ಕೇಳ್ಕರ ದೇಗುಲ ಮತ್ಸ್ಯತೀರ್ಥ: ಮೀನುಗಳಿಗೆ ಸಂಚಕಾರ


Team Udayavani, May 23, 2019, 6:00 AM IST

s-1

ಕೇಳ್ಕರ ನದಿ ನೀರಿನ ಹೊಂಡದಲ್ಲಿ ಜೀವನ್ಮರಣ ಸ್ಥಿತಿಯಲ್ಲಿರುವ ಮೀನುಗಳು.

ಬೆಳ್ತಂಗಡಿ: ನೀರಿನ ಅಭಾವ ಎಲ್ಲೆಡೆ ತೀವ್ರ ಸ್ವರೂಪ ಪಡೆಯುತ್ತಿರುವ ಸಮಯದಲ್ಲೇ ಪ್ರಸಿದ್ಧ ತೀರ್ಥಕ್ಷೇತ್ರಗಳ ನದಿ ನೀರಿನ ಮತ್ಸ್ಯ ಸಂಕುಲಕ್ಕೂ ಆಪತ್ತು ಎದುರಾಗಿದೆ. ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕೇಳ್ಕರ ಮಹಾಲಿಂಗೇಶ್ವರ ದೇಗುಲ ಸಮೀಪದ ಫಲ್ಗುಣಿ ನದಿಯ ಉಪನದಿ ಬತ್ತಿದ ಪರಿಣಾಮ ಮತ್ಸéಸಂತತಿಗೆ ಆಪತ್ತು ಎದುರಾಗಿದೆ. ಕಳೆದೆರಡು ತಿಂಗಳಿನಿಂದ ನೀರಿನ ಒಳ ಹರಿವು ಕಡಿಮೆಯಾದ ಪರಿಣಾಮ ಪೆರುವೊಳು ಜಾತಿಯ ಮೀನುಗಳು ನಾಲ್ಕೈದು ದಿನಗಳಿಂದ ಉಸಿರು ನಿಲ್ಲಿಸುತ್ತಿವೆ.

ತಾಲೂಕಿನಲ್ಲಿ ಶಿಶಿಲದ ಶಿಶಿಲೇಶ್ವರ ದೇಗುಲದ ಕಪಿಲಾ ನದಿ ಹೊರತು ಪಡಿಸಿ ಕೇಳ್ಕರೇಶ್ವರನ ಸನ್ನಿಧಿಯಲ್ಲಿ ಈ ಮತ್ಸéಸಂಕುಲ ಕಾಣಸಿಗುತ್ತದೆ. ಆದರೆ ಇಲ್ಲಿನ ವಿಶಿಷ್ಟ ಜಾತಿಯ ಮೀನುಗಳು ಬಿಸಿಲಿನ ತಾಪ ಸಹಿಸಲಾರದೆ ಸಾವು ಕಾಣುತ್ತಿದೆ. ನೀರಿನ ಮಟ್ಟ ನೆಲಕ್ಕೆ ಸನಿಹವಾಗುತ್ತಿರುವಂತೆಯೇ ಮೀನುಗಳು ಬಿಸಿ ತಾಳಲಾರದೆ ಸಾವನ್ನಪ್ಪುತ್ತವೆ. ಆಹಾರ, ಮತ್ತೂಂದೆಡೆ ಆಮ್ಲಜನಕದ ಕೊರತೆ ಎದುರಾಗುತ್ತಿರುವುದರಿಂದ ವಿಶಿಷ್ಟ ಮತ್ಸ್ಯಸಂಕುಲ ಅವನತಿ ಹಾದಿ ಹಿಡಿಯುತ್ತಿರುವುದು ಚಿಂತನಾರ್ಹ.

ದೇಗುಲದ ಕೆಳಭಾಗದಲ್ಲಿ ಬೃಹತ್‌ ಹೊಂಡವೊಂದಿದ್ದು, ಸ್ವಲ್ಪ ಮಾತ್ರ ನೀರಿನ ಸಂಗ್ರಹವಿದೆ. ತೀವ್ರ ಬಿಸಿಯಿಂದ ಎಲ್ಲ ಮೀನುಗಳು ಇಲ್ಲಿ ಬಂದು ಸೇರಿವೆ. ಬಿಸಿಲಿನ ಬೇಗೆಯಿಂದಾಗಿ ನೀರು ಬಿಸಿಯಾದ ಪರಿಣಾಮ ನೀರಿನಲ್ಲಿರುವ ಮೀನುಗಳು ಪ್ರಾಣಬಿಡುತ್ತಿದೆ.

ಕೊಳವೆಬಾವಿ ನೀರು ನದಿಗೆ
ನದಿಯ ಬಿಸಿ ನೀರಿನಲ್ಲಿ ಮೀನುಗಳ ಒದ್ದಾಟ ನೋಡಲಾರದೆ ನದಿ ಸಮೀಪದ ನಿವಾಸಿ ಶುಭಕರ ಆಚಾರ್ಯ ಎಂಬವರು ಮೀನುಗಳ ರಕ್ಷಣೆಗೆ ಮುಂದಾಗಿದ್ದಾರೆ. ತಮ್ಮ ತೋಟದ ಸ್ವಂತ ಕೊಳವೆ ಬಾವಿಯಿಂದ ದಿನಕ್ಕೆರಡು ಬಾರಿ ನೀರು ಹಾಯಿಸುತ್ತಿದ್ದಾರೆ. ಈ ಮೀನುಗಳನ್ನು ರಕ್ಷಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಸತ್ತ ಮೀನುಗಳು ಮತ್ತಷ್ಟು ಮೀನಿನ ಸಾವಿಗೆ ಕಾರಣವಾಗಬಹುದು ಎಂದು ಸತ್ತ ಮೀನುಗಳನ್ನು ಹೊರ ತೆಗೆದು ದಫನ ಮಾಡಲಾಗುತ್ತಿದೆ.

