ಕಡಬ: ಆರಂಭವಾಗಬೇಕಿದೆ ಸ.ಪ. ಕಾಲೇಜು

ಇನ್ನೂ ಕೈಗೂಡಿಲ್ಲ ಮುಖ್ಯಮಂತ್ರಿಯ 4 ವರ್ಷಗಳ ಹಿಂದಿನ ಭರವಸೆ

Team Udayavani, Jan 19, 2021, 4:00 AM IST

ಕಡಬ: ಆರಂಭವಾಗಬೇಕಿದೆ ಸ.ಪ. ಕಾಲೇಜು

ಕಡಬ: ಪ್ರಸ್ತುತ ಕಡಬವು ತಾಲೂಕು ಕೇಂದ್ರವಾಗಿ ಕಾರ್ಯ ನಿರ್ವಹಿಸುತ್ತಿದೆ. ಆದರೆ ಇಲ್ಲಿ ಶೈಕ್ಷಣಿಕವಾಗಿ ಯಾವುದೇ ಗಮನಾರ್ಹ ಬೆಳವಣಿಗೆಯಾಗಿಲ್ಲ ಎನ್ನುವುದು ಮಾತ್ರ ವಿಷಾದದ ಸಂಗತಿ.

ಇಲ್ಲಿನ ಸರಕಾರಿ ಶೈಕ್ಷಣಿಕ ವ್ಯವಸ್ಥೆ ಪ.ಪೂ.ಕಾಲೇಜು ಮಟ್ಟದಿಂದ ಮೇಲೇರಿಲ್ಲ. ಕಡಬದಲ್ಲಿ ಸರಕಾರಿ ಪದವಿ ಕಾಲೇಜು ಹಾಗೂ ವೃತ್ತಿಪರ ತರಬೇತಿ ಕೋರ್ಸ್‌ಗಳ ಕಾಲೇಜು ಆರಂಭವಾಗಬೇಕು ಎನ್ನುವ ಜನರ ಹಲವು ವರ್ಷಗಳ ಬೇಡಿಕೆ ಇನ್ನೂ ಕೈಗೂಡಿಲ್ಲ.

ಸಿಎಂ ಭರವಸೆಯೂ ಈಡೇರಿಲ್ಲ :

ಕಡಬದಲ್ಲಿ ಸರಕಾರಿ ಪದವಿ ಕಾಲೇಜು ಆರಂಭಿಸಬೇಕೆನ್ನುವ ಬೇಡಿಕೆಯನ್ನು 4 ವರ್ಷಗಳ ಹಿಂದೆ ಆಗಿನ ಮುಖ್ಯಮಂತ್ರಿಯಾಗಿದ್ದ ಸಿದ್ಧರಾಮಯ್ಯ ಅವರ ಮುಂದೆಯೂ ಇರಿಸಲಾಗಿತ್ತು. ಅಂದು ಪಶು ವೈದ್ಯಕೀಯ ಕಾಲೇಜು ಕಟ್ಟಡದ ಶಂಕುಸ್ಥಾಪನೆಗಾಗಿ ಕೊçಲಕ್ಕೆ ಆಗಮಿಸಿದ್ದ ಅವರು ಮುಂದಿನ ಶೈಕ್ಷಣಿಕ ವರ್ಷದಿಂದ ಕಡಬದಲ್ಲಿ ಸರಕಾರಿ ಪದವಿ ಕಾಲೇಜು ಆರಂಭಿಸಲಾಗುವುದು ಎಂದು ಪ್ರಕಟಿಸಿದ್ದರು. ಆದರೆ ಆ ಭರವಸೆ ನೀಡಿ ವರ್ಷಗಳು ಹಲವು ಕಳೆದರೂ ಭರವಸೆ ಈಡೇರಿಲ್ಲ. ಬಳಿಕ ಹೊಸ ಸರಕಾರ ಅಸ್ತಿತ್ವಕ್ಕೆ ಬಂದರೂ ಕಡಬಕ್ಕೆ ಸರಕಾರಿ ಪದವಿ ಕಾಲೇಜು ಮಂಜೂರುಗೊಳ್ಳುವ ವಿಚಾರದಲ್ಲಿ ಯಾವುದೇ ಬೆಳವಣಿಗೆಯಾಗಿಲ್ಲ.

ಪರಿಸರದ ವಿವಿಧ ಪ.ಪೂ.ಕಾಲೇಜುಗಳಿಂದ ವರ್ಷಂಪ್ರತಿ ವ್ಯಾಸಂಗ ಮುಗಿಸಿ ಹೊರಬರುವ ಸುಮಾರು ವಿದ್ಯಾ ರ್ಥಿಗಳಿಗೆ ಪದವಿ ಶಿಕ್ಷಣಕ್ಕಾಗಿ ಸರಕಾರಿ ಪದವಿ ಕಾಲೇಜು ಇರುವುದು ದೂರದ ಸುಬ್ರಹ್ಮಣ್ಯ ಅಥವಾ ಉಪ್ಪಿನಂಗಡಿಯಲ್ಲಿ.

