸುತ್ತಿದ್ದೇವೆ ಎಂದು ಹೇಳಿದರು.

ಒಂದು ತಿಂಗಳಲ್ಲಿ ವರದಿ
ಸರಕಾರ ಹೇಳಿಯೇ ಸಮೀಕ್ಷೆ ಅಥವಾ ಪರಿಶೀಲನೆ ಮಾಡುವ, ವರದಿ ನೀಡುವ ಕ್ರಮ ಅನುಸರಿಸಬೇಕೇ? ಎಂದು ಇಲಾಖೆ ಅಧಿಕಾರಿಗಳಿಗೆ ಪ್ರಶ್ನಿಸಿದ ಶಾಸಕರು, ಈ ಬಾರಿ ಕೊಳೆರೋಗದಿಂದ ಹಾನಿಯಾದ ವರದಿ ನಮ್ಮಲ್ಲಿ ಇರಬೇಕು. ಈ ಕುರಿತು ಜಿಲ್ಲಾಧಿಕಾರಿಯೂ ಸೂಚನೆ ನೀಡಿದ್ದಾರೆ. ಮತ್ತೆ ಸರಕಾರಕ್ಕೆ ಸಲ್ಲಿಸಲು ಸಾಧ್ಯವಾಗುತ್ತದೆ. ಒಂದು ತಿಂಗಳಲ್ಲಿ ಈ ಕೆಲಸ ಆಗಬೇಕು ಎಂದರು.

ಕಳೆದ ಬಾರಿ ಕೊಳೆ ರೋಗದಿಂದ ಅಡಿಕೆ ಬೆಳೆಯುವ ರೈತರಿಗೆ ಸಾಕಷ್ಟು ನಷ್ಟ ಉಂಟಾಗಿದೆ. ಅವಿಭಜಿತ ತಾಲೂಕುಗಳಲ್ಲಿ ಸುಮಾರು 1,500 ಮಂದಿಗೆ ಪರಿಹಾರ ಸಿಕ್ಕಿಲ್ಲ ಯಾಕೆ ಎಂದು ಶಾಸಕರು ಪ್ರಶ್ನಿಸಿದರು.

ಜಿ.ಪಂ. ಸದಸ್ಯರಾದ ಶಯನಾ ಜಯಾನಂದ ಹಾಗೂ ಪಿ.ಪಿ. ವರ್ಗೀಸ್‌ ಕೊಳೆರೋಗ ಪರಿಹಾರ ನೀಡಿಕೆಯಲ್ಲಿ ವ್ಯತ್ಯಾಸ ಹಾಗೂ ತಾರತಮ್ಯವಾಗಿರುವ ಕುರಿತು ಆಕ್ಷೇಪ ವ್ಯಕ್ತಪಡಿಸಿ, ಯಾವ ಆಧಾರದಲ್ಲಿ ಪರಿಹಾರ ನೀಡಲಾಗಿದೆ ಮತ್ತು ಸಮೀಕ್ಷೆ ಎಲ್ಲಿ ನಡೆಸಲಾಗಿದೆ ಎಂದು ಪ್ರಶ್ನಿಸಿದರು.

ಆಧಾರ್‌ ಲಿಂಕ್‌ ಆಗದವರಿಗೆ ಪರಿಹಾರ ನೀಡಲು ಸಾಧ್ಯವಾಗಿಲ್ಲ. ಮುಂದೆ ಬಾಕಿಯಾದವರಿಗೂ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಹಶೀಲ್ದಾರ್‌ ಅನಂತ ಶಂಕರ್‌ ಹೇಳಿದರು.

ಯಾವುದೇ ನೆಪ ಹೇಳದೆ ರೈತರಿಗೆ ಪರಿಹಾರ ಹಣ ಸಿಗಬೇಕು. ಯಾವುದೇ ರೈತನಿಗೂ ಅನ್ಯಾಯ, ತಾರತಮ್ಯ ಆಗ ಬಾರದು. ರೈತರು ಸುಶಿಕ್ಷಿತರಲ್ಲದೇ ಇರುವುದರಿಂದ ಅವರಿಗೆ ಮಾಹಿತಿ ನೀಡುವ ಕೆಲಸ ಇಲಾಖೆಯಿಂದ ಆಗಬೇಕು ಎಂದು ಇಲಾಖೆಗಳಿಗೆ ಶಾಸಕರು ಸೂಚಿಸಿದರು.

