Kadaba; ಒಂದೇ ಸೂರಿನಡಿ ಸರಕಾರಿ ಸೇವೆ ನೀಡಲು ಜನರ ಆಗ್ರಹ

ಕಡಬ: ಉದ್ಘಾಟನೆಗೊಂಡರೂ ಸೇವೆಗೆ ತೆರೆದುಕೊಳ್ಳದ ಮಿನಿ ವಿಧಾನ ಸೌಧ

Team Udayavani, May 19, 2023, 3:18 PM IST

Kadaba; ಒಂದೇ ಸೂರಿನಡಿ ಸರಕಾರಿ ಸೇವೆ ನೀಡಲು ಜನರ ಆಗ್ರಹ

ಕಡಬ: ನೂತನವಾಗಿ ನಿರ್ಮಾಣಗೊಂಡ ಕಡಬದ ಮಿನಿ ವಿಧಾನಸೌಧ (ತಾಲೂಕು ಆಡಳಿತ ಸೌಧ) ಕಾಮಗಾರಿ ಪೂರ್ಣಗೊಂಡು ವಿಧಾನಸಭಾ ಚುನಾವಣೆ ಘೋಷಣೆಗೆ ಕೆಲವೇ ದಿನಗಳ ಮೊದಲು ಲೋಕಾರ್ಪಣೆಗೊಂಡಿತ್ತು. ಆದರೆ ಉದ್ಘಾಟನೆಯಾಗಿ 2 ತಿಂಗಳಾಗುತ್ತಾ ಬಂದರೂ ನೂತನ ಕಟ್ಟಡವು ಸಾರ್ವಜನಿಕ ಸೇವೆಗೆ ತೆರೆದುಕೊಂಡಿಲ್ಲ. ಕೂಡಲೇ ಸಂಬಂಧಪಟ್ಟ ಕಚೇರಿಗಳನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಿ ಒಂದೇ ಸೂರಿನಡಿ ಸರಕಾರಿ ಸೇವೆ ನೀಡಬೇಕೆನ್ನುವ ಆಗ್ರಹ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.

ಕಡಬ ತಾಲೂಕು ಕೇಂದ್ರವಾದರೂ ಕಂದಾಯ ಇಲಾಖೆಗೆ ಸಂಬಂಧಿಸಿದ ಬೇರೆ ಬೇರೆ ಕಚೇರಿಗಳು ಒಂದೇ ಸೂರಿನಡಿ ಬಾರದೇ ಇದ್ದುದರಿಂದ ಜನರು ಅಲ್ಲಿಂದ ಇಲ್ಲಿಗೆ ಇಲ್ಲಿಂದ ಅಲ್ಲಿಗೆ ಅಲೆದಾಡಬೇಕಾದ ಅನಿವಾರ್ಯತೆ ಮಾತ್ರ ತಪ್ಪಿರಲಿಲ್ಲ. ಕೆಲ ವರ್ಷಗಳ ಹಿಂದೆ ಕಡಬ ಎಪಿಎಂಸಿ ಉಪ ಪ್ರಾಂಗಣದ ಬಳಿಯ ಸ್ವಂತ ಕಟ್ಟಡಕ್ಕೆ ತಹಶೀಲ್ದಾರ್‌ ಕಚೇರಿ ಸ್ಥಳಾಂತರವಾದರೂ ಭೂಮಿ ಕೇಂದ್ರ, ಕಂದಾಯ ನಿರೀಕ್ಷಕರ ಕಚೇರಿ ಹಾಗೂ ದಾಖಲೆಗಳ ಕೊಠಡಿ ಈ ಹಿಂದೆ ತಹಶೀಲ್ದಾರ್‌ ಕಚೇರಿ ಇದ್ದ ಪಟ್ಟಣ ಪಂಚಾಯತ್‌ನ ಬಾಡಿಗೆ ಕಟ್ಟಡದಲ್ಲಿಯೇ ಉಳಿದಿತ್ತು. ಭೂಮಾಪನಾ ಇಲಾಖಾ ಕಚೇರಿಯೂ ಕಡಬ ಪೇಟೆಯ ಬಾಡಿಗೆ ಕೊಠಡಿಯಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದುದರಿಂದ ಕಂದಾಯ ಇಲಾಖಾ ಕೆಲಸಕಾರ್ಯಗಳಿಗೆ ಗ್ರಾಮಗಳಿಂದ ತಾಲೂಕು ಕೇಂದ್ರಕ್ಕೆ ಬರುವ ಜನಕ್ಕೆ ಅಲೆದಾಟ ತಪ್ಪಿರಲಿಲ್ಲ. ಇದೀಗ ಸುಸಜ್ಜಿತವಾದ ನಿರ್ಮಾಣಗೊಂಡಿರುವ ತಾಲೂಕು ಆಡಳಿತ ಸೌಧದಲ್ಲಿ ಒಂದೇ ಸೂರಿನಡಿ ವಿವಿಧ ಇಲಾಖೆಗಳ ಕಚೇರಿಗಳು ತೆರೆದುಕೊಂಡರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ.

