ಮರು ನಿರ್ಮಾಣ ಕಾಮಗಾರಿ ನನೆಗುದಿಗೆ


Team Udayavani, Sep 8, 2021, 3:00 AM IST

ಮರು ನಿರ್ಮಾಣ ಕಾಮಗಾರಿ ನನೆಗುದಿಗೆ

ಕಡಬ: ರಾಮಕುಂಜ ಸಮೀಪದ ಆತೂರಿನಲ್ಲಿ ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ಹಾಗೂ ಅಲ್ಲಿನ ತಾತ್ಕಾಲಿಕ ಪೊಲೀಸ್‌ ಚೌಕಿ ಧ್ವಂಸ ಪ್ರಕರಣ ನಡೆದು 2 ತಿಂಗಳು ಕಳೆದರೂ ಪೊಲೀಸ್‌ ಚೌಕಿಯ ಮರು ನಿರ್ಮಾಣದ ಮಾತ್ರ ತಳ ಪಾಯದ ಹಂತದಲ್ಲಿಯೇ ನನೆಗುದಿಗೆ ಬಿದ್ದಿದೆ.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಜೂ. 28 ರಂದು ಕಡಬ ಪೊಲೀಸರು ವಾಹನ ತಪಾಸಣೆೆ ಮಾಡುತ್ತಿದ್ದ ವೇಳೆ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಮಿನಿ ಲಾರಿ ಢಿಕ್ಕಿ ಹೊಡೆದು ಆತ ಮೃತಪಟ್ಟಾಗ ಕಿಡಿಗೇಡಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ, ದಾನಿಗಳ ನೆರವಿನಿಂದ ನಿರ್ಮಾಣವಾಗಿದ್ದ ಪೊಲೀಸ್‌ ಚೌಕಿಯನ್ನು ಧ್ವಂಸ ಮಾಡಿ ವಿಕೃತಿ ಮೆರೆದಿದ್ದರು. ಹೆಚ್ಚಿನ ಬಲದೊಂದಿಗೆ ಸ್ಥಳಕ್ಕೆ ಧಾವಿಸಿದ್ದ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದರು. ಘಟನೆಗೆ ಸಂಬಂಧಿಸಿ 20ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಒಟ್ಟು 16 ಜನರ ಬಂಧನವಾಗಿತ್ತು. ಘಟನೆಯ ಮರುದಿನವೇ ಪೊಲೀಸ್‌ ಚೌಕಿಯನ್ನು ಮರು ನಿರ್ಮಿಸುವ ಉದ್ದೇಶದಿಂದ ಲೋಕೋಪಯೋಗಿ ಇಲಾಖಾಧಿಕಾರಿಗಳ ನೇತೃತ್ವದಲ್ಲಿ ಕಂದಾಯ ಇಲಾಖಾಧಿಕಾರಿಗಳು ಸರ್ವೇ ಕಾರ್ಯ ಮಾಡಿ ಜಾಗ ಗುರುತಿಸಿಲಾಗಿತ್ತು. ದಾನಿಗಳ ನೆರವಿನಿಂದ ಮರಳು, ಜಲ್ಲಿ, ಕೆಂಪುಕಲ್ಲು ಸೇರಿದಂತೆ ಆಗತ್ಯ ಸಾಮಗ್ರಿಗಳನ್ನು ತರಿಸಿ ಚೌಕಿ ನಿರ್ಮಾಣಕ್ಕೆ ಅಡಿಪಾಯ ತೋಡುವ ಕಾರ್ಯ ಕೂಡ ನಡೆಯಿತು. ಆದರೆ ಇಷ್ಟೆಲ್ಲ ಆಗಿ ತಿಂಗಳು ಕಳೆದರೂ ತಳಪಾಯದ ಹಂತದಿಂದ ಕಾಮಗಾರಿ ಮುಂದುವರಿಯಲಿಲ್ಲ.

ಬಸ್‌ ತಂಗುದಾಣಕ್ಕೆ ಶಿಲಾನ್ಯಾಸ:

