ಕೊಯಿಲ ಕೆ. ಸಿ. ಫಾರ್ಮ್ ಶಾಲೆ: ಅಡಿಕೆ ಸಸಿ ನಾಟಿ
Team Udayavani, Apr 26, 2022, 9:51 AM IST
ಆಲಂಕಾರು: ಸರಕಾರಿ ಶಾಲೆಯೊಂದರ ಶಾಲಾಭಿವೃದ್ಧಿ ಸಮಿತಿ, ಶಿಕ್ಷಕರು, ಶಿಕ್ಷಣ ಪ್ರೇಮಿಗಳು ಒಟ್ಟಾಗಿ ಶಾಲೆಯ ಅರ್ಥಿಕತೆಯನ್ನು ಪೋಷಿಸುವ ಸಲುವಾಗಿ ಶಾಲಾ ಆವರಣದ ಸುತ್ತ ಅಡಿಕೆ ತೋಟ ನಿರ್ಮಾಣ ಮಾಡಿದ್ದಾರೆ.
ಕೊಯಿಲ ಕೆ ಸಿ ಫಾರ್ಮ್ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಕಾರ್ಯ ಮಾಡಲಾಗಿದೆ. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಶಿ ಪುತ್ಯೆ ಮುಂದಾಳತ್ವದಲ್ಲಿ ಈ ಕಾರ್ಯ ನಡೆದಿದೆ. ಶಾಲೆ ಹಿಂಭಾಗದಲ್ಲಿ ಖಾಲಿ ಇರುವ ಜಾಗದಲ್ಲಿ ಸುಮಾರು 450 ಅಡಿಕೆ ಸಸಿ ನಾಟಿ ಮಾಡಲಾಗಿದೆ. ಅಲ್ಲದೆ ಶಾಲಾ ಆವರಣದ ಸುತ್ತ ಸುಮಾರು 30 ತೆಂಗಿನ ಸಸಿ ನೆಡುವ ಸಲುವಾಗಿ ಹೊಂಡ ನಿರ್ಮಾಣ ಕಾರ್ಯ ನಡೆಯುತ್ತಿದೆ. ಕೃಷಿ ಕಾರ್ಯಕ್ಕೆಲ್ಲ ಶಾಲೆಯ ಕೊಳವೆ ಬಾವಿಯಿಂದ ನೀರು ಪೂರೈಸಲಾಗುತ್ತದೆ. ನೀರಾವರಿಗಾಗಿ ಪೈಪ್ಗ್ಳನ್ನು ಅಳವಡಿಸಲಾಗಿದೆ. ಅಡಿಕೆ ಕೃಷಿಯ ಆರಂಭದಲ್ಲಿ ನೆಲ ಸಮತಟ್ಟುಗೊಳಿಸಿ ಬಳಿಕ ನರೇಗಾ ಯೋಜನೆಯಡಿ ಹೊಂಡ ನಿರ್ಮಾಣ ಮಾಡಲಾಗಿದೆ. ವಿವಿಧ ದಾನಿಗಳ ನೆರವಿನಲ್ಲಿ ಈ ತೋಟ ನಿರ್ಮಾಣವಾಗಿದೆ.
ಆರ್ಥಿಕ ಚೈತನ್ಯಕ್ಕೆ ಈ ಯೋಜನೆ
ನಾಟಿ ಮಾಡಲಾದ ಅಡಿಕೆ ಕೃಷಿಯನ್ನು ಮುಂದಿನ ದಿನಗಳಲ್ಲಿ ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿಯನ್ನು ಶಾಲಾಭಿವೃದ್ಧಿ ಸಮಿತಿ ವಹಿಸಿಕೊಳ್ಳಲಿದೆ. ಇದರಿಂದ ಬರುವ ಆದಾಯವನ್ನು ಶಾಲೆಯ ಅಭಿವೃದ್ಧಿಗೆ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಶಿ ಕುಮಾರ್ ಪುತ್ಯೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್