ಕುದ್ಮಾರು: ಕಾಂಗ್ರೆಸ್ ಮತಯಾಚನೆ
Team Udayavani, May 9, 2018, 4:25 PM IST
ಬೆಳಂದೂರು: ವಿಧಾನಸಬಾ ಚುನಾವಣೆ ಹಿನ್ನೆಲೆಯಲ್ಲಿ ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ| ರಘು ಅವರ ಪರ ಕುದ್ಮಾರು, ಪಟ್ಟೆ, ಬೆಳಂದೂರು, ಪುಚ್ಚೆತ್ತೋಡಿ ಮೊದಲಾದೆಡೆ ಮತ ಯಾಚಿಸಲಾಯಿತು.
ಸುಳ್ಯ ವಿಧಾನಸಭಾ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ ಸದಸ್ಯ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು ಮಾತನಾಡಿ, ಕಾಂಗ್ರೆಸ್ ಯಾವತ್ತೂ ಅಭಿವೃದ್ಧಿ ಪರ ಚಿಂತನೆಯುಳ್ಳ ಪಕ್ಷ, ರಾಜಕೀಯಕ್ಕಾಗಿ ಪಕ್ಷ ಕಾರ್ಯ ನಿರ್ವಹಿಸದೆ ಜನಪರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಸಿದ್ದರಾಮಯ್ಯ ನೇತೃತ್ವದ ಸರಕಾರ ಜಾರಿಗೊಳಿಸಿದ ಹಲವು ಕಲ್ಯಾಣ ಕಾರ್ಯಗಳು ಗೆಲುವಿಗೆ ಪೂರಕವಾಗಲಿವೆ ಎಂದರು.
ಬೆಳಂದೂರು ಗ್ರಾ.ಪಂ. ಸದಸ್ಯೆ ಗೌರಿ ಸಂಜೀವ, ಜಯಾನಂದ ಕೆಡೆಂಜಿ, ಸುಂದರ ನಡುಗುಡ್ಡೆ, ನಾರಾಯಣ ಜನತಾ ಗೃಹ, ರಝಾಕ್ ಜನತಾ ಗೃಹ, ಕುಶಾಲಪ್ಪ ಕೆಡೆಂಜಿ, ಮೋಹನ್ ಕೆಡೆಂಜಿ, ಬಾವು ಬರೆಪ್ಪಾಡಿ ಮುಂತಾದವರು ಮತಯಾಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