ಮಾದರಿ ಸರಕಾರಿ ಶಾಲೆಯಾಗುವತ್ತ ಕೂಕ್ರಬೆಟ್ಟು ಶಾಲೆ

ಸರಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿಯಿಂದ ಕೊಡುಗೆ

Team Udayavani, Jul 5, 2023, 3:43 PM IST

ಮಾದರಿ ಸರಕಾರಿ ಶಾಲೆಯಾಗುವತ್ತ ಕೂಕ್ರಬೆಟ್ಟು ಶಾಲೆ

ಬೆಳ್ತಂಗಡಿ: ಸವಲತ್ತಿನ ಆರೈಕೆಯಿಲ್ಲದೆ ಸೊರಗಿದ ಸರಕಾರಿ ಶಾಲೆಗಳನ್ನು ಮತ್ತೆ ನಳನಳಿಸುವ ಸಂಕಲ್ಪವೊಂದು° ಸರಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿಯೊಂದು ಕೈಗೆತ್ತಿಕೊಂಡಿದೆ. ಈ ಸಾಲಿನಲ್ಲಿ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕೂಕ್ರಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯೊಂದು ಸೇರ್ಪಡೆಗೊಂಡಿದೆ.

ನಾಲ್ಕು ವರ್ಷದ ಹಿಂದೆ 16 ಮಕ್ಕಳು ಶಿಕ್ಷಣ ಪಡೆಯುತ್ತಿದ್ದು ಮುಚ್ಚುವ ಸ್ಥಿತಿಗೆ ತಲುಪಿದ್ದ ಶಾಲೆಗೆ ಭೇಟಿ ನೀಡಿದ್ದ ಸರಕಾರಿ ಶಾಲೆ ಉಳಿಸಿ ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್‌ ಅಂಚನ್‌ ಅವರು ರಾತ್ರಿ ಅಲ್ಲೇ ವಸತಿ ಹೂಡಿ ಊರೆಲ್ಲ ಪ್ರವಾಸ ಕೈಗೊಂಡು ಹಳೆ ವಿದ್ಯಾರ್ಥಿಗಳು, ಊರವರು, ಶಾಲಾಭಿವೃದ್ಧಿ ಸಮಿತಿ, ಊರಿನ ಶಿಕ್ಷಣ ಪ್ರೇಮಿಗಳನ್ನು ಸೇರಿಸಿ ಶಾಲೆ ಉಳಿವಿಗೆ ಸಂಕಲ್ಪ ತೊಟ್ಟದ್ದಲ್ಲದೆ ಶಾಲೆಯನ್ನು ದತ್ತು ಪಡೆದರು.
1 ಕೋ.ರೂ.

ವೆಚ್ಚದಲ್ಲಿ 8 ಕೊಠಡಿ
ಅದರಂತೆ ಪ್ರಥಮ ವರ್ಷದಲ್ಲೇ ಎಲ್‌.ಕೆ.ಜಿ., ಯು.ಕೆ.ಜಿ. ಆರಂಭಿಸಿ ಒಟ್ಟು 7ನೇ ತರಗತಿವರೆಗೆ ನೂತನ ಕಟ್ಟಡ ರಚನೆಗೆ ಮುಂದಾದರು. ಒಟ್ಟು 8 ಕೊಠಡಿಯ ಕಟ್ಟಡ ನಿರ್ಮಾಣಕ್ಕೆ ಅಂದಾಜು 1 ಕೋ.ರೂ. ಕ್ರಿಯಾಯೋಜನೆ ರೂಪಿಸಲಾಗಿತ್ತು. ಇದಕ್ಕೆ ಸ್ಪಂದಿಸಿದ ಶಾಸಕ ಹರೀಶ್‌ ಪೂಂಜ ಅವರು ಆರಂಭದಲ್ಲಿ 45 ಲಕ್ಷ ರೂ. ಅನುದಾನ ಸಹಿತ ಗ್ರಂಥಾಲಯ ನಿಮಾರ್ಣಕ್ಕೆ ವಿಶೇಷ ಅನುದಾನದಡಿ 10 ಲಕ್ಷ ರೂ., ಸಂಸದರ ನಿಧಿಯಿಂದ 10 ಲಕ್ಷ ರೂ. ಸೇರಿ 65 ಲಕ್ಷ ರೂ. ಕೊಡಿಸಿದ್ದರು. ಉಳಿದಂತೆ ದಾನಿಗಳ ಸಹಕಾರದಲ್ಲಿ ಈಗಾಗಲೇ ಕಟ್ಟಡ ರಚನೆಯಾಗಿದ್ದು ಉಳಿದಂತೆ ಹೆಚ್ಚುವರಿ ಅನುದಾನದ ಭರವಸೆ ನೀಡಿದ್ದಾರೆ ಎಂದು ಪ್ರಕಾಶ್‌ ಅಂಚನ್‌ ತಿಳಿಸಿದ್ದಾರೆ.

