Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು
Team Udayavani, Mar 28, 2024, 7:37 PM IST
ಬೆಳ್ತಂಗಡಿ: ಮೇಯಲೆಂದು ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಾಣೆಯಾಗಿರುವ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಕೊಕ್ಕಡ ಗ್ರಾಮದ ಬೆಳ್ತಂಗಡಿ ನಿವಾಸಿ ಶಿವಪ್ರಸಾದ್ ಎಂಬವರು ಮಾ. 25ರಂದು ಬೆಳಗ್ಗೆ ತನ್ನ ದನವನ್ನು ಕೊಕ್ಕಡ ಶಬರಾಡಿ ಎಂಬಲ್ಲಿರುವ ತನ್ನ ತೋಟದಲ್ಲಿ ಕಟ್ಟಿ ಹಾಕಿದ್ದರು. ಬಳಿಕ ಮಧ್ಯಾಹ್ನ ತೋಟಕ್ಕೆ ಬಂದು ನೋಡುವಾಗ ದನವು ಅಲ್ಲಿರಲಿಲ್ಲ. ಈ ಬಗ್ಗೆ ಹುಡುಕಾಡಿದರೂ ಇದುವರೆಗೂ ದನವು ಎಲ್ಲೂ ಪತ್ತೆಯಾಗಿಲ್ಲ. ಕಳವಾದ ದನದ ಅಂದಾಜು ಮೌಲ್ಯ 20,000 ರೂ. ಎಂದು ಅಂದಾಜಿಸಲಾಗಿದೆ. ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು