ನಿರ್ವಹಣೆ ಇಲ್ಲದೆ ಸೊರಗಿದ ಉಬರಡ್ಕ-ಮಿತ್ತೂರಿನ ಕಿಂಡಿ ಅಣೆಕಟ್ಟು

 ಆಡಳಿತದ ನಿರ್ಲಕ್ಷ್ಯ, ಜನರ ಪೇಚಾಟ ,ಶೀಘ್ರ ಕ್ರಮಕ್ಕೆ ಆಗ್ರಹ

Team Udayavani, Mar 12, 2021, 2:40 AM IST

ನಿರ್ವಹಣೆ ಇಲ್ಲದೆ ಸೊರಗಿದ ಉಬರಡ್ಕ-ಮಿತ್ತೂರಿನ ಕಿಂಡಿ ಅಣೆಕಟ್ಟು

ಸುಳ್ಯ: ಪಶ್ಚಿಮ ವಾಹಿನಿ ಯೋಜನೆಯ ಮೂಲಕ ರಾಜ್ಯಾದ್ಯಂತ ನದಿಗಳಿಗೆ ಕಿಂಡಿ ಅಣೆಕಟ್ಟು ಕಟ್ಟಿಸಲಾಗಿದೆ. ಈ ಬಾರಿಯ ಬಜೆಟ್‌ನಲ್ಲಿಯೂ 1,348 ಕಿಂಡಿ ಅಣೆಕಟ್ಟೆ ನಿರ್ಮಿಸಲು 3,986 ಕೋಟಿ ರೂ. ಮೀಸಲಿರಿಸಲಾಗಿದೆ. ಆದರೆ ಅತ್ಯಾವಶ್ಯಕವಾದ ಕೆಲವು ಪ್ರಮುಖ ಪ್ರದೇಶಗಳಿಗೆ ಕಿಂಡಿ ಅಣೆಕಟ್ಟು ಭಾಗ್ಯ ದೊರೆತಿಲ್ಲ. ಕಿಂಡಿ ಅಣೆಕಟ್ಟು ಇರುವ ಕೆಲವೆಡೆ ಅದರ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ. ಇದಕ್ಕೆ ಉದಾರಣೆ ಉಬರಡ್ಕ-ಮಿತ್ತೂರಿನ ಕಿಂಡಿ ಅಣೆಕಟ್ಟು.

ಸುಳ್ಯ-ಉಬರಡ್ಕ-ಮಿತ್ತೂರು- ದೊಡ್ಡತೋಟ ರಸ್ತೆ ಬದಿ 2 ವರ್ಷಗಳ ಹಿಂದೆ ಸಣ್ಣ ನೀರಾವರಿ ಇಲಾಖೆ ವತಿಯಿಂದ 45 ಲಕ್ಷ ರೂ. ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿತ್ತು.  ಮೊದಲು ಸೇತುವೆ  ಕಟ್ಟುವ ವೇಳೆ ಸ್ವಲ್ಪ ಪ್ರಮಾಣದ ಮರಳು, ಸಿಮೆಂಟ್‌ ಪಯಸ್ವಿನಿ ಪಾಲಾಗಿತ್ತು. ಮತ್ತೆ ಪುನಃ ಸೇತುವೆ ನಿರ್ಮಿಸಲಾಗಿತ್ತು. ಸಣ್ಣ ನೀರಾವರಿ ಇಲಾಖೆಯಿಂದ ಮೊತ್ತ ಪಾವತಿಯಾಗಿಲ್ಲ ಎಂದು ಗುತ್ತಿಗೆ ಪಡೆದುಕೊಂಡವರು ಕಿಂಡಿ ಅಣೆಕಟ್ಟು ನಿರ್ಮಿಸಲು ಬಳಸುವ ಹಲಗೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ. ಈಗ ಹಲಗೆಗಳ ಗುಣಮಟ್ಟ ಕಡಿಮೆಯಾಗಿದೆ.  ನೀರಾವರಿ ಇಲಾಖೆಯಿಂದ ದುಡ್ಡು ಸಿಕ್ಕಿಲ್ಲ ಎಂದು ಜನರಿಗೆ ಉಪಕಾರಿಯಾಗಿರುವ ಹಲಗೆಗಳನ್ನು ಇಟ್ಟು ಗೆದ್ದಲು ಬರಿಸುವುದು ಏಕೆ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಕಸ ತೆರವುಗೊಳಿಸಿಲ್ಲ :

