ಕೊಂಬೆಟ್ಟು: ಮೈದಾನಕ್ಕಿಳಿಯುವುದೇ ವಿದ್ಯಾರ್ಥಿಗಳಿಗೆ ಶಿಕ್ಷೆ


Team Udayavani, Apr 2, 2021, 4:20 AM IST

ಕೊಂಬೆಟ್ಟು: ಮೈದಾನಕ್ಕಿಳಿಯುವುದೇ ವಿದ್ಯಾರ್ಥಿಗಳಿಗೆ ಶಿಕ್ಷೆ

ಪುತ್ತೂರು: ಅತ್ಯಧಿಕ ವಿದ್ಯಾರ್ಥಿ ಗಳಿರುವ ಸರಕಾರಿ ವಿದ್ಯಾಸಂಸ್ಥೆಯೆಂಬ ಹೆಗ್ಗಳಿಕೆಯ ಕೊಂಬೆಟ್ಟು ಪ.ಪೂ., ಪ್ರೌಢಶಾಲಾ ವಿದ್ಯಾರ್ಥಿಗಳು ಜೀವ ಕೈಯಲ್ಲಿ ಹಿಡಿದುಕೊಂಡೇ ಕ್ರೀಡಾಂಗಣಕ್ಕೆ ಇಳಿಯಬೇಕು!

ಎತ್ತರದ ದರೆ ನಡುವಿನ ಅಪಾಯಕಾರಿ ಸ್ಥಿತಿ ಯಲ್ಲಿರುವ ದಾರಿಯಲ್ಲಿ ಹೆಜ್ಜೆ ಇಡುತ್ತ ಮೈದಾನಕ್ಕೆ ಇಳಿಯಬೇಕಾದ ಸ್ಥಿತಿ ಇಲ್ಲಿನ ವಿದ್ಯಾರ್ಥಿಗಳದ್ದು.

ತಾಲೂಕು ಕ್ರೀಡಾಂಗಣ :

ಆರಂಭದಲ್ಲಿ ಕೊಂಬೆಟ್ಟು ಬೋರ್ಡ್‌ ಹೈಸ್ಕೂಲ್‌ ಅಧೀನದಲ್ಲಿದ್ದ ಈ ಕ್ರೀಡಾಂಗಣವನ್ನು ಎರಡು ದಶಕಗಳ ಹಿಂದೆ ತಾಲೂಕು ಕ್ರೀಡಾಂಗಣವಾಗಿ ಪರಿವರ್ತಿಸಿ ಯುವಜನ ಸೇವಾ ಇಲಾಖೆ ಅಧೀನಕ್ಕೆ ಒಪ್ಪಿಸಲಾಯಿತು.

ಕ್ರೀಡಾಂಗಣದ ಉತ್ತರ ದಿಕ್ಕಿನಲ್ಲಿ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಮತ್ತು ಪ್ರೌಢಶಾಲಾ ಇದ್ದು ಇಲ್ಲಿನ ವಿದ್ಯಾರ್ಥಿಗಳಿಗೆ ಈ ಕ್ರೀಡಾಂಣಗವೇ ಕ್ರೀಡಾ ಅಭ್ಯಾಸದ ನೆಲೆ. ಪ್ರತಿ ದಿನ ಶೈಕ್ಷಣಿಕ ಅವಧಿಯ ಒಂದು ತಾಸು ಅಭ್ಯಾಸವು ಇಲ್ಲೇ ನಡೆಯುತ್ತದೆ. ಎಲ್ಲ ವಿದ್ಯಾರ್ಥಿಗಳು ಧರೆಯ ಹಾದಿಯಲ್ಲೇ ಮೈದಾನ ಸೇರುತ್ತಾರೆ.

ದುರ್ಗಮ ಹಾದಿ :

ಕೊಂಬೆಟ್ಟು ಗುಡ್ಡದ ಮೇಲ್ಭಾಗದಲ್ಲಿ ಶಾಲಾ ಕಟ್ಟಡವಿದ್ದರೆ, ಕೆಳಭಾಗದಲ್ಲಿ   ಮೈದಾನವಿದೆ. ಧರೆಯ ನಡುವಿನ ದುರ್ಗಮ ಹಾದಿಯೇ ಇವೆರೆಡರ ಸಂಪರ್ಕ ಕೊಂಡಿ. ಈ ದಾರಿ ಈ ಹಿಂದೆ ಅವೈಜ್ಞಾನಿಕ ಕಾಮಗಾರಿ ನಡೆಸಿದ ಪರಿಣಾಮ ಮಳೆಗಾಲದಲ್ಲಿ ಧರೆ ಮೇಲ್ಭಾಗದಿಂದ ಮಳೆ ನೀರು ಹರಿದು ಸೃಷ್ಟಿಯಾದದ್ದು. ಅದನ್ನೇ ಮೈದಾನಕ್ಕೆ ಇಳಿಯಲು,  ಏರಲು ದಾರಿಯಾಗಿ ಬಳಸಲಾಗುತ್ತಿದೆ. ಇಲ್ಲಿ ಕೊಂಚ ಯಾಮರಿದರೂ ಅಪಾಯ ಕಟ್ಟಿಟ್ಟ ಬುತ್ತಿ ಎನ್ನುತ್ತದೆ ಇಲ್ಲಿನ ಪರಿಸ್ಥಿತಿ.

