ಪತ್ರಕರ್ತ ಕ್ರಾಂತಿಯನ್ನು ಉಂಟುಮಾಡುವ ವ್ಯಕ್ತಿ: ಗೋವಿಂದ 


Team Udayavani, Aug 3, 2018, 1:14 PM IST

3-agust-10.jpg

ಸುಬ್ರಹ್ಮಣ್ಯ : ಗನ್‌, ಖಡ್ಗ,ಸ್ಫೋಟಕ ವಸ್ತುಗಳು ವಿನಾಶದ ಪ್ರವೃತ್ತಿ ಹೊಂದಿ ರಕ್ತಕ್ರಾಂತಿ ನಡೆಸಿದರೆ, ಲೇಖನಿ ಮನಸ್ಸು ಬದಲಾವಣೆಯ ಮೂಲಕ ಸಮಾಜ ಪರಿವರ್ತಿಸುವ ಕೆಲಸ ಮಾಡುತ್ತದೆ. ಇದರಲ್ಲಿ ಬಹುಮುಖ್ಯ ಪಾತ್ರ ವಹಿಸುವ ಪತ್ರಕರ್ತ ಕ್ರಾಂತಿಯನ್ನು ಉಂಟುಮಾಡುವ ವ್ಯಕ್ತಿ. ಇದು ಶ್ರೇಷ್ಠ ಕಾರ್ಯ ಎಂದು ಕೆಎಸ್‌ಎಸ್‌ ಕಾಲೇಜು ಉಪನ್ಯಾಸಕ ಡಾ| ಗೋವಿಂದ ಎನ್‌ಎಸ್‌ ಹೇಳಿದರು.

ಇಲ್ಲಿನ ವಲಯ ಪತ್ರಕರ್ತ ಸಂಘ, ರೋಟರಿ ಕ್ಲಬ್‌, ಪ.ಪೂ. ಕಾಲೇಜು ಸುಬ್ರಹ್ಮಣ್ಯ ಇವುಗಳ ಆಶ್ರಯದಲ್ಲಿ ಎಸ್‌ಎಸ್‌ಪಿಯು ಕಾಲೇಜಿನಲ್ಲಿ ನಡೆದ ಪತ್ರಿಕಾ ದಿನಾಚರಣೆ ಪ್ರಯುಕ್ತದ ಕಾರ್ಯಕ್ರಮದಲ್ಲಿ ಅವರು ಬುಧವಾರ ಉಪನ್ಯಾಸ ನೀಡಿದರು. 

ಅಭಿವ್ಯಕ್ತಿ ಸ್ವಾತಂಂತ್ರ್ಯ ಎಂದರೆ ಹೇಳಬೇಕಾಗಿರುವುದನ್ನು ಬರಹರೂಪದಲ್ಲಿ ಹೇಳುವುದು. ಪತ್ರಿಕಾ ರಂಗ ಪ್ರಭಾವಿ ಕ್ಷೇತ್ರವಾಗಿ ಇಂದು ಗುರುತಿಸಿಕೊಂಡಿದೆ. ದುರಾದೃಷ್ಟ ಎಂದರೆ ಜಾಹೀರಾತು ಪಡೆದು ಸುದ್ದಿ ಬರೆಯುವ ಸಂಸ್ಕೃತಿ ಇತ್ತೀಚೆಗೆ ಹೆಚ್ಚುತ್ತಿದ್ದು, ಅದರಲ್ಲೂ ಸುಳ್ಯ ತಾಲೂಕಿನಲ್ಲಿ ಇದರ ಪ್ರಮಾಣ ತೀರಾ ಹೆಚ್ಚಿದೆ. ಪತ್ರಿಕೆ ನಡೆಸಲು ಹಣ ಬೇಕು ನಿಜ ಆದರೆ ಅದನ್ನೇ ಚಾಳಿಯಾಗಿ ಬೆಳೆಸಿಕೊಳ್ಳಬಾರದು. ಉಳ್ಳವರಿಗೆ ಧ್ವನಿಯಾಗಿ ಹಣವಂತರಿಗೆ ಮಣೆ ಹಾಕುವ ಪ್ರವೃತ್ತಿ ದೂರವಾಗಬೇಕು. ಇದರಿಂದ ಪತ್ರಿಕೆ ಮೇಲಿನ ವಿಶ್ವಾಸ ಕಳೆದು ಹೋಗುತ್ತದೆ ಎಂದರು.

ಪ.ಪೂ. ಕಾಲೇಜು ಪ್ರಾಂಶುಪಾಲೆ ಸಾವಿತ್ರಿ ಉದ್ಘಾಟಿಸಿದರು. ಪತ್ರಕರ್ತರ ಸಂಘದ ಅಧ್ಯಲ್ಷ ಪ್ರಕಾಶ ವಿಶ್ವಕರ್ಮ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಎನ್‌ ಮಂಜುನಾಥ ರಾವ್‌, ರೋಟರಿ ಅಧ್ಯಕ್ಷ ವಿಶ್ವನಾಥ ನಡುತೋಟ ಶುಭಹಾರೈಸಿದರು. ಈ ವೇಳೆ ಪತ್ರಕರ್ತ ಹಾಗೂ ಛಾಯಾಚಿತ್ರಗ್ರಾಹಕ ಲೊಕೇಶ್‌ ಬಿ.ಎನ್‌. ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. ಪತ್ರಕರ್ತ ರತ್ನಾಕರ ಎಸ್‌. ಸಮ್ಮಾನಿತರ ಪರಿಚಯ ವಾಚಿಸಿದರು. ಲೊಕೇಶ್‌ ಬಿ.ಎನ್‌. ಸ್ವಾಗತಿಸಿ, ಕಾರ್ಯದರ್ಶಿ ದಿನೇಶ್‌ ಹಾಲೆಮಜಲು ವಂದಿಸಿದರು. ಪತ್ರಕರ್ತ ಭರತ್‌ ನೆಕ್ರಾಜೆ ನಿರೂಪಿಸಿದರು.

ಗ್ರಾಮೀಣ ವರದಿಗಾರಿಕೆ
ಉದಯವಾಣಿಯಲ್ಲಿ ಪ್ರಕಟವಾದ ಮಾನವಾಸಕ್ತಿಯ ವರದಿಯೊಂದನ್ನು ಪ್ರಸ್ತಾವಿಸಿದ ಎಸ್‌.ಎನ್‌. ಗೋವಿಂದ ಅವರು ಒಳ್ಳೊಳ್ಳೆಯ ಸುದ್ದಿಗಳನ್ನು ಮೂಲೆಮೂಲೆಗಳಿಂದ ಹೆಕ್ಕಿ ತರುವ ಕೆಲಸ ಗ್ರಾಮೀಣ ಪತ್ರಕರ್ತರಿಂದ ಆಗಬೇಕು. ಈಗ ಕಚೇರಿಯಲ್ಲಿ ಕುಳಿತು ಸುದ್ದಿ ಮಾಡುವ ಪತ್ರಕರ್ತರು ಹೆಚ್ಚುತ್ತಿದ್ದು, ಅವರ ದಾರಿಯಲ್ಲಿ ಇಲ್ಲಿನ ಪತ್ರಕರ್ತರು ಸಾಗಬಾರದು ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.