ಬಂಟ್ವಾಳದಲ್ಲೂ ಸಾರಿಗೆ ಸಂಚಾರ ಬಂದ್: ಖಾಸಗಿ ಬಸ್, ಕ್ಯಾಬ್ ಗಳತ್ತ ಮುಖ ಮಾಡಿದ ಜನ
Team Udayavani, Apr 7, 2021, 10:51 AM IST
ಬಂಟ್ವಾಳ: ಸಾರಿಗೆ ನೌಕರರ ಮುಷ್ಕರದ ಪರಿಣಾಮ ಬಂಟ್ವಾಳ ತಾಲೂಕಿನಲ್ಲೂ ಕೆಎಸ್ಆರ್ ಟಿಸಿ ಬಸ್ಸುಗಳು ಓಡಾಟ ಸ್ತಬ್ದಗೊಂಡಿದ್ದು, ಜನತೆ ಖಾಸಗಿ ಹಾಗೂ ಇತರ ವಾಹನಗಳ ಮೂಲಕ ತಮ್ಮ ಪ್ರಯಾಣ ಬೆಳೆಸುತ್ತಿದ್ದಾರೆ. ಸಾಕಷ್ಟು ಸಂಖ್ಯೆಯಲ್ಲಿ ಖಾಸಗಿ ಬಸ್ಸುಗಳ ಓಡಾಟವಿದ್ದು, ಹೀಗಾಗಿ ಹೆಚ್ಚಿನ ತೊಂದರೆ ಕಂಡುಬಂದಿಲ್ಲ.
ಆದರೆ ಓಡಾಟ ನಡೆಸುವ ಬಸ್ಸುಗಳಲ್ಲಿ ಹೆಚ್ಚಿನ ಜನಸಂಖ್ಯೆ ಕಂಡುಬಂದಿದೆ. ಪುತ್ತೂರು, ವಿಟ್ಲ, ಉಪ್ಪಿನಂಗಡಿ ಭಾಗಕ್ಕೆ ಕಾಂಟ್ರಾಕ್ಟ್ ಕ್ಯಾರೇಜ್ ಬಸ್ಸುಗಳಿದ್ದರೆ, ಬಿ.ಸಿ.ರೋಡಿನಿಂದ ಧರ್ಮಸ್ಥಳ ರಸ್ತೆಯ ಪುಂಜಾಲಕಟ್ಟೆ, ಮಡ್ಯಂತಾರು ಭಾಗಕ್ಕೆ ಕಾರು, ಮ್ಯಾಕ್ಸಿಕ್ಯಾಬ್ ನಂತಹ ವಾಹನಗಳು ಓಡಾಡುತ್ತಿವೆ.
ಇದನ್ನೂ ಓದಿ:ಉಡುಪಿ: ಕರ್ತವ್ಯಕ್ಕೆ ಹಾಜರಾಗದ ಕೆಎಸ್ಆರ್ ಟಿಸಿ ನೌಕರರು, ದೂರದೂರಿನ ಪ್ರಯಾಣಿಕರ ಪರದಾಟ
ಕೆಎಸ್ಆರ್ ಟಿಸಿ ಬಿ.ಸಿ.ರೋಡು ಡಿಪೋದಿಂದ ಯಾವುದೇ ಬಸ್ಸುಗಳು ಓಡಾಟ ನಡೆಸಿಲ್ಲ. ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಜನತೆ ನಿತ್ಯವೂ ಖಾಸಗಿ ಬಸ್ಸುಗಳನ್ನೇ ಅವಲಂಬಿಸಿದ್ದಾರೆ.
ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರ: ಖಾಸಗಿ ಬಸ್ ಓಡಾಟ, ಪ್ರಯಾಣಿಕರ ಪರದಾಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