ಬಾಳುಗೋಡು: ಕೊತ್ನಡ್ಕ ಕಿರು ಸೇತುವೆ ನನೆಗುದಿಗೆ


Team Udayavani, Apr 24, 2019, 5:45 AM IST

24

ಕೊತ್ನಡ್ಕ ಬಳಿ ಸೇತುವೆ ಕಾಮಗಾರಿ ಅರ್ಧಕ್ಕೆ ನಿಂತಿರುವುದು.

ಸುಬ್ರಹ್ಮಣ್ಯ: ಸೇತುವೆ ಇಲ್ಲದೆ ಇಲ್ಲಿಯ ಜನ ಸಂಕಷ್ಟಕ್ಕೆ ಸಿಲುಕಿದ್ದರು. ತಮ್ಮೂರಿಗೆ ಸಂಪರ್ಕಕ್ಕಾಗಿ ತುವೆಯೊಂದನ್ನು ನಿರ್ಮಿಸಿ ಕೊಡುವಂತೆ ಜನಪ್ರತಿನಿಧಿಗಳ ಮುಂದೆ ಕೊತ್ನಡ್ಕ ಗ್ರಾಮಸ್ಥರು ಬೇಡಿಕೆ ಇರಿಸಿದ್ದರು. ಒತ್ತಾಯಕ್ಕೆ ಮಣಿದು ನಾಲ್ಕು ವರ್ಷಗಳ ಹಿಂದೆ ಇಲ್ಲಿಗೆ ಕಿರು ಸೇತುವೆ ಮಂಜೂರುಗೊಂಡಿತ್ತು. ಸೇತುವೆ ನಿರ್ಮಾಣಕ್ಕೆ ಬೇಕಿರುವಷ್ಟು ಅನುದಾನ ದೊರಯದ ಕಾರಣ ಆಮೆಗತಿಯಲ್ಲಿಯೇ ಸಾಗಿದ ಕಾಮಗಾರಿ ಅಪೂರ್ಣವಾಗಿದೆ.

ಹರಿಹರ ಪಳ್ಳತ್ತಡ್ಕ ಗ್ರಾ.ಪಂ. ವ್ಯಾಪ್ತಿಯ ಬಾಳುಗೋಡು ಗ್ರಾಮದಲ್ಲಿ ಕೊತ್ನಡ್ಕ ಎನ್ನುವ ಊರಿದೆ. ತೀರಾ ಕುಗ್ರಾಮ ಎಣಿಸಿದ ಇಲ್ಲಿ ವಿರಳ ಸಂಖ್ಯೆಯ ಮನೆಗಳಿವೆ. ಬಾಳುಗೋಡು ಪೇಟೆಯಿಂದ ಐದಾರು ಕಿ.ಮೀ. ದೂರದ ಅರಣ್ಯದ ಅಂಚಿನಲ್ಲಿ ಈ ಪ್ರದೇಶವಿದೆ. ಕಾಡು ದಾರಿಯ ಮೂಲಕ ಕಚ್ಚಾ ರಸ್ತೆಯಲ್ಲಿ ಇಲ್ಲಿಗೆ ತೆರಳಬೇಕು. ದಾರಿ ಮಧ್ಯೆ ಹೊಳೆ ಹರಿಯುತ್ತದೆ. ಇಲ್ಲಿಯವರು ಈ ಹೊಳೆ ದಾಟಲು ಮಳೆಗಾಲದಲ್ಲಿ ಹರಸಾಹಸ ಪಡುತ್ತಾರೆ.

8.25 ಲಕ್ಷ ರೂ. ಬಿಡುಗಡೆ
ಬಹುಕಾಲದ ಬೇಡಿಕೆಯಂತೆ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಇಲ್ಲಿನ ಸಂಪರ್ಕಕ್ಕಾಗಿ ಕಿರು ಸೇತುವೆ ನಿರ್ಮಾಣಕ್ಕೆ 8.25 ಲಕ್ಷ ರೂ. ಅನುದಾನ ಬಿಡುಗಡೆಗೊಂಡಿತ್ತು. ಗುತ್ತಿಗೆದಾರರು ಕಾಮಗಾರಿಗೆ ಬೇಕಿರುವ ಸಾಮಗ್ರಿ ಸಂಗ್ರಹಿಸಿ ಕೆಲಸ ಆರಂಭಿಸಿದ್ದರು. ಪಿಲ್ಲರ್‌ ಕೆಲಸ ಸಾಗಿತ್ತು. ಕಳೆದ ಮೂರು ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕಾಮಗಾರಿ ಸ್ಥಗಿತಗೊಂಡಿತ್ತು. ಇದಕ್ಕೆ ಗುತ್ತಿಗೆದಾರರು ಕೊಟ್ಟಿರುವ ಕಾರಣ ಅನುದಾನ ಸಾಲುವುದಿಲ್ಲ ಎನ್ನುವುದಾಗಿತ್ತು. ಇನ್ನೂ ಬೇಕು 10 ಲಕ್ಷ ರೂ.!

