ಬಂಟ್ವಾಳಕ್ಕೆ ಆಗಮಿಸಿದ ಕೆಎಸ್‌ಆರ್‌ಟಿಸಿ ಐಸಿಯು ಬಸ್


Team Udayavani, Jul 11, 2021, 12:26 PM IST

ಬಂಟ್ವಾಳಕ್ಕೆ ಆಗಮಿಸಿದ ಕೆಎಸ್‌ಆರ್‌ಟಿಸಿ ಐಸಿಯು ಬಸ್

ಬಂಟ್ವಾಳ: ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಕೈ ಜೋಡಿಸುವ ನಿಟ್ಟಿನಲ್ಲಿ ಕೆಎಸ್‌ಆರ್‌ಟಿಸಿಯು ಸಾರಿಗೆ ಸುರಕ್ಷಾ-ಐಸಿಯು ಬಸ್ಸನ್ನು ವಿನ್ಯಾಸಗೊಳಿಸಿದ್ದು, ಬಂಟ್ವಾಳದ ಜನತೆಗೆ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಒಂದು ಐಸಿಯು ಬಸ್ಸು ಈಗಾಗಲೇ ಬಿ.ಸಿ.ರೋಡು ಕೆಎಸ್‌ಆರ್‌ಟಿಸಿ ಘಟಕವನ್ನು ತಲುಪಿದೆ.

ದ.ಕ, ಉಡುಪಿ, ಕೊಡುಗು ಜಿಲ್ಲೆಗಳನ್ನೊಳಗೊಂಡ ಮಂಗಳೂರು ಹಾಗೂ ಪುತ್ತೂರು ಕೆಎಸ್‌ಆರ್‌ಟಿಸಿ ವಿಭಾಗ ವ್ಯಾಪ್ತಿಯಲ್ಲಿ ಇದೇ ಮೊದಲ ಬಾರಿಗೆ ಕೆಎಸ್‌ಆರ್‌ಟಿಸಿ ಐಸಿಯು ಬಸ್ಸು ಬಂಟ್ವಾಳಕ್ಕೆ ಆಗಮಿಸಿದೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಜೂ. 17 ರಂದು ಉಪಮುಖ್ಯಮಂತ್ರಿ ಯಾಗಿರುವ ಸಾರಿಗೆ ಸಚಿವ ಲಕ್ಷಣ್ ಸವದಿ ಅವರನ್ನು ಭೇಟಿಯಾಗಿ ಐಸಿಯು ಬಸ್ಸು ನೀಡುವ ಕುರಿತು ಚರ್ಚಿಸಿದ್ದು, ಡಿಸಿಎಂ ಒಪ್ಪಿಗೆ ಸೂಚಿಸಿದ್ದರು.

ಬಿ.ಸಿ.ರೋಡು ಕೆಎಸ್‌ಆರ್‌ಟಿಸಿ ಘಟಕದಲ್ಲಿ ಈಗಾಗಲೇ ಬಸ್ಸಿನ ವ್ಯವಸ್ಥೆಗಳ ಕುರಿತು ತಾಂತ್ರಿಕ ಸಿಬಂದಿ ಪರಿಶೀಲಿಸಿದ್ದು, ಎಲ್ಲಾ ಘಟಕಗಳು ಕಾರ್ಯಾಚರಣೆಗಳ ಕುರಿತು ಪರಿಶೀಲನೆ ನಡೆಸಲಾಗಿದೆ. ಆಂಬ್ಯುಲೆನ್ಸ್ ರೀತಿಯಲ್ಲೇ ಸೈರನ್ ವ್ಯವಸ್ಥೆಯನ್ನು ಬಸ್ಸು ಒಳಗೊಂಡಿದ್ದು, ಒಳಭಾಗಕ್ಕೆ ಹೊಕ್ಕರೆ ಮಿನಿ ಕ್ಲಿನಿಕ್‌ನ ರೀತಿಯ ವ್ಯವಸ್ಥೆ ಇರುತ್ತದೆ. ಹಿಂದಿನ ಭಾಗದಲ್ಲಿ ರೋಗಿಗಳು ಪ್ರವೇಶಿಸುವ ವ್ಯವಸ್ಥೆ ಇರುತ್ತದೆ.

