ಹೆತ್ತವರ ಯೋಗಕ್ಷೇಮ ವಿಚಾರಿಸಲು ಹೋದ ಮಗಳ ಮೇಲೆ ಚಿಕ್ಕಪ್ಪನಿಂದ ಹಲ್ಲೆ: ದೂರು ದಾಖಲು
Team Udayavani, Feb 22, 2023, 7:12 AM IST
ಕಡಬ: ಹೆತ್ತವರ ಯೋಗಕ್ಷೇಮ ವಿಚಾರಿಸಲು ಹೋದ ಮಗಳ ಮೇಲೆಯೇ ಚಿಕ್ಕಪ್ಪ ಹಲ್ಲೆಗೈದ ಘಟನೆ ಕಡಬ ತಾಲೂಕಿನ ಬೆಳಂದೂರು ಗ್ರಾಮದ ಅಮೈಯಲ್ಲಿ ಫೆ. 20ರಂದು ನಡೆದಿದೆ.
ಕಡಬ ಬೆಳಂದೂರಿನ ರಾಮಣ್ಣ ಗೌಡ ಅವರ ಪತ್ನಿ ಯಶೋದಾ ಅವರು ಬೆಳಂದೂರು ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡಿಕೊಂಡಿದ್ದು, ಫೆ. 20ರಂದು ಸಂಜೆ 5ರ ವೇಳೆಗೆ ಹೆತ್ತವರ ಯೋಗ ಕ್ಷೇಮ ವಿಚಾರಿಸಲು ಬೆಳಂದೂರಿನ ಅಮೈಯಲ್ಲಿರುವ ತವರು ಮನೆಗೆ ಬಂದಿದ್ದರು. ಆಗ ಅಲ್ಲಿಗೆ ಬಂದಿದ್ದ ಅವರ ಚಿಕ್ಕಪ್ಪ ಧರ್ಮಪಾಲ ಎಂಬಾತ ಅವಾಚ್ಯ ಶಬ್ದಗಳಿಂದ ಬೈದಾಗ, ಯಶೋದಾ ಅವರು ಯಾಕೆ ಬಯ್ಯುತ್ತೀರಿ ಎಂದು ಪ್ರಶ್ನಿಸಿದರು. ಆಗ ಧರ್ಮಪಾಲ ಅವಾಚ್ಯ ಶಬ್ದಗಳಿಂದ ಬೈದು, ಮರದ ಸಲಾಕೆಯಿಂದ ಯಶೋದಾ ಅವರ ಕೈಗೆ, ಬೆನ್ನಿನ ಹಿಂಬದಿಗೆ ಹೊಡೆದು ಗಾಯಗೊಳಿಸಿದ್ದಲ್ಲದೆ, ನಿಮ್ಮನ್ನು ಇಂದು ಕೊಲೆ ಮಾಡಿ ಹೋಗುತ್ತೇನೆಂದು ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ದೂರಿನಲ್ಲಿ ಯಶೋದಾ ತಿಳಿಸಿದ್ದಾರೆ.
ಗಾಯಗೊಂಡ ಯಶೋದಾ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆ ಮತ್ತು ಕೆ.ವಿ.ಜಿ. ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರತಿದೂರು: ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿದೂರು ದಾಖಲಾಗಿದ್ದು ಧರ್ಮಪಾಲ ಅವರ ದೂರಿನಂತೆ ಅವರ ಅಣ್ಣ ಸುಂದರ ಗೌಡರ ಪತ್ನಿ, ಮಗಳು ಯಶೋದಾ ಅವರ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