ತಾಲೂಕು ಕ್ರೀಡಾಂಗಣವಾಗಿರುವ ಕಾರಣ ತಾಲೂಕು ಮಟ್ಟದ ಕ್ರೀಡಾ ಕೂಟಗಳು, ನಾನಾ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಡೆಯುವ ಕ್ರೀಡಾ ಕೂಟಗಳು, ತಾಲೂಕು ಮಟ್ಟದ ಗಣರಾಜ್ಯೋತ್ಸವ ಇತ್ಯಾದಿ ಇಲ್ಲೇ ನಡೆಯುತ್ತವೆ. ದಕ್ಷಿಣ ದಿಕ್ಕಿನಲ್ಲಿ ಮಹಾಲಿಂಗೇಶ್ವರ ಐಟಿಐ ಸಂಸ್ಥೆ, ಪಶ್ಚಿಮ ದಿಕ್ಕಿನಲ್ಲಿ ವಿದ್ಯಾರ್ಥಿ ನಿಲಯ, ನೈಋತ್ಯ ದಿಕ್ಕಿನಲ್ಲಿ ರಾಮಕೃಷ್ಣ ಪ್ರೌಢಶಾಲಾ ವಿದ್ಯಾರ್ಥಿಗಳಿಗೂ ಇದೇ ಮೈದಾನ ಆಸರೆ. ಆದರೆ ಆ ಎರಡೂ ವಿದ್ಯಾಸಂಸ್ಥೆಗಳಿಗೆ ಈ ದುರ್ಗಮ ಹಾದಿಯಲ್ಲಿ ಸಂಚರಿಸಬೇಕಿಲ್ಲ. ಪ್ರತ್ಯೇಕವಾದ ದಾರಿಯಿದೆ.

ಪ್ರಸ್ತಾವನೆ ಸಲ್ಲಿಸಲಾಗಿದೆ :

ಧರೆಯ ನಡುವಿನ ದಾರಿಯಲ್ಲಿ ವಿದ್ಯಾರ್ಥಿಗಳು ಮೈದಾನಕ್ಕೆ ಇಳಿಯುವುದು ಸುರಕ್ಷಿತವಲ್ಲ ಎಂಬ ಬಗ್ಗೆ ಪ್ರೌಢಶಾಲೆ, ಕಾಲೇಜಿನ ಗಮನಕ್ಕೆ ತಂದಿದ್ದು, ಪ್ರತ್ಯೇಕ ದಾರಿ ಬಳಸುವಂತೆ ಸೂಚಿಸಲಾಗಿದೆ. ಮಳೆಗಾಲದಲ್ಲಿ ಧರೆ ಕುಸಿಯದಂತೆ ತಡೆಗೋಡೆ ಸಹಿತ ಮೈದಾನದ ವಿವಿಧ ಕಾಮಗಾರಿಗೆ 2 ಕೋಟಿ ರೂಪಾಯಿ ಕ್ರಿಯಾ ಯೋಜನೆ ತಯಾರಿಸಿ ನಿರ್ಮಿತಿ ಕೇಂದ್ರದಕ್ಕೆ ಕಳುಹಿಸಲಾಗಿದೆ ಎಂದು  ಯುವಜನ ಇಲಾಖೆ ಅಧಿಕಾರಿಗಳು ಉದಯವಾಣಿಗೆ ತಿಳಿಸಿದ್ದಾರೆ.