ಈಗಲೇ ನೀರಿನ ಅಭಾವದ ಮುನ್ಸೂಚನೆ ಗೋಚರಿಸಿದ್ದು, ಮಳೆಗಾಲದಲ್ಲಿ ಕಿಂಡಿಗಳಲ್ಲಿ  ತುಂಬಿದ್ದ ಹೂಳು ಹಾಗೂ  ಕಡ್ಡಿಗಳನ್ನು ಇನ್ನೂ ತೆರವುಗೊಳಿಸಿಲ್ಲ.  ಆಡಳಿತ ವೈಫಲ್ಯ, ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಸ್ವ ಹಿತಾಸಕ್ತಿಗೆ ಬಲಿಯಾಗಿ ಸಾರ್ವಜನಿಕರು ನೀರಿನ ಬರ ಎದುರಿಸಬೇಕಾದ ದುಸ್ಥಿತಿಯಲ್ಲಿದ್ದಾರೆ. ಈ ರೀತಿ ನಿರ್ಲಕ್ಷ್ಯ ಮುಂದುವರಿದರೆ ಬೇಸಿಗೆ ಅಂತ್ಯದಲ್ಲಿ ನೀರಿನ ಅಭಾವ ಎದುರಾಗಲಿದೆ ಎಂದು ಜನರು ಆತಂಕ ವ್ಯಕ್ತಪಡಿಸುತ್ತಾರೆ.

ಕ್ರಮಕ್ಕೆ ಮುಂದಾಗಬೇಕು :

ಸ್ಥಳೀಯರು ಈ ನೀರನ್ನೇ ಬಳಸುತ್ತಿರುವುದರಿಂದ ಬೋರ್‌ ಅಥವಾ ಪರ್ಯಾಯ ಮಾರ್ಗಗಳನ್ನು ಕಂಡು ಕೊಂಡಿಲ್ಲ. ಈಗ ನಿರ್ಮಿಸಿರುವ ಕಿಂಡಿ ಅಣೆಕಟ್ಟೆಯನ್ನು ಸರಿಯಾದ ರೀತಿ ನಿರ್ವಹಿಸಿ ಜನರ ಬಳಕೆಗೆ ಲಭ್ಯವಾಗಲು ನೂತನ ಆಡಳಿತ ಕಾರಣ ನೀಡದೇ ಕ್ರಮಕ್ಕೆ ಮುಂದಾಗಬೇಕು ಎಂದು ಉಬರಡ್ಕ-ಮಿತ್ತೂರಿನ ಸ್ಥಳೀಯರು ಆಗ್ರಹಿಸುತ್ತಿದ್ದಾರೆ.  ಸಣ್ಣ ನೀರಾವರಿ ಇಲಾಖೆಯು ಗುತ್ತಿಗೆದಾರರ ಬಿಲ್‌ ಪರಿಶೀಲಿಸಬೇಕು ಎನ್ನುವುದು ಸಾರ್ವಜನಿಕರ ಸಲಹೆ.

ಕಿಂಡಿ ಅಣೆಕಟ್ಟು ನಿರ್ಮಿಸಲು ಮಾತ್ರವೇ ಟೆಂಡರ್‌ ನೀಡಿದ್ದರು. ಆದರೆ ಅದಕ್ಕೆ ನೀಡಬೇಕಾದ ಮೊತ್ತವನ್ನೇ ಇಲಾಖೆ ಮಂಜೂರು ಮಾಡಿಲ್ಲ. ಇದರಿಂದ ನಮಗೆ ಸಂಕಷ್ಟ ಎದುರಾಗಿದೆ. ಹಾಗಾಗಿ ಮೊತ್ತ ಪಾವತಿಯಾಗುವವರೆಗೆ ಹಲಗೆ ನಮ್ಮಲ್ಲಿ ಇಟ್ಟುಕೊಂಡಿದ್ದೇವೆ. -ಆನಂದ,ಗುತ್ತಿಗೆದಾರ

ಈ ಬಾರಿಯ ಗ್ರಾ.ಪಂ. ಆಡಳಿತ ಸಭೆಯಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಮೊದಲು ಅಲ್ಲಿನ ಹೂಳನ್ನು ತೆಗೆಸಲಾಗುವುದು. ಹಲಗೆಯ ವ್ಯವಸ್ಥೆ ಆಗಬೇಕು. ಸಂಬಂಧಪಟ್ಟವರು ಈ ಬಗ್ಗೆ ಕ್ರಮ ಕೈಗೊಳ್ಳಬೇಕಿದೆ.   -ವಿದ್ಯಾಧರ,  ಪಿಡಿಒ, ಉಬರಡ್ಕ-ಮಿತ್ತೂರು

 

– ಸುದೀಪ್‌ರಾಜ್‌ ಕೋಟೆಮೂಲೆ

ಟಾಪ್ ನ್ಯೂಸ್

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.