ಕಿರು ಸೇತುವೆಯ ಕಾಮಗಾರಿ ಪೂರ್ಣಗೊಳಿಸಬೇಕಾದರೆ ಇನ್ನೂ ಹತ್ತು ಲಕ್ಷ ರೂ. ಅನುದಾನದ ಆವಶ್ಯಕತೆ ಇದೆ ಎಂದು ಸಂಬಂಧಪಟ್ಟವರು ಹೇಳುತ್ತಾರೆ. ದೊರೆತ ಅನುದಾನದಲ್ಲಿ ಸೇತುವೆ ಕಾಮಗಾರಿ ನಡೆಸಿದ್ದಾಗಿ ಹೇಳಿ ಗುತ್ತಿಗೆದಾರರು ಜಾಗ ಖಾಲಿ ಮಾಡಿದ್ದಾರೆ. ಸೇತುವೆಗೆ ಹಾಕಿದ ಪಿಲ್ಲರ್‌ ಪಾಳು ಬಿದ್ದಿದೆ. ಸೇತುವೆ ನಿರ್ಮಾಣಕ್ಕೆಂದು ತಂದು ಹಾಕಿದ್ದ ಸಾಮಗ್ರಿಗಳು ಕಾಣೆಯಾಗಿವೆ. ‌ ತುಕ್ಕು ಹಿಡಿದಿವೆ.

ನಿರ್ಲಕ್ಷ್ಯದ ಬಿಸಿ ತಟ್ಟಿತ್ತು
ಸತತ ಪ್ರಯತ್ನದ ಮೂಲಕ ಸೇತುವೆ ಮಂಜೂರುಗೊಂಡರೂ, ನಿರೀಕ್ಷಿತ ಅನುದಾನ ಸಿಗದೆ ಸೇತುವೆ ಪೂರ್ಣವಾಗದೆ ಇರುವುದು ಈ ಭಾಗದ ನಾಗರಿಕರಲ್ಲಿ ಬೇಸರ ತರಿಸಿದೆ. ಈ ಬಾರಿ ಚುನಾವಣೆ ವೇಳೆ ಮತ ಕೇಳಲು ಈ ಭಾಗಕ್ಕೆ ತೆರಳುವವರಿಗೆ ಇದರ ಬಿಸಿ ತಟ್ಟಿದೆ. ಚುನಾವಣೆ ಪ್ರಚಾರದ ವೇಳೆ ಇಲ್ಲಿನ ಮೂಲ ಸೌಕರ್ಯ ನಿರ್ಲಕ್ಷ್ಯದ ವಿಚಾರ ಕೂಡ ಚರ್ಚೆಗೆ ಬಂದಿತ್ತು. ಆದರೆ ಪ್ರತಿ ಭಾರಿ ಫಲಿತಾಂಶ ಶೂನ್ಯ.

ತೂಗು ಸೇತುವೆಯೇ ಆಧಾರ
ಶಾಲಾ ಮಕ್ಕಳು, ನಾಗರಿಕರು ಈ ರಸ್ತೆಯ ಮೂಲಕ ನಿತ್ಯವೂ ಓಡಾಡುತ್ತಾರೆ. ನಿತ್ಯವೂ ತಮ್ಮ ಬೇಡಿಕೆಗಳನ್ನು ಈ ರಸ್ತೆ ಮೂಲಕವೇ ಸಂಚರಿಸಿ ಪೂರೈಸಿಕೊಳ್ಳುತ್ತಾರೆ. ಈ ಊರಿಗೆ ಖಾಸಗಿ ಜೀಪು ಹೊರತುಪಡಿಸಿ ಇನ್ಯಾವುದೇ ವಾಹನ ಸೌಲಭ್ಯ ಕೂಡ ಇಲ್ಲ. ಪ್ರತಿ ವರ್ಷ ಮಳೆಗಾಲದಲ್ಲಿ ಹೊಳೆ ತುಂಬಿ ಹರಿಯುವ ಕಾರಣ ಸ್ಥಳೀಯರು ತಾತ್ಕಾಲಿಕ ಮರದ ತೂಗು ಸೇತುವೆ ನಿರ್ಮಿಸಿಕೊಂಡು ಹೊಳೆ ದಾಟುತ್ತಾರೆ.

ವಿಶೇಷ ಪ್ರಯತ್ನ
ಜಿ.ಪಂ. ಕ್ಷೇತ್ರಕ್ಕೆ ಹತ್ತು ಲಕ್ಷ ಅನುದಾನವಷ್ಟೇ ಲಭ್ಯವಿರುವುದು. ಹೀಗಾಗಿ ಅನುದಾನದ ಕೊರತೆ ಇದೆ. ಶಾಸಕರ ವಿಶೇಷ ಅನುದಾನವನ್ನು ಕೇಳಿಕೊಂಡು ಸೇತುವೆ ಕಾಮಗಾರಿ ಪೂರ್ಣಗೊಳಿಸಲು ವಿಶೇಷ ಪ್ರಯತ್ನ ನಡೆಸಲಾಗುವುದು. ಸ್ಥಳೀಯ ಜನಪ್ರತಿನಿಧಿಗಳ ಜತೆ ಈ ಕುರಿತು ಶೀಘ್ರವೇ ಚರ್ಚಿಸಲಾಗುವುದು.
– ಆಶಾ ತಿಮ್ಮಪ್ಪ ಜಿ.ಪಂ. ಸದಸ್ಯೆ, ಗುತ್ತಿಗಾರು ಕ್ಷೇತ್ರ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.