ರಸ್ತೆ ಅಪಘಾತ : ಕೃಷಿ ಉಪಕರಣಗಳ ಸಂಶೋಧಕ ಕೋಡಿಬೈಲು ಸತ್ಯನಾರಾಯಣ ಸ್ಥಳದಲ್ಲೇ ಸಾವು
Team Udayavani, May 17, 2021, 11:22 AM IST
ಪುತ್ತೂರು : ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ, ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯ ಪುತ್ತೂರಿನ ತೆಂಕಿಲದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ.
ಬೆಳ್ಳಾರೆಯ ಕೋಡಿಬೈಲು ಸತ್ಯನಾರಾಯಣ ಮೃತ ವ್ಯಕ್ತಿ. ಇವರು ಉದ್ಯಮಿ, ಕೃಷಿ ಉಪಕರಣಗಳ ಸಂಶೋಧಕರಾಗಿ,ಧಾರ್ಮಿಕ ಸಂಘಟಕರಾಗಿದ್ದರು.
ಇದನ್ನೂ ಓದಿ : ಕಾಪು: ಟಗ್ ನಲ್ಲಿ ಸಿಲುಕಿದ್ದ ಎಲ್ಲಾ ಕಾರ್ಮಿಕರ ರಕ್ಷಣೆ; ನೌಕಾದಳದಿಂದ ಯಶಸ್ವಿ ಏರ್ ಲಿಫ್ಟ್
ಸವಾರ ಬೆಳ್ಳಾರೆಯಿಂದ ಪುತ್ತೂರು ಬೈಪಾಸ್ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯಾದ ರಭಸಕ್ಕೆ ಸತ್ಯನಾರಾಯಣರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ದೇಹವನ್ನು ಪುತ್ತೂರು ಸರಕಾರಿ ಅಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಬೆಳ್ಳಾರೆ ಪರಿಸರದಲ್ಲಿ ಚಿರಪರಿಚಿತರಾಗಿದ್ದ ಸತ್ಯನಾರಾಯಣ ಕೋಡಿಬೈಲುರವರು ಕೋಡಿಬೈಲು ಕೃಷಿ ಏಜೆನ್ಸೀಸ್ ಮಾಲಕರಾಗಿ ಅನೇಕ ಕೃಷಿ ಉಪಕರಣಗಳ ಸಂಶೋಧಕರಾಗಿ ಹೆಸರು ಮಾಡಿದ್ದರು. ವಿಶ್ವ ಹಿಂದೂ ಪರಿಷತ್ ಮುಖಂಡರಾಗಿ ಸೇವೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