Kadaba: ಪ್ರಸ್ತಾವನೆಯಲ್ಲಿಯೇ ಉಳಿದ ಪಾರ್ಕಿಂಗ್‌ ವ್ಯವಸ್ಥೆ

ಉಪನಿರೀಕ್ಷಕರು ಉದ್ದೇಶಿತ ಸ್ಥಳದ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದರು

Team Udayavani, Dec 1, 2023, 2:41 PM IST

Kadaba: ಪ್ರಸ್ತಾವನೆಯಲ್ಲಿಯೇ ಉಳಿದ ಪಾರ್ಕಿಂಗ್‌ ವ್ಯವಸ್ಥೆ

ಕಡಬ: ತಾಲೂಕು ಕೇಂದ್ರವಾಗಿರುವ ಕಡಬ ಪೇಟೆಯಲ್ಲಿ ಮೂಲ ಸೌಕರ್ಯಗಳು ಮಾತ್ರ ಮರೀಚಿಕೆಯಾ ಗಿಯೇ ಉಳಿದಿವೆ. ಪೇಟೆಯಲ್ಲಿ ವಾಹನಗಳ ಪಾರ್ಕಿಂಗ್‌ಗಾಗಿ ಸಮರ್ಪಕ ವ್ಯವಸ್ಥೆ ಇಲ್ಲದೇ ಇರುವುದರಿಂದ ಸಾರ್ವಜನಿಕರು ಸದಾ ಕಿರಿಕಿರಿ ಅನುಭವಿಸುವಂತಾಗಿದೆ.

ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಹಾದು ಹೋಗುವ ಕಡಬ ಪೇಟೆ ವಾಣಿಜ್ಯ ನಗರವಾಗಿ ದಿನದಿಂದ ದಿನಕ್ಕೆ ಅಭಿವೃದ್ಧಿ
ಯಾಗುತ್ತಿದೆ. ಬೃಹತ್‌ ಕಟ್ಟಡಗಳು, ವ್ಯಾಪಾರ ವ್ಯವಹಾರ ಮಳಿಗೆಗಳು ಹೆಚ್ಚಾಗುತ್ತಲೇ ಇವೆ. ಅದಕ್ಕನುಗುಣವಾಗಿ ಪೇಟೆಯಲ್ಲಿ
ವಾಹನ ಹಾಗೂ ಜನಸಂದಣಿ ವೃದ್ಧಿಸುತ್ತಿದೆ.

ಸುಸಜ್ಜಿತವಾದ ಬಸ್‌ ನಿಲ್ದಾಣವೂ ಇಲ್ಲದೇ ಇರುವುದರಿಂದ ಸರಕಾರಿ ಬಸ್‌ಗಳು ಕೂಡ ಮಾರ್ಗದಲ್ಲಿಯೇ ನಿಂತು ಜನರನ್ನು
ಹತ್ತಿಸುವುದು ಮತ್ತು ಇಳಿಸುವುದು ಅನಿವಾರ್ಯವಾಗಿದೆ. ಅಸಮರ್ಪಕ ಒಳಚರಂಡಿ ವ್ಯವಸ್ಥೆಯಿಂದಾಗಿ ಮಳೆಗಾಲದಲ್ಲಿ ಮಳೆನೀರು ರಸ್ತೆಯಲ್ಲಿಯೇ ಹರಿಯುತ್ತದೆ. ಈ ಎಲ್ಲಾ ಮೂಲ ಸೌಕರ್ಯಗಳ ಕೊರತೆಯ ಮಧ್ಯೆ ಇಲ್ಲಿ ಜನತೆಗೆ ದಿನನಿತ್ಯ ಕಾಡು
ವುದು ವಾಹನಗಳ ಪಾರ್ಕಿಂಗ್‌ ವ್ಯವಸ್ಥೆ.

ಪಾರ್ಕಿಂಗ್‌ಗೆ ಸೂಕ್ತ ವ್ಯವಸ್ಥೆ ಇಲ್ಲ 
ಕಡಬ ಪೇಟೆಗೆ ನೆರೆಯ ಗ್ರಾಮಗಳಿಂದ ಜನರನ್ನು ಕರೆತರುವ ಟೂರಿಸ್ಟ್‌ ಜೀಪುಗಳು, ಟ್ಯಾಕ್ಸಿಗಳು, ಪಿಕಪ್‌ ಜೀಪುಗಳು ಹಾಗೂ
ಮಿನಿಬಸ್‌ಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಇಲ್ಲದೇ ರಸ್ತೆ ಬದಿಯೇ ನಿಲುಗಡೆ ಯಾಗುತ್ತಿದೆ. 350 ಕ್ಕೂ ಹೆಚ್ಚು ಇರುವ ಅಟೋ ರಿಕ್ಷಾಗಳಿಗೆ ಪಂಜ ರಸ್ತೆಯ ಪಕ್ಕ ಹಾಗೂ ಅಂಚೆ ಕಚೇರಿ ಬಳಿಯ ದೈವಗಳ  ಮಾಡದ ಪಕ್ಕದಲ್ಲಿ ಅಧಿಕೃತ ಆಟೋ ನಿಲ್ದಾಣಗಳಿದ್ದರೂ ಅದು ಸಾಲುತ್ತಿಲ್ಲ. ಪೇಟೆಯಲ್ಲಿ ಜಾಗ ಇರುವ ಕಡೆ ಅಟೋಗಳು ನಿಲುಗಡೆಯಾಗುತ್ತಿವೆ. ಇದೆಲ್ಲದರ ನಡುವೆ
ತಾಲೂಕಿನ 42 ಗ್ರಾಮಗಳಿಂದ ವಿವಿಧ ಕೆಲಸ ಕಾರ್ಯಗಳಿಗಾಗಿ ಕಡಬ ಪೇಟೆಗೆ ಬರುವ ಜನರು ತಮ್ಮ ವಾಹನಗಳನ್ನು ಪಾರ್ಕಿಂಗ್‌
ಮಾಡಲು ಜಾಗ ಹುಡುಕುವುದರಲ್ಲಿಯೇ ಸುಸ್ತಾಗುತ್ತಾರೆ.