ನೃತ್ಯ, ಕರಾಟೆ ತರಬೇತಿ
ಈಗಾಗಲೆ 4 ಖಾಯಂ ಶಿಕ್ಷಕರು ಹಾಗೂ 2 ಅತಿಥಿ ಶಿಕ್ಷಕರಿದ್ದು ಪ್ರಸಕ್ತ 180 ಮಕ್ಕಳು ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಶಾಲೆಯಲ್ಲಿ 300 ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುವ ಗುರಿ ಸರಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿಯದ್ದಾಗಿದೆ. ಇವರ ಸರಕಾರಿ ಶಾಲೆಯ ಉಳಿಸುವ ಯತ್ನಕ್ಕೆ ಶಿಕ್ಷಣ ಪ್ರೇಮಿಗಳಿಂದ ಮೆಚ್ಚುಗೆ ಪಾತ್ರವಾಗಿದೆ.

16 ರಿಂದ 180ಕ್ಕೇರಿದ ಮಕ್ಕಳ ಸಂಖ್ಯೆ
ಎಂ.ಆರ್‌.ಪಿ.ಎಲ್‌. ಸಿಎಸ್‌ಆರ್‌ ಫಂಡ್‌ನಿಂದ ಶೌಚಾಲಯ ನಿರ್ಮಾಣವಾಗಿದ್ದು, ಸರಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿಯ, ಶ್ರೀ ದುರ್ಗಾ ಚಾರಿಟೆಬಲ್‌ ಟ್ರಸ್ಟ್‌ ನ ವತಿಯಿಂದ ಈಗಾಗಲೇ ಶಾಲೆಗೆ ನೂತನ ಬಸ್‌ ನೀಡಲಾಗಿದೆ. ಎರಡು ಎಕ್ರೆ ಸ್ಥಳವಕಾಶವಿರುವ ಶಾಲೆಯಲ್ಲಿ ಸುಸಜ್ಜಿತ ಆಟದ ಮೈದಾನ ರಚಿಸಲಾಗಿದೆ. ಶಾಲೆಯಲ್ಲಿದ್ದ ಮಕ್ಕಳ ಸಂಖ್ಯೆ 16 ರಿಂದ ಈಗ 180ಕ್ಕೇರಿದೆ.

ಬಂಟ್ವಾಳ ದಡ್ಡಲಕಾಡು ಸರಕಾರಿ ಶಾಲೆಯನ್ನು ದತ್ತು ಪಡೆದು ರಾಜ್ಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದೇವೆ. ಇದೀಗ ಬೆಳ್ತಂಗಡಿ ತಾಲೂಕಿನ ಮರೋಡಿ ಕೂಕ್ರಬೆಟ್ಟು ಶಾಲೆಯನ್ನು ರಾಜ್ಯದಲ್ಲಿ ಎರಡನೇ ಮಾದರಿ ಸರಕಾರಿ ಶಾಲೆಯಾಗಿ ಗುರುತಿಸುವ ಕಾರ್ಯಯೋಜನೆ ನಮ್ಮದು. ಎಲ್ಲರ ಸಹಕಾರ ಸಿಕ್ಕಿದರೆ ಅದ್ಭುತ ರೀತಿಯಲ್ಲಿ ಶಾಲೆಯನ್ನು ರಚಿಸುವೆವು.
-ಪ್ರಕಾಶ್‌ ಅಂಚನ್‌,
ರಾಜ್ಯಾಧ್ಯಕ್ಷ, ಸರಕಾರಿ ಶಾಲೆ ಉಳಿಸಿ ಸಮಿತಿ

ಶಾಸಕ ಹರೀಶ್‌ ಪೂಂಜ ನೇತೃತ್ವದಲ್ಲಿ ಅಗಸ್ಟ್‌ ತಿಂಗಳಿನಲ್ಲಿ ನೂತನ ಕಟ್ಟಡದ ಉದ್ಘಾಟನೆ ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಶಾಲೆಯ ಸಂಪೂರ್ಣ ಅಭಿವೃದ್ಧಿ ದೃಷ್ಟಿಯಿಂದ ಜತೆಯಾಗಿ ಕೆಲಸ ಮಾಡಬೇಕಿದೆ.
-ಜಯಂತ್‌ ಕೋಟ್ಯಾನ್‌,
ಅಧ್ಯಕ್ಷ, ಕೂಕ್ರಬೆಟ್ಟು ಸರಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ

- ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.