10 ಕೋಟಿ ರೂ. ವೆಚ್ಚದ
ನೂತನ ಕಟ್ಟಡ
ಜನಸಾಮಾನ್ಯರಿಗೆ ಅನುಕೂಲ ವಾಗುವಂತೆ ಒಂದೇ ಸೂರಿನಡಿಯಲ್ಲಿ ವಿವಿಧ ಇಲಾಖೆಗಳ ಕಚೇರಿಗಳು ತೆರೆಯಲ್ಪಡಬೇಕು ಎನ್ನುವ ಸರಕಾರದ ಆಶಯದಂತೆ ಕಡಬದಲ್ಲಿ ತಾಲೂಕು ಆಡಳಿತ ಸೌಧ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ಮಂಜೂರುಗೊಂಡು ತಹಶೀಲ್ದಾರ್‌ಕಚೇರಿ ಬಳಿ ಸರ್ವೆ ನಂಬ್ರ 130/1ಎಪಿ2 ರಲ್ಲಿ ಇರುವ 1.60 ಎಕ್ರೆ ಜಮೀನಿನಲ್ಲಿ ಕರ್ನಾಟಕ ಗೃಹ ಮಂಡಳಿಯ ಮೂಲಕ ಸುಸಜ್ಜಿತ ನೂತನ ಕಟ್ಟಡ ನಿರ್ಮಾಣಗೊಂಡಿದೆ. ನೂತನ ಸೌಧದಲ್ಲಿ ತಹಶೀಲ್ದಾರರ ಕಚೇರಿ, ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ, ಶಾಸಕರ ಕಚೇರಿ, ಉಪ ನೋಂದಣಾಧಿಕಾರಿ ಕಚೇರಿ, ಸರ್ವೆ ಇಲಾಖೆ ಕಚೇರಿಗಳು ಕಾರ್ಯನಿರ್ವಹಿಸಲಿವೆ.

ಜೂನ್‌ ವೇಳೆಗೆ ಲಭ್ಯ
ನೂತನ ಕಟ್ಟಡದ ವಿದ್ಯುತ್‌ ಸಂಪರ್ಕಕ್ಕೆ ಸಂಬಂಧಿಸಿ ತಾಂತ್ರಿಕ ತೊಡಕುಗಳಿದ್ದ ಕಾರಣದಿಂದಾಗಿ ಕಚೇರಿಗಳು ಸ್ಥಳಾಂತರಗೊಂಡಿಲ್ಲ. ಶೀಘ್ರ ವಿದ್ಯುತ್‌ ಸಂಪರ್ಕದ ಕೆಲಸ ಪೂರ್ಣಗೊಳ್ಳಲಿದೆ. ವಿದ್ಯುತ್‌ ಸಂಪರ್ಕದ ಕೆಲಸ ಪೂರ್ಣಗೊಂಡ ಕೂಡಲೇ ಕಟ್ಟಡ ನಮ್ಮ ಸುಪರ್ದಿಗೆ ಬರಲಿದೆ. ಮುಂದಿನ ತಿಂಗಳ (ಜೂನ್‌) ಪ್ರಥಮ ವಾರದಲ್ಲಿ ಸಂಬಂಧಪಟ್ಟ ಕಚೇರಿಗಳು ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡು ಸಾರ್ವಜನಿಕರಿಗೆ ಸೇವೆ ನೀಡಲಿದೆ.
-ರಮೇಶ್‌ ಬಾಬು, ತಹಶೀಲ್ದಾರರು, ಕಡಬ ತಾಲೂಕು

-ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.