ಕಡಬ ಸರಕಾರಿ ಪದವಿ ಕಾಲೇಜು ಹೋರಾಟ ಸಮಿತಿ ಎನ್ನುವ ಸಂಘಟನೆಯ ಮೂಲಕ ವಿಜಯಕುಮಾರ್‌ ರೈ ಕರ್ಮಾಯಿ  ಮುಂದಾಳುತ್ವದಲ್ಲಿ ಊರ ಪ್ರಮುಖರು ಕಾಲೇಜು ಮಂಜೂ ರಾತಿಗಾಗಿ ಸರಕಾರದ ಮಟ್ಟದಲ್ಲಿ ನಡೆಸು ತ್ತಿರುವ ಹೋರಾಟಕ್ಕೆ ಫಲ ದೊರೆತಿಲ್ಲ. ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಲವು ಬಾರಿ ಸ್ಥಳಕ್ಕೆ ಭೇಟಿ ನೀಡಿ ಕಡಬದಲ್ಲಿ ಸರಕಾರಿ ಪದವಿ ಕಾಲೇಜಿನ ಅಗತ್ಯದ ಕುರಿತು ಸರಕಾರಕ್ಕೆ ವರದಿ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಸುಳ್ಯ ಶಾಸಕ ಎಸ್‌. ಅಂಗಾರ ನೇತೃತ್ವದಲ್ಲಿ ಕಡಬಕ್ಕೆ ಸರಕಾರಿ ಪದವಿ ಕಾಲೇಜು ಮಂಜೂರು ಗೊಳಿಸುವ ನಿಟ್ಟಿನಲ್ಲಿ ಕಡಬ ದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಅಧಿ ಕಾರಿಗಳ ಉಪಸ್ಥಿತಿಯಲ್ಲಿ ನಡೆದ ಸಭೆ ಯಲ್ಲಿ ಅವರು ಕಡಬಕ್ಕೆ ಸರಕಾರಿ ಪದವಿ ಕಾಲೇಜು ಮಂಜೂರುಗೊಳಿಸಲು ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದ್ದರು. ಇದೀಗ ಶಾಸಕರು ಸಚಿವರಾಗಿರುವುದು ಸ್ಥಳೀಯರಲ್ಲಿ ಭರವಸೆ ಮೂಡಿದೆ.

ಜಮೀನು ಕಾದಿರಿಸಲಾಗಿದೆ :

ಕಡಬ ಸರಕಾರಿ ಪ್ರೌಢಶಾಲೆಯ 14.5 ಎಕ್ರೆ ಜಾಗದಲ್ಲಿ 5 ಎಕ್ರೆ ಜಾಗವನ್ನು ಕಡಬ ಸರಕಾರಿ ಪ್ರಥಮ ದರ್ಜೆ ಕಾಲೇಜು ಸ್ಥಾಪನೆಗೆ ಜಿಲ್ಲಾಧಿಕಾರಿಯವರು ಕಾದಿರಿಸಿ, ಈ ಬಗ್ಗೆ ಸಹಾಯಕ ಕಮೀಷನರ್‌ಗೆ ಆದೇಶ ನೀಡಿದ ಹಿನ್ನೆಲೆಯಲ್ಲಿ 5 ಎಕರೆ ಜಮೀನನ್ನು ಗಡಿ ಗುರುತು ಮಾಡಲಾಗಿದೆ. ಪದವಿ ಕಾಲೇಜಿನೊಂದಿಗೆ ವೃತ್ತಿಪರ ಶಿಕ್ಷಣ ಸಂಸ್ಥೆಗಳನ್ನು ಕೂಡ ಆರಂಭಿಸಿದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಅದಕ್ಕಾಗಿ ವೃತ್ತಿಪರ ಶಿಕ್ಷಣ ಕೋರ್ಸುಗಳನ್ನು ಆರಂಭಿಸುವ ನಿಟ್ಟಿನಲ್ಲಿಯೂ ಜನಪ್ರತಿನಿಧಿಗಳು ಪ್ರಯತ್ನಿಸುವ ಅಗತ್ಯವಿದೆ.

ಕಡಬದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಆಗತ್ಯವಿದೆ ಎನ್ನುವ ನಿಟ್ಟಿನಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಮೂಲಕ ಪೂರಕ ವರದಿ ಸಲ್ಲಿಸಲಾಗಿದೆ. ಪರಿಸರದ ವಿವಿಧ ಪ.ಪೂ.ಕಾಲೇಜು ಗಳಿಂದ ಪ್ರತಿ ವರ್ಷ ವ್ಯಾಸಂಗ ಮುಗಿಸಿ ಹೊರಬರುವ ವಿದ್ಯಾರ್ಥಿಗಳ ಸಂಖ್ಯೆ ಇತ್ಯಾದಿ ವಿವರಗಳನ್ನು ಉಲ್ಲೇಖೀ ಸಲಾಗಿದೆ. ಕ್ಷೇತ್ರದ ಶಾಸಕರು ಸಚಿವರಾಗಿರುವುದರಿಂದ ಕಡಬಕ್ಕೆ ಸ. ಪದವಿ ಕಾಲೇಜು ಮಂಜೂರು ಗೊಳಿಸಲಿದ್ದಾರೆ ಎನ್ನುವ ಭರವಸೆ ಇದೆ. ಪ್ರೊ| ಜಯಕರ ಭಂಡಾರಿ, ಕಾ.ಶಿಕ್ಷಣ ಇಲಾಖೆ ವಿಶೇಷ ಅಧಿಕಾರಿ.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.