“ಶಾಶ್ವತ ನಾಟ್‌ ರೀಚೆಬಲ್ ಆಗುತ್ತೀರಿ’
ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದರೆ ಗಂಭೀರವಾಗಿ ಪರಿಗಣಿಸುವುದಾಗಿ ಎಚ್ಚರಿಕೆ ನೀಡಿದ ಶಾಸಕರು, ಕೆಳ ಹಂತದ ಅಧಿಕಾರಿಗಳ ನಿಗಾ ವಹಿಸುವ ಜಬಾಬ್ದಾರಿ ಆಯಾ ತಹಶೀಲ್ದಾರ್‌ಗೆ ಇರುತ್ತದೆ. ತಪ್ಪಿದವರಿಗೆ ಶಿಕ್ಷೆಯನ್ನೂ ನೀಡಬೇಕು. ಗ್ರಾಮಮಟ್ಟದ ಅಧಿಕಾರಿಗಳು ಯಾವಾಗಲೂ “ನಾಟ್‌ ರೀಚೆಬಲ್‌’ ಆಗಿರುತ್ತಾರೆ. ಹೀಗೇ ಮುಂದುವರಿದರೆ ಅವರನ್ನು ಶಾಶ್ವತವಾಗಿ ನಾಟ್‌ರೀಚೆಬಲ್‌ ಮಾಡಬೇಕಾಗುತ್ತದೆ ಎಂದು ಪುತ್ತೂರು ಮತ್ತು ಕಡಬ ತಹಶೀಲ್ದಾರ್‌ ಮೂಲಕ ಗ್ರಾಮ ಮಟ್ಟದ ಕಂದಾಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಭ್ರಷ್ಟಾಚಾರದಲ್ಲಿ ಭಾಗಿಯಾಗುವ ಕಂದಾಯ ಇಲಾಖೆ ಗ್ರಾಮಕರಣಿಕರು, ಕಂದಾಯ ನಿರೀಕ್ಷಕರ ಮೇಲೆ ಪೊಲೀಸ್‌ ಇಲಾಖೆ ಸುಮೊಟೊ ತರಹ ದೂರು ದಾಖಲಿಸಿ ಶಿಕ್ಷೆ ಕೊಡಿಸಬೇಕು ಎಂದು ತಹಶೀಲ್ದಾರ್‌ಗಳಿಗೆ ಸೂಚಿಸಿದರು.

ನಿಮ್ಮ ವ್ಯಾಪ್ತಿ ಎಷ್ಟು?
ಆಯುಷ್ಮಾನ್‌ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಪುತ್ತೂರು ತಾಲೂಕಿನಲ್ಲಿ ಎಷ್ಟು ಮಂದಿಗೆ ಆರೋಗ್ಯ ಕಾರ್ಡ್‌ ನೀಡಲಾಗಿದೆ ಎಂದು ಶಾಸಕರು ತಾಲೂಕು ಆರೋಗ್ಯಾಧಿಕಾರಿ ಡಾ| ಅಶೋಕ್‌ಕುಮಾರ್‌ ರೈ ಅವರನ್ನು ಪ್ರಶ್ನಿಸಿದರು. ಅವರು ಕಡಬ ಹೊರತುಪಡಿಸಿ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಶಾಸಕರು, ನೀವು ಪುತ್ತೂರಿಗೆ ಸೀಮಿತ ಅಧಿಕಾರಿಯೇ ಅಥವಾ ತಾಲೂಕು ಆರೋಗ್ಯಾಧಿಕಾರಿಯೇ ಎಂದು ಪ್ರಶ್ನಿಸಿದರು. ಕಡಬದ ಡೇಟಾ ಎಂಟ್ರಿಗೆ ಆಪರೇಟರ್‌ ನೇಮಕವಾಗಿಲ್ಲ ಎಂದು ಅಧಿಕಾರಿ ಮಾಹಿತಿ ನೀಡಿದರು. ಇದರಿಂದ ಮತ್ತಷ್ಟು ಕೆರಳಿದ ಶಾಸಕರು, ಕಡಬದ ಮಾಹಿತಿಯನ್ನು ವಾರದೊಳಗೆ ಪೂರ್ಣವಾಗಿ ನೀಡಬೇಕು ಎಂದು ಎಚ್ಚರಿಸಿದರು.