ಇದನ್ನೂ ಓದಿ: ಪೊಲೀಸರಿಗೆ ಮಾಸ್ಕ್ ಹಾಕಿಕೊಳ್ಳಿ ಎಂದ ಲಾರಿ ಚಾಲಕ! ವಿಡಿಯೋ ವೈರಲ್

ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಐಸಿಯು ಬಸ್ಸು ಎಲ್ಲಾ ವ್ಯವಸ್ಥೆಗಳನ್ನು ಒಳಗೊಂಡಿದ್ದು, ಐದು ಹಾಸಿಗೆಗಳು, ಪ್ರತಿ ಬೆಡ್‌ಗಳಿಗೂ ಆಕ್ಸಿಜನ್ ವ್ಯವಸ್ಥೆ, ರೋಗಿಗಳ ರಕ್ತದೊತ್ತಡ, ಆಕ್ಸಿಜನ್ ಪ್ರಮಾಣ, ಇಸಿಜಿ, ತಾಪಮಾನ ಮೊದಲಾದವುಗಳನ್ನು ಮಾನಿಟರ್ ಮಾಡುವ ವ್ಯವಸ್ಥೆ ಇರುತ್ತದೆ. ಐವಿ ವ್ಯವಸ್ಥೆ, ವೆಂಟಿಲೇಟರ್ ಅಳವಡಿಸುವ ಸೌಲಭ್ಯ, ತುರ್ತು ಔಷಧ ವ್ಯವಸ್ಥೆ, ತುರ್ತು ಅಗತ್ಯಗಳಿಗೆ ಜನರೇಟರ್ ವ್ಯವಸ್ಥೆಯೂ ಇದೆ. ಜತೆಗೆ ನೋಟಿಸ್ ಬೋರ್ಡ್, ರೋಗಿಗಳ ಶೀಘ್ರ ಗುಣಮುಖರಾಗುವ ಕುರಿತು ಬರಹಗಳು ಕೂಡ ಇವೆ.

ಜು.13 ರಂದು ಶಾಸಕ ರಾಜೇಶ್ ನಾಯ್ಕ್ ಅವರ ನೇತೃತ್ವದಲ್ಲಿ ಪೊಳಲಿ ಕ್ಷೇತ್ರದಲ್ಲಿ ಸಾರಿಗೆ ಸುರಕ್ಷಾ ಐಸಿಯು ಬಸ್ಸಿಗೆ ಚಾಲನೆ ದೊರೆಯಲಿದ್ದು, ಬಳಿಕ ಬಂಟ್ವಾಳ ಪ್ರತಿ ಗ್ರಾಮಗಳಿಗೆ ತೆರಳಿ ಸಂಚಾರಿ ಆಸ್ಪತ್ರೆಯ ರೀತಿಯಲ್ಲಿ ಬಸ್ಸು ಕಾರ್ಯನಿರ್ವಹಿಸಲಿದೆ. ಆರೋಗ್ಯ ಇಲಾಖೆಯ ವೈದ್ಯರು ಹಾಗೂ ಸಿಬಂದಿ ರೋಗಿಗಳ ತಪಾಸಣೆಯ ಜತೆಗೆ ಅಗತ್ಯ ಔಷಧ ನೀಡುವ ಕಾರ್ಯ ನಿರ್ವಹಿಸಲಿದ್ದಾರೆ. ಈ ಬಸ್ಸು ಕ್ರಮವಾಗಿ ಸಂಚರಿಸಿದರೆ ಸರಾಸರಿಯಾಗಿ 2 ತಿಂಗಳಿಗೊಮ್ಮೆ ಬಸ್ಸು ಒಂದು ಗ್ರಾಮಕ್ಕೆ ಭೇಟಿ ನೀಡಲಿದೆ ಎಂದು ಮೂಲಗಳು ತಿಳಿಸಿವೆ.

ಶಾಸಕ ರಾಜೇಶ್ ನಾಯ್ಕ್ ಅವರ ವಿಶೇಷ ಪ್ರಯತ್ನದಿಂದ ಬಸ್ಸು ಬಂಟ್ವಾಳಕ್ಕೆ ಆಗಮಿಸಿದ್ದು, ಅವರ ನಿರ್ದೇಶನದಂತೆ ಹಳ್ಳಿ ಹಳ್ಳಿಗೆ ತೆರಳಿ ಸಂಚಾರಿ ಆಸ್ಪತ್ರೆಯ ರೀತಿಯಲ್ಲಿ ಬಸ್ಸು ಕೆಲಸ ಮಾಡುತ್ತದೆ. ಘಟಕದ ಚಾಲಕರು ಅದರ ಚಾಲನೆ ಮಾಡಲಿದ್ದು, ಆರೋಗ್ಯ ಇಲಾಖೆ ವೈದ್ಯರು, ಸಿಬಂದಿ ರೋಗಿಗಳ ತಪಾಸಣೆ ನಡೆಸಲಿದ್ದಾರೆ. ಪ್ರತಿದಿನ ಬಸ್ಸು ಬಿ.ಸಿ.ರೋಡು ಘಟಕಕ್ಕೆ ಆಗಮಿಸಲಿದೆ.-ಶ್ರೀಶ ಭಟ್ ಘಟಕ ವ್ಯವಸ್ಥಾಪಕರು, ಕೆಎಸ್‌ಆರ್‌ಟಿಸಿ, ಬಿ.ಸಿ.ರೋಡು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.