Karnataka election 2023: ಪುತ್ತೂರು- ಬಡವರು ಗೆಲ್ಲಲು ಕಾಂಗ್ರೆಸ್‌ ಗೆಲ್ಲಿಸಿ: ಅಶೋಕ್‌ ರೈ

ಜನಪರ ಆಡಳಿತ ನೀಡಿದ ಕಾಂಗ್ರೆಸ್‌ ಸರಕಾರವನ್ನು ಮರಳಿ ತರಲು ಜನ ನಿಶ್ಚಯ ಮಾಡಿದ್ದಾರೆ.

Team Udayavani, Apr 20, 2023, 3:13 PM IST

Karnataka election 2023: ಪುತ್ತೂರು- ಬಡವರು ಗೆಲ್ಲಲು ಕಾಂಗ್ರೆಸ್‌ ಗೆಲ್ಲಿಸಿ: ಅಶೋಕ್‌ ರೈ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ಕೋಡಿಂಬಾಡಿ ಅವರು ಬುಧವಾರ ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಮಿನಿವಿಧಾನಸೌಧಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಕೋಡಿಂಬಾಡಿ ಶ್ರೀ ಮಹಿಷಮರ್ದಿನಿ, ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿ ದರ್ಬೆಯಿಂದ ಮೆರವಣಿಗೆ ಮೂಲಕ ಸಾಗಿ ಕಿಲ್ಲೆ ಮೈದಾನದಲ್ಲಿ ಸಭೆ ನಡೆಯಿತು.

ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ಮಾತನಾಡಿ, ಕಾಂಗ್ರೆಸ್‌ ಅನ್ನುವುದು ಒಂದು ಕುಟುಂಬ ಇದ್ದ ಹಾಗೆ. ಇಲ್ಲಿ ಕಾರ್ಯಕರ್ತರೇ ಆಸ್ತಿ. ತನ್ನನ್ನು ಗೆಲ್ಲಿಸಿದಲ್ಲಿ ಅವರ ಭಾವನೆಗಳಿಗೆ ತಕ್ಕಂತೆ ಕಾರ್ಯ ನಿರ್ವಹಿಸುತ್ತೇನೆ. ಬಡವರ ಪರವಾಗಿರುವ ಧೋರಣೆಯನ್ನು ಆಡಳಿತದ ಮೂಲಕ ಅನುಷ್ಠಾನಿಸುತ್ತೇನೆ ಎಂದರು.

ಕಾಂಗ್ರೆಸ್‌ ವಕ್ತಾರೆ ಭವ್ಯಾ ನರಸಿಂಹಮೂರ್ತಿ ಮಾತನಾಡಿ, ಪ್ರತೀ ಯೋಜನೆಯಲ್ಲಿಯು ಕಮಿಷನ್‌ ದಂಧೆ ನಡೆಸಿದ ಬಿಜೆಪಿ ಸರಕಾರವನ್ನು ಕಿತ್ತೂಗೆದು ಹಿಂದೆ ಜನಪರ ಆಡಳಿತ ನೀಡಿದ ಕಾಂಗ್ರೆಸ್‌ ಸರಕಾರವನ್ನು ಮರಳಿ ತರಲು ಜನ ನಿಶ್ಚಯ ಮಾಡಿದ್ದಾರೆ. ಅಶೋಕ್‌ ಕುಮಾರ್‌ ರೈ ಅವರನ್ನು ಗೆಲ್ಲಿಸುವ ಮೂಲಕ ಈ ಭಾಗದಲ್ಲಿಯು ಜನಪರ ಕಾರ್ಯ ಅನುಷ್ಠಾನ ಸಾಧ್ಯವಾಗಲಿದೆ ಎಂದರು.

ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾತನಾಡಿ, ಪುತ್ತೂರಿನಲ್ಲಿ ಕಾಂಗ್ರೆಸ್‌ ಬಲಿಷ್ಠವಾಗಿದೆ. ಇಲ್ಲಿ ಎಲ್ಲರೂ ಒಂದಾಗಿ ಪಕ್ಷವನ್ನು ಗೆಲ್ಲಿಸಲು ಪಣ ತೊಟ್ಟಿದ್ದಾರೆ. ಅಶೋಕ್‌ ರೈ ಅವರನ್ನು ಗೆಲ್ಲಿಸುವ ಮೂಲಕ ಪುತ್ತೂರಿನಲ್ಲಿ ಕಾಂಗ್ರೆಸ್‌ ಧ್ವಜ ಅರಳಿಸಬೇಕು ಎಂದರು.

ವಿಧಾನಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ, ದ.ಕ.ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಹರೀಶ್‌ ಕುಮಾರ್‌ ಮಾತನಾಡಿದರು. ಜಿಲ್ಲಾ ಉಸ್ತುವಾರಿ ಶಿಭಾ ರಾಮಚಂದ್ರನ್‌, ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಶಾಲೆಟ್‌ ಪಿಂಟೊ, ಜಿಲ್ಲಾ ಯುವಕ ಕಾಂಗ್ರೆಸ್‌ ಅಧ್ಯಕ್ಷ ಲುಕ್ಮಾನ್‌ ಬಂಟ್ವಾಳ, ಕೆಪಿಸಿಸಿ ಸದಸ್ಯ ಕಾವು ಹೇಮನಾಥ ಶೆಟ್ಟಿ, ಕೃಪಾ ಆಳ್ವ, ಪುತ್ತೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ , ಉಪ್ಪಿನಂಗಡಿ-ವಿಟ್ಲ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಡಾ| ಕೆ.ವಿ.ರಾಜರಾಮ್‌, ಪುತ್ತೂರು, ವಿಟ್ಲ ಬ್ಲಾಕ್‌ ಸಮಿತಿಯ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.