ಪ್ರಸ್ತಾವನೆಗೆ ಸೀಮಿತ
ಕಡಬದಲ್ಲಿ ಶುಲ್ಕ ಸಹಿತ ಸುಸಜ್ಜಿತ ಪಾರ್ಕಿಂಗ್‌ ವ್ಯವಸ್ಥೆಗೆ 10 ವರ್ಷಗಳ ಹಿಂದೆಯೇ ಆಗಿನ ಗ್ರಾ.ಪಂ. ಆಡಳಿತ ಮುಂದಾಗಿತ್ತು.
ಗ್ರಾ.ಪಂ.ನ ಅಪೇಕ್ಷೆಗೆ ಜಿಲ್ಲಾಧಿಕಾರಿಗಳು ಪೂರಕವಾಗಿ ಸ್ಪಂದಿಸಿ ಸಂಬಂಧಪಟ್ಟ ಇಲಾಖೆಯಿಂದ ವರದಿ ಕೇಳಿದ್ದರು. ಅದರಂತೆ ಕಡಬ ಆರಕ್ಷಕ ಉಪನಿರೀಕ್ಷಕರು ಉದ್ದೇಶಿತ ಸ್ಥಳದ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದರು. ಅಂದಿನ ಗ್ರಾ.ಪಂ. ಅಧ್ಯಕ್ಷ ಕೆ.ಎಂ.ಹನೀಫ್‌ ಅವರು ವರ್ತಕರು, ವಾಹನ ಚಾಲಕ-ಮಾಲಕರು, ಜನಪ್ರತಿನಿಧಿಗಳು, ಕಂದಾಯ ಹಾಗೂ ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿ ಒಮ್ಮತದ ನಿರ್ಣಯಕ್ಕೆ ಬಂದು ಸೈಂಟ್‌ ಜೋಕಿಮ್ಸ್‌ ಚರ್ಚ್‌ ಮುಂಭಾಗದಲ್ಲಿ ರಸ್ತೆಯ ಪಕ್ಕ 2 ಕಡೆ ಹಾಗೂ ದೈವಗಳ ಮಾಡದ ಬಳಿ ರಸ್ತೆಯ ಪಕ್ಕದ ಮಣ್ಣಿನ ದಿಣ್ಣೆಯನ್ನು ಸಮತಟ್ಟುಗೊಳಿಸಲಾಗಿತ್ತು.

ಸುಸಜ್ಜಿತ ಪಾರ್ಕಿಂಗ್‌, ಶೌಚಾಲಯ, ಕುಡಿಯುವ ನೀರು, ಸಣ್ಣ ಕೈತೋಟ ಹೀಗೆ ಯೋಜನೆ ರೂಪಿಸಲಾಗಿತ್ತು. ಅದಕ್ಕಾಗಿ ಸಂಸದರು, ಶಾಸಕರು, ಜಿ.ಪಂ.ಹಾಗೂ ತಾ.ಪಂ. ಅನುದಾನವನ್ನು ಕ್ರೂಢೀಕರಿಸಿ ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ
ಮಾತುಕತೆ ನಡೆದಿತ್ತು. ಆದರೆ ಅದ್ಯಾವುದೂ ಕಾರ್ಯರೂಪಕ್ಕೆ ಬಂದಿಲ್ಲ.

ವ್ಯವಸ್ಥೆ ಅನುಷ್ಠಾನಗೊಂಡರೆ ಒಳ್ಳೆಯದು
ಪೇಟೆಯಲ್ಲಿ ಸಮರ್ಪಕ ವಾಹನ ಪಾರ್ಕಿಂಗ್‌ ವ್ಯವಸ್ಥೆ ಇಲ್ಲದೇ ಇರುವುದರಿಂದ ನಮಗೂ ಪಾರ್ಕಿಂಗ್‌ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ವಾಹನ ಪಾರ್ಕಿಂಗ್‌ಗಾಗಿ ಗುರುತಿಸಲ್ಪಟ್ಟ ಜಾಗಗಳ ಬಗ್ಗೆ ಜಿಲ್ಲಾಧಿಕಾರಿಯವರು ವರದಿ ಕೇಳಿದ್ದ ಹಿನ್ನೆಲೆಯಲ್ಲಿ ಆಗಿನ ಉಪನಿರೀಕ್ಷಕರು ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದರು. ಉದ್ದೇಶಿತ ಪಾರ್ಕಿಂಗ್‌ ವ್ಯವಸ್ಥೆ ಶೀಘ್ರ ಅನುಷ್ಠಾನಗೊಂಡರೆ ಒಳ್ಳೆಯದು.
ಅಭಿನಂದನ್‌, ಕಡಬ ಆರಕ್ಷಕ ಉಪನಿರೀಕ್ಷಕರು

*ನಾಗರಾಜ್‌ ಎನ್‌.ಕೆ

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.