ಅಪರಾಧ ಕಡಿಮೆಯಾಗುತ್ತಿದೆ
ಸಂಚಾರ ವ್ಯವಸ್ಥೆ, ಕಾನೂನು ಸುವ್ಯವಸ್ಥೆ ಕುರಿತು ಹಾಗೂ ದೂರುಗಳ ಕುರಿತ ಶಾಸಕರ ಪ್ರಶ್ನೆಗಳಿಗೆ ಉತ್ತರಿಸಿದ ಡಿವೈಎಸ್ಪಿ ದಿನಕರ ಶೆಟ್ಟಿ, ಅಪಘಾತ ತಡೆಯುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್‌ನ ಸೂಚನೆಯಂತೆ ಬಿಗಿ ನಿಯಮ ಗಳನ್ನು ಅನುಸರಿಸಲಾಗುತ್ತಿದೆ. ಅಲ್ಲಲ್ಲಿ ತಪಾಸಣೆಗಳನ್ನು ನಡೆಸಲಾಗಿದೆ. ಮೋಟಾರು ಕಾಯ್ದೆಯಲ್ಲಿ ತಿದ್ದುಪಡಿ ಮಾಡಿರುವ ಕುರಿತು ಭಿನ್ನಾಭಿಪ್ರಾಯ ವಿದ್ದರೂ ಅಪರಾಧದ ಪ್ರಮಾಣ ಕಡಿಮೆ ಯಾಗುತ್ತಿದೆ. ಜನರು ಹಣದ ಮೌಲ್ಯ, ಕಾನೂನಿನ ಕುರಿತು ತಿಳಿದುಕೊಳ್ಳುತ್ತಿದ್ದಾರೆ ಎಂದರು.

ಮಂಗಳೂರು ಮಹಾನಗರ ಪಾಲಿಕೆ ಬಿಟ್ಟರೆ ಪುತ್ತೂರಿನಲ್ಲಿ ಅತ್ಯಂತ ಹೆಚ್ಚು ಪೊಲೀಸ್‌ ಠಾಣೆಗಳಿವೆ. ಪುತ್ತೂರು ನಗರ ಮತ್ತು ಉಪ್ಪಿನಂಗಡಿ ಭಾಗದಲ್ಲಿ ಸಂಚಾರ ತಡೆಯಾಗದಂತೆ ಶಾಲೆ ಸಮಯದಲ್ಲಿ ಸಿಪಿಐ ಮತ್ತು ಪಿಎಸ್‌ಐಗಳು ಗಸ್ತು ತಿರುಗಬೇಕು ಎಂದು ತಿಳಿಸಿದರು.

ಲೋಕೋಪಯೋಗಿ ರಸ್ತೆ ಅಭಿವೃದ್ಧಿ
ಅವಿಭಜಿತ ಪುತ್ತೂರು ತಾಲೂಕಿನ 4 ಮುಖ್ಯ ಜಿ.ಪಂ. ರಸ್ತೆಗಳ ಅಭಿವೃದ್ಧಿಗೆ 5.75 ಕೋಟಿ ರೂ., 3 ರಾಜ್ಯ ಹೆದ್ದಾರಿ ಕಾಮಗಾರಿಗೆ 7.20 ಕೋಟಿ ರೂ. ಹಾಗೂ ಉಪ್ಪಿನಂಗಡಿ ಪುತ್ತೂರು ರಸ್ತೆಯನ್ನು ಚತುಷ್ಪಥಗೊಳಿಸಲು 12 ಕೋಟಿ ರೂ. ಅನುದಾನ ಮಂಜೂರಾಗಿದೆ. ಉಪ್ಪಿನಂಗಡಿ – ಪುತ್ತೂರು ರಸ್ತೆಯ ಕೆಮ್ಮಾಯಿಯಿಂದ 34ನೇ ನೆಕ್ಕಿಲಾಡಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕದ ತನಕ 7 ಕಿ. ಮೀ. ರಸ್ತೆಯನ್ನು ಚತುಷ್ಪಥಗೊಳಿಸಲು ಟೆಂಡರ್‌ ಪ್ರಕ್ರಿಯೆ ನಡೆಯುತ್ತಿದೆ ಎಂದು ಲೊಕೋಪಯೋಗಿ ಇಲಾಖೆ ಅಧಿಕಾರಿ ತಿಳಿಸಿದರು.

ಈ ಕೆಲಸ ಆದಷ್ಟು ಬೇಗ ಆರಂಭವಾಗಬೇಕು. ಅದಕ್ಕೂ ಮೊದಲು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವ ಉಪ್ಪಿನಂಗಡಿ – ಪುತ್ತೂರು ರಸ್ತೆಯ ಕೆಲವು ಭಾಗಗಳಲ್ಲಿ ತೇಪೆ ಹಾಕಿ ಸುಗಮ ಸಂಚಾರಕ್ಕೆ ವ್ಯವಸ್ಥೆಯನ್ನು ತತ್‌ಕ್ಷಣ ಮಾಡಬೇಕು. ಮರಗಳನ್ನು ಕಡಿಯಲು ಈಗಲೇ ಅರಣ್ಯ ಇಲಾಖೆಯ ಅನುಮತಿ ಕೇಳಬೇಕು ಎಂದು ಶಾಸಕರು ಸೂಚಿಸಿದರು.

