ಕಡಬ : ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚೂರಿ ಇರಿತ ; ಆರೋಪಿಯ ಬಂಧನ
Team Udayavani, Aug 17, 2022, 8:15 AM IST
ಕಡಬ: ಆರು ತಿಂಗಳ ಹಿಂದೆ ಉಪ್ಪಿನಂಗಡಿ ಯಲ್ಲಿ ನಡೆದ ಹಸಿಮೀನು ವ್ಯಾಪಾರಕ್ಕೆ ಸಂಬಂಧಿಸಿದ ಗಲಾಟೆಯ ಪ್ರಕರಣದಲ್ಲಿ ಆರೋಪಿಯ ಬಗ್ಗೆ ಮಾಹಿತಿ ಕೊಟ್ಟ ವಿಚಾರವನ್ನು ನೆಪವಾಗಿಟ್ಟುಕೊಂಡು ಕ್ಷುಲ್ಲಕ ಕಾರಣವೊಡ್ಡಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯ ಗೊಳಿಸಿದ ಘಟನೆ ಸೋಮವಾರ ಸಂಜೆ ಕೊಯಿಲ ಗ್ರಾಮದ ಏಂತಾರು ಎಂಬಲ್ಲಿ ನಡೆದಿದೆ.
ಕೊಯಿಲ ಗ್ರಾಮದ ಏಂತಾರು ಮನೆ ಇಬ್ರಾಹಿಂ ಅವರ ಪುತ್ರ ಮಹಮ್ಮದ್ ನವಾಜ್ (29) ಗಾಯ ಗೊಂಡವರು. ಪ್ರಕರಣದ ಆರೋಪಿ ಆದಂ ಅವರ ಪುತ್ರ ನೌಫಾಲ್ (29)ನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಮಾತನಾಡಲು ಇದೆ ಎಂದು ಮಹಮ್ಮದ್ ನವಾಜ್ನನ್ನು ತನ್ನ ಅಂಗಡಿಯ ಬಳಿ ಕರೆಸಿಕೊಂಡ ನೌಫಾಲ್ 6 ತಿಂಗಳ ಹಿಂದೆ ಉಪ್ಪಿನಂಗಡಿಯಲ್ಲಿ ಮೀನು ವ್ಯಾಪಾರಕ್ಕೆ ಸಂಬಂಧಿಸಿದ ಗಲಾಟೆಯ ವಿಚಾರದಲ್ಲಿ “ನನ್ನ ತಮ್ಮ ಸಿನಾನ್ ಬಗ್ಗೆ ನೀನು ಯಾಕೆ ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು’ ಎಂದು ಪ್ರಶ್ನಿಸಿ ಅವಾಚ್ಯ ಶಬ್ದಗಳಿಂದ ಬೈದು ಗಲಾಟೆ ಮಾಡಿ ಅನಂತರ ಅಂಗಡಿಯಲ್ಲಿಯೇ ಇದ್ದ ಚಾಕುವಿನಿಂದ ಮಹಮ್ಮದ್ ನವಾಜ್ನ ಹೊಟ್ಟೆಗೆ ಇರಿದು ಗಂಭೀರ ಗಾಯಗೊಳಿಸಿದ್ದಾನೆ ಎಂದು ದೂರಲಾಗಿದೆ. ಬಳಿಕ ಗಾಯಾಳುವನ್ನು ಹಕೀಲ್ ಮತ್ತು ಆಸೀಫ್ ಅವರು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