Kadaba ಆಟೋ ರಿಕ್ಷಾ ಪಲ್ಟಿ; ಚಾಲಕ ಸಾವು
Team Udayavani, Oct 2, 2023, 11:15 PM IST
ಕಡಬ: ರಾಮಕುಂಜ ಮೂಲದ ಆಟೋ ರಿಕ್ಷಾ ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಬಳಿ ಸ್ಕಿಡ್ ಆಗಿ ಪಲ್ಟಿಯಾದ ಪರಿಣಾಮ ಆಟೋ ಚಾಲಕ ಮೃತಪಟ್ಟ ಘಟನೆ ರವಿವಾರ ಸಂಜೆ ನಡೆದಿದೆ.
ರಾಮಕುಂಜ ಗ್ರಾಮದ ಇರ್ಕಿ ನಿವಾಸಿ ಪದ್ಮಯ್ಯ ಮಡಿವಾಳ ಅವರ ಪುತ್ರ ದಿನೇಶ್ (40) ಮೃತಪಟ್ಟವರು. ಅವರು ಬಜತ್ತೂರು ಕಡೆ ಬಾಡಿಗೆಗೆ ಹೋಗಿ ವಾಪಸಾಗುತ್ತಿದ್ದ ವೇಳೆ ಬಜತ್ತೂರು ಗ್ರಾಮದ ಪೆರಿಯಡ್ಕ-ಅಯೋಧ್ಯಾ ನಗರದಲ್ಲಿ ಆಟೋ ಸ್ಕಿಡ್ ಆಗಿ ಪಲ್ಟಿಯಾಗಿದೆ.
ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ರಾಮಕುಂಜ ಜಾತ್ರೋತ್ಸವ ಸಂದರ್ಭ ದೇವರ ಹಾಗೂ ದೈವಗಳ ಎದುರು ದೀವಟಿಕೆ ಹಿಡಿಯುವ ಸೇವೆ ಮಾಡುತ್ತಿದ್ದರು. ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?