Kadaba: ಪ್ರಾಣಿ ಬೇಟೆ ಮೂವರ ಬಂಧನ
Team Udayavani, Aug 22, 2023, 9:53 PM IST
ಕಡಬ: ಕಾಡು ಪ್ರಾಣಿಗಳ ಬೇಟೆಯಾಡಿದ ಮೂವರು ಆರೋಪಿಗಳನ್ನು ಕಡಬ ಪೋಲಿಸರು ಬಂಧಿಸಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕುಂತೂರು ಬಳಿ ಮಂಗಳವಾರ ಸಂಭವಿಸಿದೆ.
ಬಲ್ಯ ರಕ್ಷಿತಾರಣ್ಯದಲ್ಲಿ ಬೇಟೆಯಾಡಿ ಆರೋಪಿಗಳು ಮುಂಜಾವಿನ ವೇಳೆ ಮನೆಯ ಕಡೆ ತೆರಳುತ್ತಿದ್ದಾಗ ಗುಸ್ತು ತಿರುಗುತ್ತಿದ್ದ ಪೋಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.
ನೆಲ್ಯಾಡಿ ಮೂಲದ ಬಿನು, ದಿನೇಶ್ ಹಾಗೂ ನವೀನ್ ಬಂಧಿತ ಆರೋಪಿಗಳು. ಕಡಬ ಎಸ್ಐ ಆಂಜನೇಯ ರೆಡ್ಡಿ ಹಾಗೂ ಸಿಬಂದಿ ಗಸ್ತು ತಿರುಗಿಕೊಂಡು ಕುಂತೂರು ಬಳಿ ಬಂದಾಗ ಒಂದು ಇನ್ನೋವಾ ಕಾರು ಅನುಮಾನಾಸ್ಪದವಾಗಿ ಸಾಗುತ್ತಿರುವುದು ಕಂಡು ಬಂದಿದೆ. ಕೂಡಲೇ ಆ ವಾಹನವನ್ನು ತಡೆದು ನಿಲ್ಲಿಸಿ ತಪಾಸಣೆ ಮಾಡಿದಾಗ ಬೇಟೆಯಾಡಿದ ಒಂದು ಮುಳ್ಳು ಹಂದಿ, ಎರಡು ಬರಿಂಕ, ಒಂದು ಬೆರು ಎನ್ನುವ ಪ್ರಾಣಿಗಳು ಪತ್ತೆಯಾಗಿದೆ. ಜತೆಗೆ ಒಂದು ಕೋವಿ ಸಿಕ್ಕಿದೆ. ಮೂವರನ್ನು ಬಂಧಿಸಿರುವ ಪೋಲೀಸರು, ಬೇಟೆಯಾಡಿದ ಪ್ರಾಣಿ, ಕೋವಿ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳನ್ನು ಪೋಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಸಂಬಂಧಪಟ್ಟ ಇಲಾಖೆಗೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲು ಆದೇಶಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