ಸಂರಕ್ಷಣೆ ಅವಶ್ಯ
ಇನ್ನೊಂದು ವಾರದಲ್ಲಿ ಮಳೆ ಬಾರದಿದ್ದರೆ ಇದ್ದ ಮೀನುಗಳ ಸಂತತಿ ಸಂಪೂರ್ಣ ನಾಶವಾಗುವ ಸಾಧ್ಯತೆ ಇದೆ. 2017ರಲ್ಲಿ ನೀರಿನ ಕೊರತೆಯಿಂದಾಗಿ ಸಾವಿರಾರು ಮೀನು ಸತ್ತು ಹೋಗಿ ಬಳಿಕ ನದಿಗೆ ಟ್ಯಾಂಕರ್‌ ಮೂಲಕ ನೀರನ್ನು ಹಾಯಿಸಲಾಗಿತ್ತು. ಮತ್ತೆ ಅದೇ ಆತಂಕ ಸ್ಥಳೀಯರಲ್ಲಿ ಮತ್ತು ದೇವಸ್ಥಾನ ಆಡಳಿತ ಮಂಡಳಿಗೆ ಮೂಡಿದೆ.

ಶಿಶಿಲೇಶ್ವರದಲ್ಲೂ ಆತಂಕ
ನೀರಿನ ಅಭಾವದಿಂದ ಶಿಶಿಲದ ಶಿಶಿಲೇಶ್ವರ ದೇವಸ್ಥಾನವೂ ಹೊರತಾಗಿಲ್ಲ. ನೀರಿನ ಹರಿವು ಸದ್ಯದ ಮಟ್ಟಿಗೆ ಸಾಕಷ್ಟಿದೆ. ಆದರೆ ಜೂನ್‌ ಮೊದಲ ವಾರದಲ್ಲಿ ಮಳೆ ಬಾರದಿದ್ದರೆ ಆತಂಕ ಸಾಧ್ಯತೆ ಇದೆ. ಈಗಾಗಲೇ ನೀರು ತಳ ಮಟ್ಟ ತಲುಪುತ್ತಿರುವುದರಿಂದ ಮೀನಿಗೆ ನೀರಿನ ಬಿಸಿ ತಾಳಲು ಸಾಧ್ಯವಾಗುತ್ತಿಲ್ಲ. ಮತ್ತೂಂದೆಡೆ ಮೀನಿನ ಸಂಖ್ಯೆ ಹೆಚ್ಚಿರುವುದರಿಂದ ಆಮ್ಲಜನಕದ ಕೊರತೆ ಕಾಡುತ್ತಿದೆ. ಕಳೆದ ವಾರ ಕೆಲವು ಮೀನುಗಳು ಸಂಕಷ್ಟಕ್ಕೆ ಸುತ್ತಾಗಿದ್ದವು. ಬಳಿಕ ಆರೈಕೆ ಮಾಡಿ ಮತ್ತೆ ನದಿಗೆ ಬಿಡಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಹೊರತಾಗಿ ಬೆಳ್ತಂಗಡಿ ತಾಲೂಕಲ್ಲಿ ಪಜಿರಡ್ಕ ಸದಾಶಿವ ದೇವಸ್ಥಾನ ಬಳಿ ಮೃತ್ಯುಂಜಯ ಹೊಳೆ- ನೇತ್ರಾವತಿ ಸಂಗಮ ಸ್ಥಾನ ಬತ್ತಿ ಹೋಗಿದೆ. ಕೊಲ್ಲಿ ದೇವಾಲಯ ಮತ್ತು ಕಾಜೂರು ದರ್ಗಾಗಳಿರುವ ನೇತ್ರಾವತಿ ಸಂಪೂರ್ಣ ಬರಡಾಗಿದೆ. ಉಳಿದಂತೆ ಧರ್ಮಸ್ಥಳ ಸ್ನಾನಘಟ್ಟ ಸಮೀಪದ ನದಿ ನೀರ ಹರಿವು ಕ್ಷೀಣಿಸಿರುವುದರಿಂದ ಮತ್ಸ್ಯಸಂಕುಲವೇ ಬರಿದಾಗುವ ಹಂತದಲ್ಲಿದೆ.

ಸೀಯಾಳ ಅಭಿಷೇಕ
ಮೀನುಗಳು ಸಾಯದಂತೆ ದೇವರಲ್ಲಿ ಪ್ರಾರ್ಥಿಸಿ, ಸೀಯಾಳ ಅಭಿಷೇಕ ಮಾಡಿದ್ದೇವೆ. ಆದಷ್ಟು ಬೇಗ ಮಳೆ ಬರಲಿ ಎಂದು ದೇವರಲ್ಲಿ ಬೇಡಿಕೊಳ್ಳಬೇಕಾಗಿದೆ.
ನಾರಾಯಣ ಭಟ್‌ ಗುರಿಪಳ್ಳ, ದೇಗುಲದ ಅರ್ಚಕರು

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.