ಚೌಕಿ ನಿರ್ಮಿಸಲು ಉದ್ದೇಶಿಸಿದ ಸ್ಥಳದ ಪಕ್ಕದಲ್ಲೇ ಆಲಂಕಾರು ಸಿ.ಎ. ಬ್ಯಾಂಕಿನ ಕೊçಲ ಶಾಖಾ ಕಟ್ಟಡದ ಬಳಿ ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ಬಸ್‌ತಂಗುದಾಣ, ಸಾರ್ವಜನಿಕ ಶೌಚಾಲಯ ಹಾಗೂ ಪೊಲೀಸರ ಅತಿಥಿಗೃಹ ಗಳನ್ನೊಳಗೊಂಡ ಕಟ್ಟಡ ನಿರ್ಮಾಣಕ್ಕೆ ಸಚಿವ ಎಸ್‌.ಅಂಗಾರ ಕೆಲವು ದಿನಗಳ ಹಿಂದೆ ಶಿಲಾನ್ಯಾಸ ನೆರ ವೇರಿಸಿದ್ದಾರೆ. ಸಚಿವರು ಅನುದಾನ ಒದಗಿಸಿಕೊಡುವುದಾಗಿ ಭರವಸೆ ನೀಡಿ ಶಿಲಾನ್ಯಾಸ ನಡೆದಿದ್ದು ಇನ್ನೂ ಕಾಮಗಾರಿ ಪ್ರಾರಂಭವಾಗಿಲ್ಲ. ಈ ಮಧ್ಯೆ ಕೊçಲದಲ್ಲಿ ಪೊಲೀಸ್‌ ಔಟ್‌ಪೋಸ್ಟ್‌ ನಿರ್ಮಾಣ ಮಾಡಬೇಕೆಂದು ಸಚಿವರು ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ.

ಅಕ್ರಮಗಳಿಗೆ ಕಡಿವಾಣ ಹಾಕಿದ್ದ ಪೊಲೀಸ್‌ ಚೌಕಿ :

ಲಾಕ್‌ಡೌನ್‌ ವೇಳೆ ಆತೂರಿನಲ್ಲಿ ಪೊಲೀಸ್‌ ಚೆಕ್‌ಪೋಸ್ಟ್‌ ರಚನೆ ಮಾಡಲಾಗಿತ್ತು. ಬಳಿಕ ಸ್ಥಳೀಯ ಬೀಟ್‌ ಪೊಲೀಸ್‌ ಹರೀಶ್‌ ಅವರ ಮುತು ವರ್ಜಿಯಲ್ಲಿ ದಾನಿಗಳ ನೆರವಿನಿಂದ ತಾತ್ಕಲಿಕ ನೆಲೆಯಲ್ಲಿ ಪೊಲೀಸ್‌ ಚೌಕಿ ನಿರ್ಮಿಸಲಾಗಿತ್ತು. ಅದು ದನ ಕಳ್ಳರು, ಮರಗಳ್ಳರು, ಅಕ್ರಮ ದಂಧೆಕೋರರು ಹಾಗೂ ಪುಂಡು ಪೋಕರಿಗಳಿಗೆ ತಲೆನೋವಾಗಿ ಪರಿಣಮಿಸಿತ್ತು. ಚೆಕ್‌ ಪೋಸ್ಟ್‌ನಲ್ಲಿ ವಾಹನ ತಪಾಸಣೆ ಕಟ್ಟುನಿಟ್ಟಾದಾಗ ಅಕ್ರಮ ದಂಧೆಕೋರರು ಪೊಲೀಸರ ವಿರುದ್ಧ ಕುದಿಯಲಾರಂಭಿಸಿದರು. ಚೌಕಿ ಬಳಿ ನಡೆದ ಅಪಘಾತಕ್ಕೆ ಪೊಲೀಸರೇ ಕಾರಣವೆನ್ನುವಂತೆ ಗಲಾಟೆ ಎಬ್ಬಿಸಿದ ಕಿಡಿಗೇಡಿಗಳು ತಮಗೆ ಬೇಡವಾದ ಪೊಲೀಸ್‌ ಚೌಕಿಯನ್ನು ಧ್ವಂಸ ಮಾಡಿ ಪೊಲೀಸರ ವಿರುದ್ಧವೇ ಏರಿಹೋಗಿದ್ದರು.

ಆತೂರಿನಲ್ಲಿದ್ದ ತಾತ್ಕಾಲಿಕ ಪೊಲೀಸ್‌ ಚೌಕಿ ನಮ್ಮ ಕರ್ತವ್ಯನಿರತ ಸಿಬಂದಿಗೆ ಬಿಸಿಲು, ಗಾಳಿ ಮಳೆಯಿಂದ ರಕ್ಷಣೆ ಒದಗಿಸುತ್ತಿತ್ತು. ಆದರೆ ಅದನ್ನು ಕಿಡಿಗೇಡಿಗಳು ಪುಡಿಗೈದಿರುವುದು ದುರ ದೃಷ್ಟಕರ. ಅಲ್ಲಿ ಶೀಘ್ರದಲ್ಲಿ ಪೊಲೀಸ್‌ ಚೌಕಿ ನಿರ್ಮಿಸುವ ಪ್ರಯತ್ನದಲ್ಲಿದ್ದೇವೆ. ರುಕ್ಮ ನಾಯ್ಕ, ಕಡಬ ಎಸ್‌

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.