ತಾ.ಪಂ. ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್‌, ಉಪಾಧ್ಯಕ್ಷೆ ಲಲಿತಾ ಈಶ್ವರ್‌, ಸ್ಥಾಯೀ ಸಮಿತಿ ಅಧ್ಯಕ್ಷ ಹರೀಶ್‌ ಬಿಜತ್ರೆ, ತಾ.ಪಂ. ಇಒ ನವೀನ್‌ ಭಂಡಾರಿ, ಪುತ್ತೂರು ತಹಶೀಲ್ದಾರ್‌ ಅನಂತ ಶಂಕರ ಹಾಗೂ ಕಡಬ ತಹಶೀಲ್ದಾರ್‌ ಜಾನ್‌ ಪ್ರಕಾಶ್‌, ಡಿವೈಎಸ್ಪಿ ದಿನಕರ ಶೆಟ್ಟಿ ಉಪಸ್ಥಿತರಿದ್ದರು. ಜಿ.ಪಂ. ಸದಸ್ಯರಾದ ಸರ್ವೋತ್ತಮ ಗೌಡ, ಪಿ.ಪಿ. ವರ್ಗೀಸ್‌, ಶಯನಾ ಜಯಾನಂದ, ನಾಮನಿರ್ದೇಶಿತ ಸದಸ್ಯ ಕಷ್ಣಕುಮಾರ್‌ ರೈ ಮತ್ತು ಶಶಿಕುಮಾರ್‌ ರೈ ಬಾಲೊಟ್ಟು ಚರ್ಚೆಯಲ್ಲಿ ಪಾಲ್ಗೊಂಡರು.

10.30ಕ್ಕೆ ಬಾಗಿಲು ಬಂದ್‌: ಎಚ್ಚರಿಕೆ
ತ್ತೈಮಾಸಿಕ ಕೆಡಿಪಿ ಸಭೆಗೆ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬರಬೇಕು. ಬದ್ಧತೆ ಮತ್ತು ಪ್ರಾಮಾಣಿಕೆಯಿಂದ ಕೆಲಸ ಮಾಡಬೇಕು. ಮೇಲಧಿಕಾರಿಗಳು ಸರಿ ಇದ್ದರೆ ಮಾತ್ರ ಕೆಳ ಹಂತದವರು ಅವರನ್ನು ಅನುಸರಿಸುತ್ತಾರೆ. ಸಭೆಗೆ ಗೈರು ಹಾಜರಾಗುವ, ಬೇಕಾಬಿಟ್ಟಿ ಬರುವ ಅ ಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು. ಮುಂದಿನ ತ್ತೈಮಾಸಿಕ ಕೆಡಿಪಿ ಸಭೆಯಲ್ಲಿ 10.30ಕ್ಕೆ ಬಾಗಿಲು ಬಂದ್‌ ಮಾಡಲಾಗುತ್ತದೆ. ಇದು ಕೊನೆಯ ಎಚ್ಚರಿಕೆ ಎಂದು ಮಠಂದೂರು ಹೇಳಿದರು.

ಎಸ್ಪಿ ಕಚೇರಿ ಸ್ಥಳಾಂತರ
ಪುತ್ತೂರಿಗೆ ಎಸ್ಪಿ ಕಚೇರಿ ಸ್ಥಳಾಂತರವಾಗಿ ಬರಲಿದೆ. ಈ ಕುರಿತು ಇಲಾಖೆಯ ಉನ್ನತಾಧಿಕಾರಿಗಳಲ್ಲಿ, ಸಚಿವರಲ್ಲಿ ಮಾತನಾಡಿದ್ದೇನೆ. ಆಡಳಿತಾತ್ಮಕ ಹಾಗೂ ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಈ ಕೆಲಸ ಆಗಲೇಬೇಕು. ಬಲಾ°ಡು ಹಾಗೂ ಕೆಮ್ಮಿಂಜೆ ಬಳಿ ಜಾಗ ಗುರುತಿಸಲಾಗಿದೆ. ಮಂಗಳೂರಿನಲ್ಲಿ ಕಮಿಷನರೆಟ್‌ ವ್ಯವಸ್ಥೆ ಇದೆ. ಪೊಲೀಸ್‌ ಇಲಾಖೆಯ ಕಡೆಯಿಂದಲೂ ನಗರಸಭೆಯ ಒಳಗಡೆ ಸೂಕ್ತ ಜಾಗವಿದ್ದರೆ ಗುರುತಿಸಿ ತಿಳಿಸಬಹುದು ಎಂದು ಶಾಸಕರು ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.