ಶತಮಾನ ಶಾಲೆಯ ಹಿರಿಮೆ :

1916ರ ಮೊದಲು ಈ ಭಾಗದ ಜನತೆ ಹೈಸ್ಕೂಲ್‌ ವಿದ್ಯಾಭ್ಯಾಸಕ್ಕಾಗಿ ಮಂಗಳೂರು, ಮಡಿಕೇರಿ ಅಥವಾ ದೊಡ್ಡ ಪಟ್ಟಣಗಳನ್ನು ಆಶ್ರಯಿಸಿದ್ದ ಸಂದರ್ಭದಲ್ಲಿ ಪುತ್ತೂರು ವಿದ್ಯಾವರ್ಧಕ ಸಂಘವು ಸ್ಥಾಪಿಸಿದ ಶಾಲೆ ಇದು. ಪೇಟೆಯ ಬಾಡಿಗೆ ಕಟ್ಟಡದಲ್ಲಿ ಜನ್ಮ ತಾಳಿ 1918-19ರಲ್ಲಿ ಕೊಂಬೆಟ್ಟು ಗುಡ್ಡದ ಮೇಲಿನ ಕಟ್ಟಡಕ್ಕೆ ಇದು ಸ್ಥಳಾಂತರಗೊಂಡಿತ್ತು. ಆರಂಭದಲ್ಲಿ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲೆ 1921-22ರಲ್ಲಿ ದ.ಕ. ಜಿಲ್ಲಾ

ಬೋರ್ಡ್‌ಗೆ ಹಸ್ತಾಂತರವಾಗಿ ಪುತ್ತೂರು ಬೋರ್ಡ್‌ ಹೈಸ್ಕೂಲ್‌ ಎಂದು ಪರಿವರ್ತನೆ ಗೊಂಡಿತು. 1964-65ರಲ್ಲಿ 11ನೇ ತರಗತಿ ಆರಂಭ ವಾದಾಗ ಹೈಯರ್‌ ಸೆಕೆಂಡರಿ ಹಾಗೂ 1972ರಲ್ಲಿ 12ನೇ ತರಗತಿ ಆರಂಭವಾದಾಗ ಜೂನಿಯರ್‌ ಕಾಲೇಜು ಆಗಿ ಪರಿವರ್ತನೆಗೊಂಡಿತು. 1975ರಲ್ಲಿ ಸರಕಾರಕ್ಕೆ ವಹಿಸಿಕೊಡುವ ತನಕ ಬೋರ್ಡ್‌ನ ಅಧೀನ ದಲ್ಲೇ ಇದ್ದ ಹಿನ್ನೆಲೆಯಲ್ಲಿ ಬೋರ್ಡ್‌ ಹೈಸ್ಕೂಲ್‌ ಹೆಸರಿನಲ್ಲೇ ಈ ಶಾಲೆ ಹೆಸರು ಗಳಿಸಿತು.

ಈ ಹಿಂದೆಯೇ ಜಿಲ್ಲಾಧಿಕಾರಿ ಸಹಿತ ಎಲ್ಲ ಹಂತದ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಹಾಸ್ಟೆಲ್‌ ಸನಿಹದ ಮೂಲಕ ಮೈದಾನಕ್ಕೆ ಸಂಪರ್ಕ ರಸ್ತೆ ಕಲ್ಪಿಸಲು ಶಾಸಕರಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಆ ಸಂಪರ್ಕ ದಾರಿ ವ್ಯವಸ್ಥೆ ಅಂತಿಮ ಹಂತದಲ್ಲಿದೆ. ಮುಂದೆ ಧರೆಯಲ್ಲಿನ ದಾರಿ ಮುಚ್ಚಲಾಗುವುದು. ತಾಲೂಕು ಕ್ರೀಡಾಂಗಣಕ್ಕೆ ಹೊಸ ಜಾಗ ಹುಡುಕಾಟ ನಡೆಯುತ್ತಿದ್ದು, ಆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಕೊಂಬೆಟ್ಟು ಮೈದಾನ ಕೊಂಬೆಟ್ಟು ಶಾಲಾ ಸುಪರ್ದಿಗೆ ಬರಲಿದೆ. ಈ ಧರೆಯ ಸನಿಹದಲ್ಲಿ ಶಾಲಾ ತರಗತಿ ಕಟ್ಟಡ ಇದ್ದು, ಕಟ್ಟಡದ ಸುರಕ್ಷತೆಯ ದೃಷ್ಟಿಯಿಂದ ತಡೆಗೋಡೆ ಸಹಿತ ಸುರಕ್ಷಾ ಕ್ರಮ ಕೈಗೊಳ್ಳಲು ಪ್ರಸ್ತಾವನೆ ಸಲ್ಲಿಸಲಾಗಿದೆ. -ಸುರೇಶ್‌, ಪ್ರಾಂಶುಪಾಲರು, ಕೊಂಬೆಟ್ಟು ವಿದ್ಯಾಸಂಸ್ಥೆ

 

– ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.