ಧರ್ಮದ ಉದ್ದೇಶ ಸತ್ಯವನ್ನು ಬಯಲು ಮಾಡುವುದು: ಜೆ.ಆರ್.ಲೋಬೋ


Team Udayavani, Dec 7, 2018, 4:34 PM IST

jr-l.jpg

ಧರ್ಮಸ್ಥಳ: ಗಾಂಧಿ ಚಿಂತನೆಗಳನ್ನು ಸಾಮಾಜಿಕ ಒಳಿತಿಗಾಗಿ ಮತ್ತೊಮ್ಮೆ ನೆನಪಿಸಿಕೊಳ್ಳುವ ಅಗತ್ಯವಿದೆ ಎಂದು ಮಾಜಿ ಶಾಸಕ ಜೆ.ಆರ್ ಲೋಬೋ ಹೇಳಿದರು.

ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಪ್ರಯುಕ್ತ ನಡೆದ 86ನೇ ಐತಿಹಾಸಿಕ ಸರ್ವಧರ್ಮ ಸಮ್ಮೇಳನದಲ್ಲಿ ಅತಿಥಿಯಾಗಿ ಭಾಗವಹಿಸಿ, ‘ಧರ್ಮಗಳಲ್ಲಿ ಸಮನ್ವಯತೆ ಗಾಂಧೀಜಿಯ ಸಂದೇಶಗಳು’ ಎಂಬ ವಿಷಯದ ಕುರಿತು ವಿಚಾರ ಮಂಡಿಸಿದರು.

ಶಾಂತಿಯನ್ನು ಅನುಸರಿಸಲು ಗಾಂಧೀಜಿಯವರು ಕಂಡುಕೊಂಡ ಮಾರ್ಗ ಧರ್ಮ. ಗಾಂಧೀಜಿಯ ಚಿಂತನೆಗಳು ಅವರ ಕಾಲಾವಧಿಯಂತೆ ಇಂದಿನ ನಮ್ಮ ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲಿ ನಾವು ಕಾಣಬಹುದು. ಅವರ ಪ್ರಕಾರ ಹಿಂದುತ್ವ ಎಂದರೆ ಎಲ್ಲರನ್ನು ಒಳಗೊಂಡಿದ್ದು. ಅದು ಮುಸ್ಲಿಂ ವಿರೋಧಿ ಅಲ್ಲ. ಕ್ರೈಸ್ತ ವಿರೋಧಿ ಅಲ್ಲ ಎಂದರು.

ಯಾವುದೇ ಧರ್ಮದ ಉದ್ದೇಶ ಸತ್ಯವನ್ನು ಬಯಲು ಮಾಡುವುದಾಗಿದೆ. ಗಾಂಧೀಜಿಯವರು ಧರ್ಮಗಳಲ್ಲಿ ಅಡಗಿರುವ ಸತ್ಯಗಳ ಬಗ್ಗೆ ಅರಿತವರು.

 ಒಬ್ಬ ಹಿಂದೂ ಉತ್ತಮ ಹಿಂದುವಾದರೆ, ಒಬ್ಬ ಮುಸಲ್ಮಾನ ಉತ್ತಮ ಮುಸಲ್ಮಾನನಾದರೆ, ಒಬ್ಬ ಕ್ರೈಸ್ತ ಉತ್ತಮ ಕ್ರೈಸ್ತನಾದರೆ ಅವರು ಇನ್ನೊಂದು ಧರ್ಮವನ್ನು ವಿರೋಧಿಸಲು ಸಾಧ್ಯವಿಲ್ಲ. ಪ್ರತೀ ಧರ್ಮವೂ ಅನೇಕತೆಯ ಸಿದ್ದಾಂತದ ಮೇಲೆ ನಿಂತಿದೆ. ಆದ್ದರಿಂದ ಪ್ರತಿಯೊಬ್ಬರು ತಮ್ಮ ತಮ್ಮ ಧರ್ಮಕ್ಕೆ ನೀಡುವಷ್ಟೇ ಪ್ರಾಮುಖ್ಯತೆ ಇತರ ಧರ್ಮಗಳಿಗೂ ನೀಡಬೇಕು. ದೇಶದ ಒಗ್ಗಟ್ಟಿಗೆ ಮತ್ತು ಪುನರ್ ನಿರ್ಮಾಣಕ್ಕೆ ಎಲ್ಲಾ ಧರ್ಮದವರು ಇತರ ಧರ್ಮದವರನ್ನು ಗೌರವಿಸುವುದು ಅನಿವಾರ್ಯ ಎಂದರು.

ಗಾಂಧೀಜಿಯವರ ಮುಖ್ಯ ತತ್ವ ಅಹಿಂಸೆ. ಅವರ ಈ ತತ್ವ ಖಿಲಾಫತ್ ಚಳವಳಿಯಲ್ಲಿ ಮುಸ್ಲಿಂ ನಾಯಕರಿಗೆ ಶಾಂತಿಯನ್ನು ಪಾಲಿಸಲು ಪ್ರೇರಣೆಯಾಯಿತು. ಹಲವು ಧರ್ಮಗಳ ನೆಲೆಯಾದ ಭಾರತದಲ್ಲಿ ಜಾತ್ಯತೀತತೆ ದೇಶದ ಅಸ್ಮಿತೆ. ಧರ್ಮವು ಪ್ರತಿಯೊಬ್ಬನ ವೈಯಕ್ತಿಕ ವಿಚಾರ. ಗಾಂಧೀಜಿಯವರು ಎಲ್ಲಾ ಸಭೆಗಳಲ್ಲಿ ಪ್ರತಿಪಾದಿಸುತಿದ್ದ ಹಾಗೆ ನಾವು ಮೊದಲು ಭಾರತೀಯರು. ಆನಂತರ ಹಿಂದೂ, ಮುಸ್ಲಿಂ, ಕ್ರೈಸ್ತ. ಜೈನ, ಪಾರ್ಸಿ ಎಂದರು ಹೇಳುವ ಮೂಲಕ ಮಹಾತ್ಮನ ಸಂದೇಶವನ್ನು ಸಾರಿದರು.

ಧರ್ಮದ ಹೆಸರಿನಲ್ಲಿ ಜನರನ್ನು ಬೇರ್ಪಡಿಸುವುದು ಬೇಡ. ಧರ್ಮದ ಮೂಲಕ ಪ್ರೀತಿಯನ್ನು ಸಾರೋಣ. ನಾವೆಲ್ಲ ಒಂದೇ ಎಂಬ ಭಾವನೆಯನ್ನು ಮೂಡಿಸೋಣ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಹಾರಿಸ್ ಸೋಕಿಲ

ಎಸ್.ಡಿ.ಎಂ ಕಾಲೇಜು ಉಜಿರೆ.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.